ಸಮುದ್ರಪಾಲಾಗುತ್ತಿದ್ದ ವ್ಯಕ್ತಿಗೆ ಲೈಪ್ ನೀಡಿದ ’ಲೈಫ್ ಗಾರ್ಡ್’

Source: sonews | By Staff Correspondent | Published on 20th August 2017, 11:04 PM | Coastal News | State News | Special Report | Don't Miss | NewsVoir |

ಭಟ್ಕಳ: ಮುರುಡೇಶ್ವರದ ಸಮುದ್ರ ದಡದಲ್ಲಿ ಈಜಾಡುತ್ತಿದ್ದ ಪ್ರವಾಸಿಯೊಬ್ಬರು ಸಮುದ್ರದಲೆಗೆ ಸಿಲುಕಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾಗ ಉ.ಕ.ಜಿಲ್ಲಾಡಳಿತದಿಂದ ನಿಯುಕ್ತಿಗೊಂಡಿರುವ ಲೈಪ್ ಗಾರ್ಡ್ ಗಳ ಕೂಡಲೆ ಸಮುದ್ರಪಾಲಾಗುತ್ತಿದ್ದ ವ್ಯಕ್ತಿಯನ್ನು ಉಳಿಸಿ ಆತನಿಗೆ ”ಲೈಫ್’ ನೀಡಿದ ಘಟನೆ ರವಿವಾರ ಮುರುಡೇಶ್ವರದಲ್ಲಿ ನಡೆದಿದೆ.

ಪ್ರಾಣಾಪಾಯದಿಂದ ಪಾರಾದ ಪ್ರವಾಸಿಯನ್ನು ತಮಿಳುನಾಡಿನ ಜೈಕಾಂತ್(೨೨) ಎಂದು ಗುರುತಿಸಲಾಗಿದ್ದು, ಇವರು ಸಮುದ್ರದಲ್ಲಿ ಈಜಾಡುತ್ತಿದ್ದಾಗ ಅಕಸ್ಮಿಕವಾಗಿ ಬಂದ ಅಲೆಯೊಂದು ಅವರನ್ನು ಸಮುದ್ರದಲ್ಲಿ ಮುಳುಗಿಸಿ ಸಾವೆನೆಡೆ ಸೆಳೆದುಕೊಂಡು ಹೋಗುತ್ತಿತ್ತು ಎನ್ನಲಾಗಿದ್ದು ಅಲ್ಲೆ ಕರ್ತವ್ಯನಿರತರಾಗಿದ್ದ ಲೈಫ್ ಗಾರ್ಡ್ ರೋಹಿತ್ ಮತ್ತು ಜಯರಾಂ ಎನ್ನುವವರೂ ತಮ್ಮ ಪ್ರಾಣವನ್ನು ಲೆಕ್ಕಿಸದೆ ಸಮುದ್ರಪಾಲಾಗುತ್ತಿದ್ದ ಜಯಂತ್ ರನ್ನು ಸುರಕ್ಷಿತವಾಗಿ ದಡಕ್ಕೆ ತರುವಲ್ಲಿ ಯಶಸ್ವಿಯಾದರು ಎಂದು ಹೇಳಲಾಗಿದೆ.

ಪ್ರವಾಸಿಗರು ಸಮುದ್ರದಲ್ಲಿ ಸಿಲುಕಿ ಸಾಯುವ ಪ್ರಕರಣಗಳು ದಿನೆ ದಿನೆ ಹೆಚ್ಚಾಗುತ್ತಿರುವುದನ್ನು ಗಮನಿಸಿದ ಇಲ್ಲಿನ ಜಿಲ್ಲಾಡಳಿತ ಕಾರವಾರ, ಗೋಕರ್ಣ ಹಾಗೂ ಮುರುಡೇಶ್ವರ ದಲ್ಲಿ ಪ್ರವಾಸಿಗರ ಸುರಕ್ಷೆಗೆಂದೇ ಲೈಫ್ ಗಾರ್ಡ್‌ಗಳನ್ನು ನೇಮಿಸಿದೆ. ಕೆಲ ದಿನಗಳ ಹಿಂದೆ ಗೋಕರ್ಣದಲ್ಲಿಯೂ ಲೈಫ್ ಗಾರ್ಡ್‌ಗಳು ಸಮುದ್ರಪಾಲಾಗುತ್ತಿದ್ದ ಪ್ರವಾಸಿಗರನ್ನು  ರಕ್ಷಿಸಿದ ಬೆನ್ನಲ್ಲೆ ಮುರಡೇಶ್ವರದ ಲೈಫ್ ಗಾರ್ಡ್‌ಗಳಿಂದಲೂ ಪ್ರವಾಸಿಗರ ಪ್ರಾಣಾ ರಕ್ಷಣೆಯಾಗಿದೆ. ಇದಕ್ಕಾಗಿ ಜನರು ಉತ್ತರಕನ್ನಡ ಜಿಲ್ಲಾಡಳಿತವನ್ನು ಅಭಿನಂದಿಸಿದ್ದಾರೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...

ಜಿಲ್ಲೆಯಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯವ ನೀರು ಪೂರೈಸಲು ಅಗತ್ಯ ಕ್ರಮ : ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ...