ಕಾಮನ್ ಸಿವಿಲ್ ಕೋಡ್: ಸುಪ್ರಿಮ್‌ಕೋರ್ಟ್ ನಿರ್ಣಯಕ್ಕೆ ಬದ್ದ-ವಲಿ ರಹ್ಮಾನಿ

Source: S O News service | By Staff Correspondent | Published on 22nd December 2016, 6:32 PM | Coastal News | State News | National News | Islam | Don't Miss |

ಭಟ್ಕಳ: ಸಮಾನ ನಾಗರಿಕ ಸಂಹಿತೆ ಜಾರಿ ಕುರಿತಂತೆ ದೇಶದ ಉಚ್ಚನ್ಯಾಯಾಲಯದ ನಿರ್ಣಯಕ್ಕೆ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ಬದ್ದವಾಗಿರುತ್ತದೆ ಎಂದು ಆಲ್ ಇಂಡಿಯಾ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೌಲಾನ ವಲಿ ರಹ್ಮಾನಿ ಹೇಳಿದರು. 
ಅವರು ಗುರುವಾರ ಇಲ್ಲಿನ ಜಾಮಿಯಾ ಇಸ್ಲಾಮಿಯ ಶಿಕ್ಷಣ ಸಂಸ್ಥೆಯಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು. 
ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಕುರಿತಂತೆ ಉಂಟಾಗಿರುವ ಈ ಸಂದರ್ಭದಲ್ಲಿ ಬೋರ್ಡ್‌ನ ಹೇಳಿಕೆ ಅತ್ಯಂತ ಮಹತ್ವ ಪಡೆದುಕೊಂಡಿದೆ. 
ದೇಶದಲ್ಲಿ ಸಮಾನ ನಾಗರೀಕ ಸಂಹಿತೆ ಜಾರಿ ಅಸಾಧ್ಯವಾಗಿದ್ದು ಸರ್ಕಾರ ಯಾವ ಅದರ ಸ್ವರೂಪವನ್ನು ಸ್ಪಷ್ಟಪಡಿಸಬೇಕು. ಭಾರತೀಯ ಸಂವಿಧಾನ ಇಲ್ಲಿನ ಪ್ರತಿಯೊಬ್ಬರಿಗೆ ತಮ್ಮ ಧರ್ಮದಂತೆ ಜೀವಿಸುವ ಹಕ್ಕನ್ನು ನೀಡುತ್ತದೆ. ಸರ್ಕಾರ ಸಮಾನ ನಾಗರೀಕ ಸಂಹಿತೆ ಜಾರಿಗೊಳಿಸಲು ಮುಂದಾಗಿರುವುದು ಸಂವಿಧಾನ ತನ್ನ ದೇಶದ ನಾಗರಿಕರಿಗೆ ನೀಡಿರುವ ಹಕ್ಕುಗಳ ದಮನ ಮಾಡಿದಂತಾಗುತ್ತದೆ ಎಂದ ಅವರು ಸುಪ್ರಿಮ್ ಕೋರ್ಟ್ ನಿರ್ಣಯ ನಾವು ಗೌರವಿಸುತ್ತೇವೆ. ಕೆಲವರು ಮನಸ್ಸಿಗೆ ಬಂದಂತೆ ಮುಸ್ಲಿಮ್ ಪರ್ಸನಲ್ ಲಾ ವನ್ನು ವ್ಯಾಖ್ಯಾನಿಸುತ್ತಿದ್ದಾರೆ. ಇದು ಇಸ್ಲಾಮ್ ಧರ್ಮದ ಕುರಿತ ಅಲ್ಪಜ್ಞಾನದ ಪರಿಣಾವಾಗಿದೆ ಎಂದ ಅವರು ಯಾವುದೇ ಕಾರಣಕ್ಕೂ ಮುಸ್ಲಿಮರು ತಮ್ಮ ವ್ಯಯಕ್ತಿಕ ಜೀವನದಲ್ಲಿ ಇತರರು ಮೂಗು ತೂರಿಸುವುದನ್ನು ಸಹಿಸುವುದಿಲ್ಲ ತಲಾಖ್ ಎಂಬ ಪದ ಮಕ್ಕಳ ಆಟಿಕೆಯಲ್ಲಿ ಅದನ್ನು ಎಲ್ಲಿ, ಯಾವಾಗ ಬೇಕಾದರು ಬಳಸಿಕೊಳ್ಳುವಂತಿಲ್ಲ. ಇದರ ಸ್ವರೂಪವನ್ನು ಅರಿತುಕೊಂಡು ಈ ಪದವನ್ನು ಬಳಸಬೇಗಾತ್ತದೆ ಅಜ್ಞಾನ ಹಾಗೂ ಕೋಪದಲ್ಲಿ ಈ ಬದವನ್ನು ಬಳಸಿದರೆ ಅದರ ಪ್ರತಿಫಲ ಖಂಡಿತವಾಗಿ ಅವನು ಅನುಭವಿಸಲೇಬೆಕು. ತಪ್ಪು ಪತಿ ಪತ್ನಿ ಯಾರೇ ಮಾಡಲಿ ಅದು ತಪ್ಪೇ ಆಗಿದೆ. ಯಾವುದೆ ತಪ್ಪು ಮಾಡದೆ ಕೆಲವೊಮ್ಮೆ ಗಂಡ ಅಥವಾ ಹೆಂಡತಿಗೆ ಅನ್ಯಾಯವಾಗಬಹುದು. ಆದರೆ ತಲಾಖ್ ಪದ ಉಚ್ಚಾರವೆ ಬಹಳ ಜಾಗರೂಕತೆಯಿಂದ ಉಪಯೋಗಿಸುವಂತಹದ್ದು, ಕೊಲೆ ಮಾಡಿದ ನಂತರ ವ್ಯಕ್ತಿ ಪಶ್ಚತ್ತಾಪಪಟ್ಟರೆ ಕೊಲ್ಲಲ್ಲಪಟ್ಟ ವ್ಯಕ್ತಿ ಮರಳಿ ಜೀವಂತವಾಗಲು ಹೇಗೆ ಸಾಧ್ಯವಿಲ್ಲೂ ಹಾಗೆ ಒಮ್ಮೆ ತಲಾಖ್ ನೀಡಿದರೆ ಅದು ಮತ್ತೆ ಮರಳಿ ಪಡೆಯುವಹಾಗಿಲ್ಲ ಎಂದು ಸ್ಪಷ್ಟನೆ ನೀಡಿದ ಅವರು ತಲಾಖ್ ಪತಿಪತ್ನಿ ಬೇರ್ಪಡುವ ಕಟ್ಟಕಡೆಯ ಅಸ್ತ್ರವಾಗಿದೆ. ಇದನ್ನು ಬಳಸುವಾಗ ಯೋಚನೆ ಮಾಡಬೇಕಷ್ಟೆ. ತಿಳಿವಳಿಕೆಯಿಲ್ಲದೆ ಜನರು ಇದನ್ನು ದುರೂಪಯೋಗ ಮಾಡಿಕೊಳ್ಳುತ್ತಿದ್ದು ಮುಸ್ಲಿಮ್ ಪರ್ನಲ್ ಲಾ ಬೋರ್ಡ್ ಈ ಕುರಿತಂತೆ ಸಮಾಜದಲ್ಲಿ ಜಾಗೃತಿಯನ್ನುಂಟು ಮಾಡುವ ಯೋಜನೆಯನ್ನು ರೂಪಿಸಿದೆ. 
ಭಾರತದಂತಹ ಜಾತ್ಯಾತೀತ ರಾಷ್ಟ್ರದಲ್ಲಿ ಏಕರೂಪ ನಾಗರಿಕ ಕಾನೂನು ಜಾರಿಗೊಳಿಸುವುದು ಸುಲಭವಲ್ಲ. ಇಲ್ಲಿ ಪ್ರತಿಯೊಂದು ಸಮುದಾಯಕ್ಕೆ ತನ್ನದೇ ಆದ ವ್ಯಯಕ್ತಿಕ ಕಾನೂನುಗಳಿವೆ. ಮದುವೆ, ವಿವಾಹ, ಕುಟಂಬ ವ್ಯವಸ್ಥೆ ಎಲ್ಲ ರೀತಿಯಿಂದ ಭಿನ್ನವಾಗಿವೆ. ಆದ್ದರಿಂದ ಏಕ ರೂಪ ನಾಗರಿಕ ಸಂಹಿತೆಯನ್ನು ಕೇವಲ ಮುಸ್ಲಿಮರು ಮಾತ್ರ ವಿರೋಧಿಸುವುದಿಲ್ಲ. ಬದಲಾಗಿ ಇಲ್ಲಿನ ಹಲವು ಸಮುದಾಯದವರು ಈಗಾಗಲೆ ಇದನ್ನು ವಿರೋಧಿಸಿ ಸುಪ್ರಿಮ್ ಕೋರ್ಟ್‌ನಲ್ಲಿ ದಾವೆಯನ್ನು ಹೂಡಿದ್ದಾರೆ ಎಂದರು. ಸರ್ಕಾರ ಈ ಕುರಿತಂತೆ ಬೋರ್ಡನೊಂದಿಗೆ ಮಾತುಕತೆ ನಡೆಸಲು ಉದ್ದೇಶಿಸಿದರೆ ಇದಕ್ಕೆ ಬೋರ್ಡ್ ಸಿದ್ದವಿದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಖಂಡಿತ ಈ ಕುರಿತು ಬೋರ್ಡ್ ಸರ್ಕಾರದೊಂದಿಗಿನ ಮಾತುಕತೆಗೆ ಸಿದ್ದವಿದೆ ಎಂದರು. ಸುಪ್ರಿಮ್ ಕೋರ್ಟ್ ತೀರ್ಮಾನ ಒಪ್ಪಲು ಸಿದ್ದರಿರುವ ತಾವು ನಾಗರೀಕ ಸಂಹಿತೆಯನ್ನು ವಿರೋಧಿಸುತ್ತಿರುವುದು ಸೂಕ್ತವೇ ಎಂಬ ಪ್ರಶ್ನೆಗೆ, ಹೌದು ನಮಗೆ ನಮ್ಮ ಸಂವಿಧಾನ ಈ ಹಕ್ಕನ್ನು ನೀಡಿದೆ. ನಮಗೆ ಸರಿಕಾಣದ ಎಲ್ಲ ವಿಷಯಗಳನ್ನು ವಿರೋಧಿಸುವ ಹಕ್ಕು ನಮಗಿದೆ ಎಂದರು. ಯಾವುದೇ ಕಾರಣಕ್ಕೂ ಶರಿಯತ್ ನಲ್ಲಿ ಹಸ್ತಕ್ಷೇಪ ಸಲ್ಲದು ಇದಕ್ಕಾಗಿ ಮುಸ್ಲಿಮರು ಬೋರ್ಡ್‌ನ ಬ್ಯಾನರ್ ನಡಿ ದೇಶದದ್ಯಾಂತ ಕಾನೂನು ಹೋರಾಟಕ್ಕೆ ಸಿದ್ದ ಎಂದೂ ಅವರು ಹೇಳಿದರು. 
ಈ ಸಂದರ್ಭದಲ್ಲಿ ಮಜ್ಲಿಸೆ ಇಸ್ಲಾಹ್-ವ-ತಂಝೀಂ ಅಧ್ಯಕ್ಷ ಮುಝಮ್ಮಿಲ್ ಖಾಝಿಯಾ, ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಖರೂರಿ, ಮಾಧ್ಯಮ ಸಂಚಾಲಕ ಡಾ.ಮುಹಮ್ಮದ್ ಹನೀಫ್ ಶಬಾಬ್, ಎಂ.ಜೆ.ಅಬ್ದುಲ್ ರಖೀಬ್ ಮತ್ತಿತರರು ಉಪಸ್ಥಿತಿತರಿದ್ದರು.  

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಟ್ಕಳ: ಕುರಾನ್ ಕಂಠಪಾಠ ಮಾಡಿದ ಮರ್ಕಝಿ ಖಲಿಫಾ ಜಮಾಅತುಲ್ ಮುಸ್ಲಿಮೀನ್ ಚೀಫ್ ಖಾಝಿ

ಭಟ್ಕಳ: ಇಲ್ಲಿನ ಖಲಿಫಾ ಮರ್ಕಝಿ ಜಮಾಅತುಲ್ ಮುಸ್ಲಿಮೀನ್ ನ ಚೀಫ್ ಖಾಜಿ ಹಾಗೂ ಜಾಮಿಯಾ ಇಸ್ಲಾಮಿ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಮೌಲಾನ ...

ಜಿಲ್ಲಾಮಟ್ಟದ ಸೀರತ್ ಪ್ರಬಂಧ ಸ್ಪರ್ಧೆ ಫಲಿತಾಂಶ; ಹೊನ್ನಾವರದ ಜಿ.ಎಸ್.ಹೆಗಡೆ ಪ್ರಥಮ

ಭಟ್ಕಳ: ‘ಪ್ರವಾದಿ ಮುಹಮ್ಮದ್(ಸ) ಎಲ್ಲರಿಗಾಗಿ’ ಸೀರತ್ ಅಭಿಯಾನದ ಅಂಗವಾಗಿ ‘ಪ್ರವಾದಿ ಮುಹಮ್ಮದ್(ಸ) ಮತ್ತು ಸಮಾನತೆ’ ಎಂಬ ವಿಷಯದಲ್ಲಿ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...