ಕಾರವಾರ: ದೇಶದ ಏಕೀಕರಣಕ್ಕೆ ಪ್ರಮುಖ ಪಾತ್ರ ವಹಿಸಿದ್ದ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನೋತ್ಸವದ ಅಂಗವಾಗಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡುವ ಮೂಲಕ ರಾಷ್ಟ್ರೀಯ ಏಕತಾ ದಿವಸ್ ಆಚರಿಸಿದರು.
ಸರ್ದಾರ ವಲ್ಲಬಾಯಿ ಪಟೇಲ್ ಅವರು ಜನಿಸಿದ ಅಕ್ಟೋಬರ 31 ನ್ನು ರಾಷ್ಟ್ರೀಯ ಏಕತಾ ದಿವಸ್ ಆಗಿ ಭಾರತದಾದ್ಯಂತ ಪ್ರತೀ ವರ್ಷ ಆಚರಿಸಲಾಗುತ್ತಿದೆ. ಈ ಆಚರಣೆಯು ನಮ್ಮ ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಗೆ ನಿಜವಾದ ಮತ್ತು ಸಂಭಾವ್ಯ ಬೆದರಿಕೆಗಳನ್ನು ತಡೆದುಕೊಳ್ಳುವ ಸ್ವಾಭಾವಿಕ ಶಕ್ತಿಯನ್ನು ಮತ್ತು ನಮ್ಮ ರಾಷ್ಟ್ರದ ಸ್ಥಿತಿಸ್ಥಾಪಕತ್ವವನ್ನು ಪುನಃ ದೃಢೀಕರಿಸಲು ಏಕತಾ ದಿವಸ ಅವಕಾಶ ನೀಡುತ್ತದೆ.
ದಾಖಲೆಗಳ ಪರಿಶೀಲನೆ
ಕಾರವಾರ : ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು 2018-19ನೇ ಸಾಲಿಗೆ ಸಾಮಾನ್ಯ, ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಿದವರ ಮೂಲ ದಾಖಲೆಗಳನ್ನು ನವ್ಹಂಬರ 2 ರಂದು ಪರಿಶೀಲಿಸುತ್ತಿದೆ.
ಅರ್ಜಿ ಸಲ್ಲಿಸಿದ ಸಂಘಸಂಸ್ಥೆ ಪದಾಧಿಕಾರಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಿಲ್ಲಾ ರಂಗಮಂದಿರ ಕಾರವಾರ ಇಲ್ಲಿ ಹಾಜರಿರಲು ಪ್ರಭಾರ ಸಹಾಯಕ ನಿರ್ದೇಶಕ ಹಿಮಂತರಾಜು ಜಿ. ಕೋರಿರುತ್ತಾರೆ.