ಮುರ್ಡೆಶ್ವರ: ಪ್ರವಾಸಿಗರಿಗೆ ರಕ್ಷಣೆ ಮಾಡಿದ ಜೀವರಕ್ಷಕ ಸಿಬ್ಬಂದಿ*

Source: so news | By MV Bhatkal | Published on 17th June 2018, 7:10 PM | Coastal News | Don't Miss |

ಭಟ್ಕಳ:ಪ್ರವಾಸಕ್ಕೆ ಬಂದು ಮುರ್ಡೆಶ್ವರದ ಕಡಲ ತೀರದಲ್ಲಿ ಅಬ್ಬರದ ಸುಳಿಗೆ ಸಿಲುಕಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಬೆಂಗಳೂರು ಮೂಲದ ಪ್ರವಾಸಿಗನನ್ನು ಇಲ್ಲಿನ ಜೀವರಕ್ಷಕ ದಳದ ಸಿಬ್ಬಂದಿ ಭಾನುವಾರ ರಕ್ಷಿಸಿದ್ದಾರೆ.

ಬೆಂಗಳೂರು ಮೂಲದ ಯುವರಾಜ ಕನ್ನಪ್ಪ ರಕ್ಷಣೆಗೊಳಗಾದ ಪ್ರವಾಸಿಗ. ಮುರ್ಡೆಶ್ವರದ ಪ್ರವಾಸಕ್ಕೆಂದು ಭಾನುವಾರ ಬಂದಿದ್ದ ಇವರು, ಈ ವೇಳೆ ಸಮುದ್ರಕ್ಕೆ ಇಳಿದಿದ್ದರು. ಕಡಲಿನ ಅಬ್ಬರ ಬಿರುಸುಗೊಳ್ಳುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದರು. ಇದನ್ನು ಗಮನಿಸಿದ ಜೀವರಕ್ಷಕ ಸಿಬ್ಬಂದಿ ಜಯರಾಮ ಕುಪ್ಪ ಹರಿಕಾಂತ ಹಾಗೂ ಮಂಜುನಾಥ ಹರಿಕಾಂತ ನೀರಿಗೆ ಧುಮುಕಿ ಅವರನ್ನು ಸುರಕ್ಷಿತವಾಗಿ ದಡಕ್ಕೆ ಎಳೆದು ತಂದಿದ್ದಾರೆ. ತಿಂಗಳೊಳಗೆ ಇದು 2ನೇ ಪ್ರಕರಣ. ಈ ಹಿಂದೆಯೂ ಮೂವರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ. ಆದರೆ, ಇಲ್ಲಿ ಇಷ್ಟೆಲ್ಲ ಘಟನೆಗಳು ನಡೆದರೂ ಒಂದೂ ಆಂಬುಲೆನ್ಸ್ ವ್ಯವಸ್ಥೆ ಇಲ್ಲ. ಹೀಗಾಗಿ ತುರ್ತು ಚಿಕಿತ್ಸೆ ನೀಡಲು ಜೀವರಕ್ಷಕ ಸಿಬ್ಬಂದಿ ಪರದಾಡುವಂತಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...