ಭಟ್ಕಳ: ಸಮಾನ ನಾಗರಿಕ ಸಂಹಿತೆ ಜಾರಿ ಕುರಿತಂತೆ ದೇಶದ ಉಚ್ಚನ್ಯಾಯಾಲಯದ ನಿರ್ಣಯಕ್ಕೆ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ಬದ್ದವಾಗಿರುತ್ತದೆ ಎಂದು ಆಲ್ ಇಂಡಿಯಾ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೌಲಾನ ವಲಿ ರಹ್ಮಾನಿ ಹೇಳಿದರು.
ಅವರು ಗುರುವಾರ ಇಲ್ಲಿನ ಜಾಮಿಯಾ ಇಸ್ಲಾಮಿಯ ಶಿಕ್ಷಣ ಸಂಸ್ಥೆಯಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು.
ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಕುರಿತಂತೆ ಉಂಟಾಗಿರುವ ಈ ಸಂದರ್ಭದಲ್ಲಿ ಬೋರ್ಡ್ನ ಹೇಳಿಕೆ ಅತ್ಯಂತ ಮಹತ್ವ ಪಡೆದುಕೊಂಡಿದೆ.
ದೇಶದಲ್ಲಿ ಸಮಾನ ನಾಗರೀಕ ಸಂಹಿತೆ ಜಾರಿ ಅಸಾಧ್ಯವಾಗಿದ್ದು ಸರ್ಕಾರ ಯಾವ ಅದರ ಸ್ವರೂಪವನ್ನು ಸ್ಪಷ್ಟಪಡಿಸಬೇಕು. ಭಾರತೀಯ ಸಂವಿಧಾನ ಇಲ್ಲಿನ ಪ್ರತಿಯೊಬ್ಬರಿಗೆ ತಮ್ಮ ಧರ್ಮದಂತೆ ಜೀವಿಸುವ ಹಕ್ಕನ್ನು ನೀಡುತ್ತದೆ. ಸರ್ಕಾರ ಸಮಾನ ನಾಗರೀಕ ಸಂಹಿತೆ ಜಾರಿಗೊಳಿಸಲು ಮುಂದಾಗಿರುವುದು ಸಂವಿಧಾನ ತನ್ನ ದೇಶದ ನಾಗರಿಕರಿಗೆ ನೀಡಿರುವ ಹಕ್ಕುಗಳ ದಮನ ಮಾಡಿದಂತಾಗುತ್ತದೆ ಎಂದ ಅವರು ಸುಪ್ರಿಮ್ ಕೋರ್ಟ್ ನಿರ್ಣಯ ನಾವು ಗೌರವಿಸುತ್ತೇವೆ. ಕೆಲವರು ಮನಸ್ಸಿಗೆ ಬಂದಂತೆ ಮುಸ್ಲಿಮ್ ಪರ್ಸನಲ್ ಲಾ ವನ್ನು ವ್ಯಾಖ್ಯಾನಿಸುತ್ತಿದ್ದಾರೆ. ಇದು ಇಸ್ಲಾಮ್ ಧರ್ಮದ ಕುರಿತ ಅಲ್ಪಜ್ಞಾನದ ಪರಿಣಾವಾಗಿದೆ ಎಂದ ಅವರು ಯಾವುದೇ ಕಾರಣಕ್ಕೂ ಮುಸ್ಲಿಮರು ತಮ್ಮ ವ್ಯಯಕ್ತಿಕ ಜೀವನದಲ್ಲಿ ಇತರರು ಮೂಗು ತೂರಿಸುವುದನ್ನು ಸಹಿಸುವುದಿಲ್ಲ ತಲಾಖ್ ಎಂಬ ಪದ ಮಕ್ಕಳ ಆಟಿಕೆಯಲ್ಲಿ ಅದನ್ನು ಎಲ್ಲಿ, ಯಾವಾಗ ಬೇಕಾದರು ಬಳಸಿಕೊಳ್ಳುವಂತಿಲ್ಲ. ಇದರ ಸ್ವರೂಪವನ್ನು ಅರಿತುಕೊಂಡು ಈ ಪದವನ್ನು ಬಳಸಬೇಗಾತ್ತದೆ ಅಜ್ಞಾನ ಹಾಗೂ ಕೋಪದಲ್ಲಿ ಈ ಬದವನ್ನು ಬಳಸಿದರೆ ಅದರ ಪ್ರತಿಫಲ ಖಂಡಿತವಾಗಿ ಅವನು ಅನುಭವಿಸಲೇಬೆಕು. ತಪ್ಪು ಪತಿ ಪತ್ನಿ ಯಾರೇ ಮಾಡಲಿ ಅದು ತಪ್ಪೇ ಆಗಿದೆ. ಯಾವುದೆ ತಪ್ಪು ಮಾಡದೆ ಕೆಲವೊಮ್ಮೆ ಗಂಡ ಅಥವಾ ಹೆಂಡತಿಗೆ ಅನ್ಯಾಯವಾಗಬಹುದು. ಆದರೆ ತಲಾಖ್ ಪದ ಉಚ್ಚಾರವೆ ಬಹಳ ಜಾಗರೂಕತೆಯಿಂದ ಉಪಯೋಗಿಸುವಂತಹದ್ದು, ಕೊಲೆ ಮಾಡಿದ ನಂತರ ವ್ಯಕ್ತಿ ಪಶ್ಚತ್ತಾಪಪಟ್ಟರೆ ಕೊಲ್ಲಲ್ಲಪಟ್ಟ ವ್ಯಕ್ತಿ ಮರಳಿ ಜೀವಂತವಾಗಲು ಹೇಗೆ ಸಾಧ್ಯವಿಲ್ಲೂ ಹಾಗೆ ಒಮ್ಮೆ ತಲಾಖ್ ನೀಡಿದರೆ ಅದು ಮತ್ತೆ ಮರಳಿ ಪಡೆಯುವಹಾಗಿಲ್ಲ ಎಂದು ಸ್ಪಷ್ಟನೆ ನೀಡಿದ ಅವರು ತಲಾಖ್ ಪತಿಪತ್ನಿ ಬೇರ್ಪಡುವ ಕಟ್ಟಕಡೆಯ ಅಸ್ತ್ರವಾಗಿದೆ. ಇದನ್ನು ಬಳಸುವಾಗ ಯೋಚನೆ ಮಾಡಬೇಕಷ್ಟೆ. ತಿಳಿವಳಿಕೆಯಿಲ್ಲದೆ ಜನರು ಇದನ್ನು ದುರೂಪಯೋಗ ಮಾಡಿಕೊಳ್ಳುತ್ತಿದ್ದು ಮುಸ್ಲಿಮ್ ಪರ್ನಲ್ ಲಾ ಬೋರ್ಡ್ ಈ ಕುರಿತಂತೆ ಸಮಾಜದಲ್ಲಿ ಜಾಗೃತಿಯನ್ನುಂಟು ಮಾಡುವ ಯೋಜನೆಯನ್ನು ರೂಪಿಸಿದೆ.
ಭಾರತದಂತಹ ಜಾತ್ಯಾತೀತ ರಾಷ್ಟ್ರದಲ್ಲಿ ಏಕರೂಪ ನಾಗರಿಕ ಕಾನೂನು ಜಾರಿಗೊಳಿಸುವುದು ಸುಲಭವಲ್ಲ. ಇಲ್ಲಿ ಪ್ರತಿಯೊಂದು ಸಮುದಾಯಕ್ಕೆ ತನ್ನದೇ ಆದ ವ್ಯಯಕ್ತಿಕ ಕಾನೂನುಗಳಿವೆ. ಮದುವೆ, ವಿವಾಹ, ಕುಟಂಬ ವ್ಯವಸ್ಥೆ ಎಲ್ಲ ರೀತಿಯಿಂದ ಭಿನ್ನವಾಗಿವೆ. ಆದ್ದರಿಂದ ಏಕ ರೂಪ ನಾಗರಿಕ ಸಂಹಿತೆಯನ್ನು ಕೇವಲ ಮುಸ್ಲಿಮರು ಮಾತ್ರ ವಿರೋಧಿಸುವುದಿಲ್ಲ. ಬದಲಾಗಿ ಇಲ್ಲಿನ ಹಲವು ಸಮುದಾಯದವರು ಈಗಾಗಲೆ ಇದನ್ನು ವಿರೋಧಿಸಿ ಸುಪ್ರಿಮ್ ಕೋರ್ಟ್ನಲ್ಲಿ ದಾವೆಯನ್ನು ಹೂಡಿದ್ದಾರೆ ಎಂದರು. ಸರ್ಕಾರ ಈ ಕುರಿತಂತೆ ಬೋರ್ಡನೊಂದಿಗೆ ಮಾತುಕತೆ ನಡೆಸಲು ಉದ್ದೇಶಿಸಿದರೆ ಇದಕ್ಕೆ ಬೋರ್ಡ್ ಸಿದ್ದವಿದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಖಂಡಿತ ಈ ಕುರಿತು ಬೋರ್ಡ್ ಸರ್ಕಾರದೊಂದಿಗಿನ ಮಾತುಕತೆಗೆ ಸಿದ್ದವಿದೆ ಎಂದರು. ಸುಪ್ರಿಮ್ ಕೋರ್ಟ್ ತೀರ್ಮಾನ ಒಪ್ಪಲು ಸಿದ್ದರಿರುವ ತಾವು ನಾಗರೀಕ ಸಂಹಿತೆಯನ್ನು ವಿರೋಧಿಸುತ್ತಿರುವುದು ಸೂಕ್ತವೇ ಎಂಬ ಪ್ರಶ್ನೆಗೆ, ಹೌದು ನಮಗೆ ನಮ್ಮ ಸಂವಿಧಾನ ಈ ಹಕ್ಕನ್ನು ನೀಡಿದೆ. ನಮಗೆ ಸರಿಕಾಣದ ಎಲ್ಲ ವಿಷಯಗಳನ್ನು ವಿರೋಧಿಸುವ ಹಕ್ಕು ನಮಗಿದೆ ಎಂದರು. ಯಾವುದೇ ಕಾರಣಕ್ಕೂ ಶರಿಯತ್ ನಲ್ಲಿ ಹಸ್ತಕ್ಷೇಪ ಸಲ್ಲದು ಇದಕ್ಕಾಗಿ ಮುಸ್ಲಿಮರು ಬೋರ್ಡ್ನ ಬ್ಯಾನರ್ ನಡಿ ದೇಶದದ್ಯಾಂತ ಕಾನೂನು ಹೋರಾಟಕ್ಕೆ ಸಿದ್ದ ಎಂದೂ ಅವರು ಹೇಳಿದರು.
ಈ ಸಂದರ್ಭದಲ್ಲಿ ಮಜ್ಲಿಸೆ ಇಸ್ಲಾಹ್-ವ-ತಂಝೀಂ ಅಧ್ಯಕ್ಷ ಮುಝಮ್ಮಿಲ್ ಖಾಝಿಯಾ, ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಖರೂರಿ, ಮಾಧ್ಯಮ ಸಂಚಾಲಕ ಡಾ.ಮುಹಮ್ಮದ್ ಹನೀಫ್ ಶಬಾಬ್, ಎಂ.ಜೆ.ಅಬ್ದುಲ್ ರಖೀಬ್ ಮತ್ತಿತರರು ಉಪಸ್ಥಿತಿತರಿದ್ದರು.
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...
ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ
ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...
ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...
ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!
ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!
ನಾಮಫಲಕಗಳಲ್ಲಿ ಶೇ.೬೦% ಕನ್ನಡ ಕಡ್ಡಾಯ; ಹೈಕೋರ್ಟ್ ಮಧ್ಯಂತರ ಆದೇಶ
ಬೆಂಗಳೂರು: ಕನ್ನಡ ನಾಮಫಲಕಗಳಲ್ಲಿ ಶೇ 60ರಷ್ಟು ಕಡ್ಡಾಯ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳು, ಅಂಗಡಿ-ಮುಂಗಟ್ಟುಗಳನ್ನು ಮುಚ್ಚಬಾರದು ...
ಸೀಟು ಹಂಚಿಕೆ ವಿವಾದ; ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಬಿರುಕು?
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ತೆಗೆದುಕೊಳ್ಳಲು ನಾನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ...
ಲೋಕಸಭಾ ಚುನಾವಣೆ; ರಾಜ್ಯದಲ್ಲಿ 2 ಹಂತಗಳಲ್ಲಿ ಮತದಾನ
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಎಪ್ರಿಲ್ 26 ಹಾಗೂ ಮೇ 7ರಂದು ತಲಾ 14 ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ ...
ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ
ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...
ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್
ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...
ಚುನಾವಣಾ ಬೌಂಡ್; ವಿಶಿಷ್ಟ ಸಂಖ್ಯೆ, ವಿವರ ಚು.ಆಯೋಗಕ್ಕೆ ಸಲ್ಲಿಸಿದ ಎಸ್ಬಿಐ
ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ವಿಶಿಷ್ಟ ಸಂಖ್ಯೆಗಳು ಸೇರಿದಂತೆ ಚುನಾವಣಾ ...
ಅಬಕಾರಿ ನೀತಿ ಹಗರಣ; ಕೇಜ್ರಿವಾಲ್ ಬಂಧನ; ಈ. ಡಿ. ವಶದಲ್ಲಿ ದಿಲ್ಲಿ ಸಿಎಂ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ದಿಲ್ಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ...
ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...
ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್ನಿಂದ ಕೇಂದ್ರಕ್ಕೆ ನೋಟಿಸ್
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...
ಸು.ಕೋರ್ಟ್ ವಕೀಲರ ಸಂಘದ ಅಧ್ಯಕ್ಷರಿಗೆ ಸಿಜೆಐ ಛೀಮಾರಿ
ಚುನಾವಣಾ ಬಾಂಡ್ಗಳ ಕುರಿತು ತೀರ್ಪನ್ನು ಸ್ವಯಂಪ್ರೇರಿತವಾಗಿ ಮರುಪರಿಶೀಲಿಸುವಂತೆ ಕೋರಿ ಪತ್ರ ಬರೆದಿದ್ದಕ್ಕಾಗಿ ಸುಪ್ರೀಂ ...
ಪರೀಕ್ಷೆ ಮತ್ತು ಬಲಿದಾನಗಳ ಪ್ರತೀಕ : ಹಜ್ಜ್ ಮತ್ತು ಬಕ್ರೀದ್
ಹಜ್ಜ್ ಮತ್ತು ಬಕ್ರೀದ್ ಇವೆರಡರಲ್ಲೂ ಪ್ರವಾದಿ ಅಬ್ರಹಾಮರ ಜೀವನ ಮತ್ತು ಸಂದೇಶವಿದೆ. ಕುರಾನ್ ನಲ್ಲಿ ಹಲವೆಡೆ ಇವರ ...
ರಮಝಾನ್ ವಿಶೇಷ ಲೇಖನ; ಮಾನವ ಕಳಕಳಿಯ ಹಬ್ಬ “ಈದುಲ್ ಫಿತ್ರ್”
ಇಸ್ಲಾಮಿನಲ್ಲಿ ಕೇವಲ ಎರಡು ಹಬ್ಬಗಳು ಮಾತ್ರ ಇರುವುದು. ಒಂದನೆಯದು 30ದಿನಗಳ ಉಪವಾಸದ ನಂತರ ಆಚರಿಸುವ ಈದುಲ್ ಫಿತ್ರ್ ಮತ್ತು ಎರಡನೆಯದು ...
ಭಟ್ಕಳ: ಕುರಾನ್ ಕಂಠಪಾಠ ಮಾಡಿದ ಮರ್ಕಝಿ ಖಲಿಫಾ ಜಮಾಅತುಲ್ ಮುಸ್ಲಿಮೀನ್ ಚೀಫ್ ಖಾಝಿ
ಭಟ್ಕಳ: ಇಲ್ಲಿನ ಖಲಿಫಾ ಮರ್ಕಝಿ ಜಮಾಅತುಲ್ ಮುಸ್ಲಿಮೀನ್ ನ ಚೀಫ್ ಖಾಜಿ ಹಾಗೂ ಜಾಮಿಯಾ ಇಸ್ಲಾಮಿ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಮೌಲಾನ ...
ವಿದ್ಯಾವಂತರಿಂದಲೆ ದೇಶಕ್ಕೆ ಅಪಾಯ-ಮುಹಮ್ಮದ್ ಕುಂಞ
ಭಟ್ಕಳ: ವಿದ್ಯಾವಂತರಿಂದಲೇ ದೇಶದಲ್ಲಿ ಸಮಸ್ಯೆಗಳು ಉದ್ಭವಿಸುತ್ತಿದ್ದು ವಿದ್ಯಾವಂತರಿಂದ ದೇಶಕ್ಕೆ ಆಪಾಯ ಬಂದೊದಗುತ್ತಿದೆ ...
ಜಿಲ್ಲಾಮಟ್ಟದ ಸೀರತ್ ಪ್ರಬಂಧ ಸ್ಪರ್ಧೆ ಫಲಿತಾಂಶ; ಹೊನ್ನಾವರದ ಜಿ.ಎಸ್.ಹೆಗಡೆ ಪ್ರಥಮ
ಭಟ್ಕಳ: ‘ಪ್ರವಾದಿ ಮುಹಮ್ಮದ್(ಸ) ಎಲ್ಲರಿಗಾಗಿ’ ಸೀರತ್ ಅಭಿಯಾನದ ಅಂಗವಾಗಿ ‘ಪ್ರವಾದಿ ಮುಹಮ್ಮದ್(ಸ) ಮತ್ತು ಸಮಾನತೆ’ ಎಂಬ ವಿಷಯದಲ್ಲಿ ...
ಪ್ರವಾದಿ ಮುಹಮ್ಮದ್(ಸ) ಮತ್ತು ಸಮಾನತೆ -ರಾಘವೇಂದ್ರ ಎಸ್. ಮಡಿವಾಳ
ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ಜೀವನ ಚರಿತ್ರೆಗೆ ಅರಬ್ಬರು ‘ಸೀರತ್’ ಎಂದು ಕರೆಯುತ್ತಾರೆ. ಆದರೆ ಮುಸ್ಲಿಂ ವಿದ್ವಾಂಸರು ಹೆಚ್ಚಾಗಿ ...
ಮಾರ್ಚ 28 ಕ್ಕೆ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಮಾರ್ಚ 28 ರ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ
ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...
ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ – 12 ಮಂದಿಗೆ ಗಡಿಪಾರು
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ...
ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ – ಬಶೀರ್ ಮದನಿ
ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ...
ಭಟ್ಕಳ: ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!
ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!