ಗೋಮಾಂಸ ಸಾಗಾಟದ ಶಂಕೆ; ಗೋರಕ್ಷಕರ ದಾಳಿಗೆ ಟ್ರಕ್ ಬಲಿ

Source: sonews | By Staff Correspondent | Published on 31st January 2018, 11:10 PM | National News | Don't Miss |

ಮುಝಫ್ಫರ್ಪುರ: ಬೀಫ್ ಸಾಗಾಟ ನಡೆಯುತ್ತಿದೆ ಎನ್ನುವ ಶಂಕೆಯಲ್ಲಿ ಟ್ರಕ್ಕೊಂದನ್ನು ತಡೆದ ಗೋರಕ್ಷಕರು ಚಾಲಕನಿಗೆ ಹಲ್ಲೆ ನಡೆಸಿ, ವಾಹನವನ್ನು ಪುಡಿಗೈದ ಘಟನೆ ಮುಝಫ್ಫರ್ ಪುರದಲ್ಲಿ ನಡೆದಿದೆ.

ಆದರೆ ವಾಹನದಲ್ಲಿ ಏನೂ ಇರಲಿಲ್ಲ ಎನ್ನಲಾಗಿದೆ. ಆದರೆ ಚಾಲಕನ ನೀಡಿದ ಮಾಹಿತಿಯಂತೆ ಫ್ಯಾಕ್ಟರಿಯೊಂದರಿಂದ ಪೊಲೀಸರು ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾಂಸ ಬೀಫ್ ಹೌದೇ ಎನ್ನುವುದನ್ನು ಖಾತರಿಪಡಿಸಲು ಬೇರೆಡೆಗೆ ಕಳುಹಿಸಲಾಗಿದೆ.

ಗೋರಕ್ಷಣೆಯ ಹೆಸರಿನಲ್ಲಿ ದೇಶಾದ್ಯಂತ ದುಷ್ಕರ್ಮಿಗಳಿಂದ ಕಳೆದ ವರ್ಷ ದಾಳಿಗಳು ನಡೆದಿತ್ತು. ಇದರಲ್ಲಿ ಪೆಹ್ಲು ಖಾನ್ ಹತ್ಯೆ ಭಾರೀ ಚರ್ಚೆಗೊಳಗಾಗಿತ್ತು. ಗೋರಕ್ಷಕರ ಕೃತ್ಯದ ವಿರುದ್ಧ ಭಾರೀ ಆಕ್ರೋಶವೂ ವ್ಯಕ್ತವಾಗಿತ್ತು.

ಗೋರಕ್ಷಣೆಯ ಹೆಸರಿನಲ್ಲಿ ನಡೆಯುವ ಹಿಂಸೆಯನ್ನು ಪ್ರಧಾನಿ ಮೋದಿ ಖಂಡಿಸಿದ್ದರು. “ಗೋವಿನ ಹೆಸರಿನಲ್ಲಿ ಮನುಷ್ಯರನ್ನು ಕೊಲ್ಲುವುದನ್ನು ಒಪ್ಪಲಾಗದು. ಕಾನೂನನ್ನು ಕೈಗೆತ್ತಿಕೊಳ್ಳಲು ಯಾರಿಗೂ ಅಧಿಕಾರವಿಲ್ಲ. ಹಿಂಸೆಯು ಯಾವುದೇ ಸಮಸ್ಯೆಗೆ ಪರಿಹಾರವಲ್ಲ” ಎಂದವರು ಹೇಳಿದ್ದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...