ವಾಹನ ಸಮೇತ ಸುಮಾರು ೫ಲಕ್ಷ ಮೌಲ್ಯದ ಸಾಗವಾನಿ ಕಟ್ಟಿಗೆ ವಶ 

Source: S O News service | By Staff Correspondent | Published on 29th January 2017, 11:52 PM | Coastal News | Incidents | Don't Miss |

ಮುಂಡಗೋಡ : ತಾಲೂಕಿನ ಕ್ಯಾತ್ನಳ್ಳಿ ಅರಣ್ಯ ಪ್ರದೇಶದಲ್ಲಿ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸಲು ಬಚ್ಚಿಟ್ಟಿದ್ದ ೫ಲಕ್ಷರೂ. ಮೌಲ್ಯದ ಸಾಗವಾನಿ ಕಟ್ಟಿಗೆಯನ್ನು ರವಿವಾರ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ವಶಪಡಿಸಿಕೊಂಡ ಘಟನೆ ನಡೆದಿದೆ.
ಈ ಕಾರ‍್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ನಾಗರಾಜ ಕಲಾಲ, ಸಿಬ್ಬಂದಿಗಳಾದ ಬೋಜು ಚವ್ಹಾಣ, ಸಿದ್ದು, ರೇವಣ್ಣ ಬಿರಾದಾರ, ಅಬ್ದುಲ, ನಾಸಿರ, ದೊಂಡು, ಸುರೇಶ, ನಾರಾಯಣ ಇದ್ದರು.
ಸಾಗವಾನಿ ಕಟ್ಟಿಗೆ ಮತ್ತು ವಾಹನವನ್ನು (ವಾಹನ ನಂ. ಕೆ.ಎ.೨೦ಎ ೮೫೬೨) ಅರಣ್ಯ ಇಲಾಖೆಯ ವಶದಲ್ಲಿದ್ದು ಆರೋಪಿಗಳ ಪತ್ತೆಗಾಗಿ ಶೋಧನಾ ಕಾರ‍್ಯ ನಡೆದಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...