ದೇಶವಿರೋಧಿ ಘೋಷಣೆ ; ಕನ್ನಯ್ಯ ಕ್ಲೀನ್‌ಚಿಟ್

Source: S O News service | By Staff Correspondent | Published on 1st March 2017, 4:17 PM | National News | Don't Miss |

ಹೊಸದಿಲ್ಲಿ: ಜೆಎನ್‌ಯು ವಿದ್ಯಾರ್ಥಿ ಕನ್ನಯ್ಯ ಕುಮಾರ್ ದೇಶ ವಿರೋಧಿ ಘೋಷಣೆ ಕೂಗಿಯೇ ಇಲ್ಲ ಎಂದು ತನಿಖೆಯಿಂದ ಸಾಬೀತಾಗಿದ್ದು ಪ್ರಕರಣಕ್ಕೆ ಸಂಬಂಧಿಸಿ ಕನ್ನಯ್ಯಗೆ ಕ್ಲೀನ್‌ಚಿಟ್ ನೀಡಲಾಗಿದೆ.

 

 ವರ್ಷದ ಹಿಂದೆ ದೇಶ ವಿರೋಧಿ ಘೋಷಣೆ ಕೂಗಿದ ಆರೋಪದಲ್ಲಿ ಜೆಎನ್‌ಯು ಭಾರೀ ಸುದ್ದಿಯಾಗಿತ್ತು. ವಿದ್ಯಾರ್ಥಿ ನಾಯಕ ಕನ್ನಯ್ಯ ಕುಮಾರ್ ವಿರುದ್ಧ ಕೇಳಿಬಂದಿದ್ದ ದೇಶದ್ರೋಹಿ ಆರೋಪವನ್ನು ಸಾಬೀತುಪಡಿಸಲು ಪೊಲೀಸರು ಸೂಕ್ತ ಪುರಾವೆ ಒದಗಿಸಲು ವಿಫಲರಾಗಿದ್ದಾರೆ.

ಕಳೆದ ವರ್ಷ ಫೆಬ್ರವರಿಯಲ್ಲಿ ಜೆಎನ್‌ಯುನಲ್ಲಿ ರಾಷ್ಟ್ರ ವಿರೋಧಿ ಘೋಷಣೆ ಕೂಗಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಕುಮಾರ್ ಧ್ವನಿ ಮಾದರಿಯ ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆಯಲ್ಲಿ ಕುಮಾರ್ ಪಾಸಾಗಿದ್ದಾರೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ’ಇಂಡಿಯಾ ಟುಡೆ’ ತನ್ನ ವಿಶೇಷ ವರದಿಯಲ್ಲಿ ತಿಳಿಸಿದೆ.

ಜವಾಹರ್‌ಲಾಲ್ ನೆಹರೂ ಯುನಿವರ್ಸಿಟಿ ಸ್ಟೂಡೆಂಟ್ಸ್ ಯೂನಿಯನ್ ಅಧ್ಯಕ್ಷರಾಗಿರುವ ಕನ್ನಯ್ಯ ಕುಮಾರ್ ಜೊತೆಗೆ ಉಮರ್ ಖಾಲಿದ್ ಹಾಗೂ ಅನಿರ್ಬನ್ ಭಟ್ಟಾಚಾರ್ಯ ವಿರುದ್ಧವೂ ದೇಶದ್ರೋಹ ಪ್ರಕರಣವನ್ನು ದಾಖಲಿಸಿ ಬಂಧಿಸಲಾಗಿತ್ತು. ಈ ಮೂವರು ಶಿಸ್ತುಕ್ರಮವನ್ನು ಎದುರಿಸಿದ್ದರು. ಇನ್ನು ಕೆಲವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿತ್ತು. ಹೆಚ್ಚಿನ ವಿದ್ಯಾರ್ಥಿಗಳಿಗೆ ತಲಾ 20,000 ರೂ. ದಂಡ ಹಾಗೂ ಕುಮಾರ್‌ಗೆ 10,000 ರೂ. ದಂಡವನ್ನು ವಿಧಿಸಲಾಗಿತ್ತು.

 ತಾನು ಮುಗ್ಧ. ಏನೂ ತಪ್ಪು ಮಾಡಿಲ್ಲ ಎಂದು ಕುಮಾರ್ ಪ್ರತಿಪಾದಿಸುತ್ತಾ ಬಂದಿದ್ದರು. ಇದೀಗ ದಂಡಾಧಿಕಾರಿಯ ತನಿಖೆಯ ಬಳಿಕ ಅವರಿಗೆ ಕ್ಲೀನ್‌ಚಿಟ್ ಲಭಿಸಿದೆ.

 ದೇಶ ವಿರೋಧಿ ಘೋಷಣೆ ಕೂಗಿದವರಲ್ಲಿ 9 ಮಂದಿ ಹೊರಗಿನವರೆಂದು ಗುರುತಿಸಲಾಗಿದ್ದು, ಎಲ್ಲರೂ ಕಾಶ್ಮೀರದವರು. ಓರ್ವ ಪ್ರೊಫೆಸರ್ ಕೂಡ ಇದರಲ್ಲಿದ್ದರು. ಕುಮಾರ್ ಯಾವುದೇ ಘೋಷಣೆ ಕೂಗಿಲ್ಲ ಎಂದು ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ ಎಂದು ಆಂಗ್ಲ ಪತ್ರಿಕೆ ವರದಿ ಮಾಡಿದೆ.

ಕುಮಾರ್ ದೇಶದ್ರೋಹ ಘೋಷಣೆ ಕೂಗಿದ್ದಕ್ಕೆ ಸಾಕಷ್ಟು ಪುರಾವೆ ಇದೆ ಎಂದು ದಿಲ್ಲಿ ಪೊಲೀಸ್ ಕಮಿಶನರ್ ಬಿ.ಎಸ್. ಬಸ್ಸಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ದಿಲ್ಲಿ ಸರಕಾರ ಪ್ರಕರಣದ ತನಿಖೆಗೆ ಮ್ಯಾಜಿಸ್ಟ್ರೇಟ್‌ರನ್ನು ನೇಮಕ ಮಾಡಿದ್ದು, ತನಿಖೆಯ ಬಳಿಕ ಕುಮಾರ್‌ಗೆ ಕ್ಲೀನ್‌ಚಿಟ್ ನೀಡಲಾಗಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...