ವಿಜಯದಶಮಿಯಂದು ಗಾಳಿಯಲ್ಲಿ ಗುಂಡು; ೬೦ ಭಜರಂಗಿಗಳ ವಿರುದ್ಧ ಪ್ರಕರಣ ದಾಖಲು

Source: sonews | By Staff Correspondent | Published on 1st October 2017, 3:52 PM | National News | Don't Miss |

ಹೊಸದಿಲ್ಲಿ: ವಿಜಯದಶಮಿಯ ಸಂಭ್ರಮದಂದು ಭಜರಂಗಿ ಹಾಗೂ ವಿಹಿಪಂ ಕಾರ್ಯಕರ್ತರೆನ್ನಲಾದ ಕೆಲವರು ಗಾಳಿಯಲ್ಲಿ ಗುಂಡು ಹಾರಿಸಿ, ಮಾರಕಾಯುಧಗಳನ್ನು ಪ್ರದರ್ಶಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ  60ಕ್ಕು ಹೆಚ್ಚು ಕಾರ್ಯಕರ್ತರ ವಿರುದ್ಧ ಆಗ್ರಾ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

 

“60 ಮಂದಿಯಲ್ಲಿ 29 ಮಂದಿಯ ವಿವರಗಳು ತಿಳಿದುಬಂದಿದೆ” ಎಂದು ಪೊಲೀಸ್ ಅಧಿಕಾರಿ ಸಂಜೀವ್ ತೋಮರ್ ತಿಳಿಸಿದ್ದಾರೆ.

ಆಗ್ರಾದ ರಾಮ್ ಲೀಲಾ ಮೈದಾನದ ಸಮೀಪದ ಹನುಮಾನ್ ದೇವಸ್ಥಾನದಲ್ಲಿ ನಡೆದ ವಿಜಯದಶಮಿ ಆಚರಣೆಯ ವೇಳೆ ವಿಎಚ್ ಪಿ ಹಾಗು ಬಜರಂಗದಳ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸಿದ್ದಲ್ಲದೆ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದರು.

ಆಗ್ರಾ ಕೋಟೆ ಸಮೀಪವೇ ಗಾಳಿಯಲ್ಲಿ ಗುಂಡು ಹಾರಿಸಿರುವುದು ಗಂಭೀರ ವಿಷಯವಾಗಿದೆ. ಈ ಘಟನೆ ನಡೆದ ಬಗ್ಗೆ ನಮಗೆ ಮಾಹಿತಿ ಲಭಿಸಿದ ತಕ್ಷಣ ಮಾಹಿತಿ ಕಲೆ ಹಾಕಿದ್ದೇವೆ. ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದವರ ಹಾಗು ಗಾಳಿಯಲ್ಲಿ ಗುಂಡು ಹಾರಿಸಿದವರನ್ನು ಗುರುತಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಗ್ರಾ ಸುಪರಿಂಟೆಂಡೆಂಟ್ ಆಪ್ ಪೊಲೀಸ್ ಅನುಪಮ್ ಸಿಂಗ್ ತಿಳಿಸಿದ್ದಾರೆ.

https://www.facebook.com/abpnews/videos/2266923986658176/

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...