ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ

Source: sonews | By Staff Correspondent | Published on 26th November 2018, 1:27 AM | Coastal News | Don't Miss |

ಮುಂಡಗೋಡ:  ತಾಲೂಕಿನ ನಂದಿಪುರ ಗ್ರಾಮದ ರೈತನೊಬ್ಬ ಶನಿವಾರ ಸಂಜೆ ಸಾಲಬಾಧೆ ತಾಳಲಾರದೇ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹನುಮಂತ ರಾಮಣ್ಣ ವಡ್ಡರ(38) ಮೃತಪಟ್ಟ ರೈತ. ತಂದೆ ಹೆಸರಿನಲ್ಲಿದ್ದ ಜಮೀನಿನಲ್ಲಿ ಈ ಬಾರಿ ಗೋವಿನ ಜೋಳದ ಬೆಳೆಯನ್ನು ಬೆಳೆಯಲು ಖಾಸಗಿ ಸಾಲವನ್ನು ಮತ್ತು ಮನೆಯ ಖರ್ಚಿಗಾಗಿ ಕೈ ಸಾಲವನ್ನು ಮಾಡಿದ್ದನು ಎನ್ನಲಾಗಿದ್ದು ಗೋವಿನ ಜೋಳದ ಬೆಳೆಯ ಇಳುವರಿ ಕಡಿಮೆಯಾಗಿದ್ದರಿಂದ ಸಾಲವನ್ನು ತೀರಿಸಲಾಗದೇ ಮನನೊಂದು ತನ್ನ ಮನೆಯಲ್ಲಿನ ಕೋಣೆಯ ಮೇಲ್ಚಾವಣಿಗೆ ಹಗ್ಗದಿಂದ ಬಿಗಿದುಕೊಂಡು ನೇಣು ಹಾಕಿಕೊಂಡಿದ್ದಾನೆಂದು ಮೃತನ ತಂದೆ  ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.     

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...