ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ಮನೆ ಕರ ಹೆಚ್ಚಳ ಮಾಡಬಾರದು ಎಂದು ಆಗ್ರಹಿಸಿ ಗ್ರಾಮಸ್ಥರು ಶುಕ್ರವಾರ ಪಂಚಾಯತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬಡವರು, ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದು, ಹೆಚ್ಚಿನ ಕರ ಪಾವತಿಸಲು ಕಷ್ಟವಾಗುತ್ತದೆ. ಕರ ಹೆಚ್ಚಿಸುವ ನಿರ್ಧಾರವನ್ನು ಇಲ್ಲಿಗೇ ಕೈ ಬಿಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಗ್ರಾಮಸ್ಥರ ಪರವಾಗಿ ವೆಂಕಟೇಶ ನಾಯ್ಕ, ಗಣಪತಿ ನಾಯ್ಕ, ಕೃಷ್ಣ ನಾಯ್ಕ, ಸತೀಶಕುಮಾರ, ರಾಮಾ ನಾಯ್ಕ, ಕೃಷ್ಣ ನಾಯ್ಕ ಮೊದಲಾದವರು ಪಂಚಾಯತ ಕಚೇರಿಗೆ ಆಗಮಿಸಿದ್ದರು. ಪಂಚಾಯತ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ಮನವಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪಂಚಾಯತ ಅಧ್ಯಕ್ಷೆ ಅಮೀನಾ, ಸದಸ್ಯ ಜಟ್ಟಪ್ಪ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.