ಮೈಸೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಗರದ ಟೌನ ಹಾಲ್ ಬಳಿ ಉದ್ಯೋಗಕ್ಕಾಗಿ ಯುವಜನ ಸಂಘಟನೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಬಿಜೆಪಿಯ ಚುನಾವಣಾ ಪ್ರಚಾರ ಸಭೆಗೆ ಚಾಮರಾಜನಗರದ ಸಂತೇಮರಹಳ್ಳಿಗೆ ಆಗಮಿಸುತ್ತಿದ್ದ ಪ್ರಧಾನಿ ಮೋದಿ ವಿರುದ್ಧ ಪ್ರತಿಭಟಿಸಲು ರಾಜ್ಯದ ನಾನ ಕಡೆಗಳಿಂದ ವಿದ್ಯಾರ್ಥಿಗಳು ಆಗಮಿಸಿದ್ದರು.
ಮೈಸೂರಿನಿಂದ ಸಂತೇಮರಹಳ್ಳಿಗೆ ಕಾಲ್ನಡಿಗೆ ಮೂಲಕ ತೆರಳಲು ಮುಂದಾಗಿದ್ದ ವಿದ್ಯಾರ್ಥಿಗಳನ್ನು ಸೋಮವಾರವೇ ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದ್ದರು. ಸಂತೇಮರಹಳ್ಳಿಗೆ ಹೊಗಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಯೇ ಪ್ರತಿಭಟನೆ ನಡೆಸಿದರು. ಕೇಂದ್ರ ಸರಕಾರ ಜಾರಿಗೆ ತಂದಿರುವ ಕೈಗಾರಿಕ ನೀತಿಯನ್ನು ಸುಟ್ಟುಹಾಕಿ ಕೂಡಲೇ ಈ ನೀತಿಯನ್ನು ವಾಪಸ್ ಪಡೆಯಬೇಕು. ಯುವಕರಿಗೆ ಉದ್ಯೋಗ ನೀಡುತ್ತೇವೆ ಎಂಬ ನಿಮ್ಮ ಭರವಸೆ ಹುಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಬಾರಿಯ ಚುನಾವಣೆಯಲ್ಲಿ ಯುವಜನರು ಯಾವ ಪಕ್ಷಕ್ಕೆ ಬೆಂಬಲ ಸೂಚಿಸಬೇಕು ಎಂಬುದನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಹೇಳಿದರು. ಪ್ರತಿಭಟನೆಯಲ್ಲಿ ರಾಜೇಶ್ ಅಕ್ಕಿ, ಪುಷ್ಪಲತಾ, ಸರೋವರ್ ಬೆಂಕಿಕೆರೆ, ಮುತ್ತುರಾಜ್, ನರಸಿಂಹಮೂರ್ತಿ, ದಿನೇಶ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.