ಫ್ಯಾಸಿಸಮ್ ಸೋಲಿಸಲು ದಲಿತ-ಮುಸ್ಲಿಮರ ಒಗ್ಗಟ್ಟು ಇಂದಿನ ಅಗತ್ಯ: ಎಸ್ ಐ ಓ ಅಖಿಲ ಭಾರತ ಸಮಾವೇಶದಲ್ಲಿ ಶಾಸಕ ಜಿಗ್ನೇಶ್ ಮೆವಾನಿ

Source: sonews | By Staff Correspondent | Published on 24th February 2018, 10:39 PM | National News | Special Report | Don't Miss |

ದೆಹಲಿ: ಮುಸ್ಲಿಮರು, ದಲಿತರು ಸೇರಿದಂತೆ ಅಲ್ಪಸಂಖ್ಯಾತ ವರ್ಗವನ್ನು ಧರ್ಮ ರಕ್ಷಣೆ, ಗೋಮಾತೆಯ ಹೆಸರಿನಲ್ಲಿ ದೌರ್ಜನ್ಯ, ಹಿಂಸೆಯ ಮೂಲಕ ದೇಶದಲ್ಲಿಂದು ಭಯದ ವಾತಾವರಣವನ್ನು ಸೃಷ್ಟಿಸುತ್ತಿರುವ ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸಬೇಕಾದರೆ ಮುಸ್ಲಿಮ್ ಹಾಗೂ ದಲಿತ ಸಮುದಾಯಗಳು ಒಂದಾಗಿ ಹೋರಾಡಬೇಕಾದ ಸಮಯ ಬಂದಿದೆ ಎಂದು ಗುಜರಾತ್ ವಡ್ಗಾಂವ್ ಶಾಸಕ ಜಿಗ್ನೇಶ್ ಮೆವಾನಿ ಹೇಳಿದರು.

ಅವರು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (Sio) ವತಿಯಿಂದ ದೆಹಲಿಯ ಜಾಮಿಯಾ ನಗರದಲ್ಲಿ ನಡೆಯುತ್ತಿರುವ ಎರಡನೇ ಅಖಿಲ ಭಾರತ ಸಮಾವೇಶದಲ್ಲಿ ಎರಡನೇ ದಿನದ ಮೊದಲ ಅಧಿವೇಶನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಇಂದು ದೇಶದಲ್ಲಿ ಆಡಳಿತ ನಡೆಸುತ್ತಿರುವ ಮೋದಿ ನೇತೃತ್ವದ ಬಿಜೆಪಿ ಸರಕಾರವು ತನ್ನ ವಿರುದ್ಧ ಮಾತನಾಡುವರನ್ನು ವ್ಯವಸ್ಥಿತವಾಗಿ ಮುಗಿಸಿಬಿಡುತ್ತಿದೆ. ಗುಜರಾತ್ ನಲ್ಲಿ ಶಾಸಕನಾಗಿ ಆಯ್ಕೆಯಾದ ನನ್ನನ್ನೇ ಅಧಿಕಾರಿಗಳ ಮೂಲಕ  ಎನ್ ಕೌಂಟರ್ ನಡೆಸಿ ಕೊಲ್ಲುವ ಸಂಚು ಮಾಡುವಂತಹ ಕೆಲಸಕ್ಕೆ ಕೈಹಾಕುತ್ತದೆಂದರೆ ಫ್ಯಾಸಿಸ್ಟ್ ಶಕ್ತಿಗಳು ತಮ್ಮ ಉದ್ದೇಶ ಸಾಧನೆಗಾಗಿ ಯಾವ ಮಟ್ಟಕ್ಕೆ ಇಳಿಯುತ್ತಾರೆ ಎಂಬುದನ್ನು ದೇಶದ ಯುವಜನತೆ ಅರ್ಥ ಮಾಡಿಕೊಳ್ಳಬೇಕು ಎಂದು ಮೆವಾನಿ ಅಭಿಪ್ರಾಯಪಟ್ಟರು.

ಕೇವಲ ದ್ವೇಷ ಹುಟ್ಟಿಸುವ ಆಯುಧ ಹೊಂದಿರುವ ಫ್ಯಾಸಿಸ್ಟ್ ಗಳನ್ನು ದೇಶದ ಯುವಜನತೆ ಪ್ರೀತಿ ವಿಶ್ವಾಸದ ಮೂಲಕ ಹೊಡೆದುರುಳಿಸಬೇಕು. 2019 ಚುನಾವಣೆಯಲ್ಲಿ ಯುವಜನತೆಯು ಸಂಪೂರ್ಣ ಭಾಗವಹಿಸಿ, ದೇಶದ ದಿಕ್ಸೂಚಿಯನ್ನು ಬದಲಾಯಿಸಬೇಕು ಎಂದು ಹೇಳಿದರು.

ಮುಸ್ಲಿಮರ ಜೊತೆಗೆ ಗುರುತಿಸಿಕೊಳ್ಳುವುದೆಂದರೆ ನನಗೆ ನನ್ನ ಮನೆಮಂದಿಯ ಜೊತೆಗೆ ಇದ್ದ ಅನುಭವ ಆಗುತ್ತದೆ. ದೇಶದಲ್ಲಿ ಬದಲಾವಣೆ ಮಾಡುವ ತಾಕತ್ತು ನಮ್ಮ ದೇಶದ ಯುವಜನತೆಗಿದೆ ಎಂದು ತಿಳಿಸಿದ ಜಿಗ್ನೇಶ್, ಸುಳ್ಳು ಹೇಳುವುದನ್ನೇ ರೂಢಿ ಮಾಡಿಕೊಂಡು ಅಧಿಕಾರ ಹಿಡಿದವರನ್ನು ಜನತೆಯು ಈಗಾಗಲೇ ತಿರಸ್ಕರಿಸಿದ್ದು, ಅದರ ಫಲಿತಾಂಶವು 2019 ರಲ್ಲಿ ನಾವು ಕಾಣಲಿದ್ದೇವೆ ಎಂದು ತಿಳಿಸಿದರು.

ಅಧಿವೇಶನದಲ್ಲಿ ಎಸ್ ರಾಷ್ಟ್ರೀಯ ಕಾರ್ಯದರ್ಶಿ ತೌಸೀಫ್ ಅಹ್ಮದ್ ಮಡಿಕೇರಿ, ಕ್ವಿಲ್ ಫೌಂಡೇಶನ್ ನಿರ್ದೇಶಕ ಸುಹೈಲ್ ಕೆ.ಕೆ, ಆರ್ ಟಿ ಫೋರಂನ ರಾಷ್ಟ್ರೀಯ ಸಂಚಾಲಕ ಅಂಬರೀಶ್ ರೈ ಮಾತನಾಡಿದರು.

ಜಮಾಅತೆ ಇಸ್ಲಾಮೀ ಹಿಂದ್ ರಾಷ್ಟ್ರೀಯ ಉಪಾಧ್ಯಕ್ಷ ಟಿ. ಆರಿಫ್ ಅಲಿ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...