ಗೋಮಾಂಸ ಸೇವನೆ ಸಮಸ್ಯೆಯಲ್ಲ: ಕೇಂದ್ರ ಸಚಿವ ರಿಜಿಜು

Source: sonews | By Staff Correspondent | Published on 5th March 2018, 12:28 AM | National News | Don't Miss |

ಹೊಸದಿಲ್ಲಿ: ನಾಗಾಲ್ಯಾಂಡ್ ನಲ್ಲಿ ಬೀಫ್ ಸೇವನೆ ಒಂದು ಸಮಸ್ಯೆಯಲ್ಲ ಎಂದು ಕೇಂದ್ರ ಗೃಹ ಸಹಾಯಕ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಬಿಜೆಪಿ ನಾಗಾಲ್ಯಾಂಡ್‍ನ ಅಭಿವೃದ್ಧಿಯತ್ತ ಗಮನ ಹರಿಸಲಿದೆ ಎಂದು ರಿಜಿಜು ಹೇಳಿದರು. ಹಿಂದೂಸ್ಥಾನ್ ಟೈಮ್ಸ್ ಗೆ ನೀಡಿದ ಸಂದರ್ಶನದಲ್ಲಿ ನಾಗಾಲ್ಯಾಂಡ್‍ನಲ್ಲಿ  ಬಿಜೆಪಿಯ ಮುಂದಿನ ಯೋಜನೆಗಳ ಕುರಿತು ಅವರು ವಿವರವಾಗಿ ಮಾತಾಡಿದ್ದಾರೆ.

 "ಎನ್‍ಪಿಎಫ್‍ನೊಂದಿಗೆ  ನಮಗೆ ಸಮಸ್ಯೆಗಳಿಲ್ಲ. ಅದರೆ ಸ್ಥಾನ ಹಂಚಿಕೆ ವಿಷಯದಲ್ಲಿ ಕೆಲವು ಅಡ್ಡಿಗಳುಂಟಾದ್ದರಿಂದ ಮೈತ್ರಿ  ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಆದ್ದರಿಂದ ಎನ್‍ಡಿಪಿಪಿಯೊಂದಿಗೆ ಸೇರಿ ಚುನಾವಣೆ ಎದುರಿಸಿದ್ದೇವೆ" ಎಂದು ಕಿರಣ್ ರಿಜಿಜು ತಿಳಿಸಿದರು.

ನಾಗಾ ಸಮಸ್ಯೆಗಳ ಪರಿಹಾರಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಇದಕ್ಕೆ ಈಗಾಗಲೇ ಸೂಕ್ತ ಯೋಜನೆಯನ್ನು  ರೂಪಿಸಲಾಗಿದೆ. ನಾಗಾ ಜನರು ಈಗ ಬಿಜೆಪಿಯಲ್ಲಿ  ವಿಶ್ವಾಸ ಇರಿಸಿದ್ದಾರೆ. ಬಿಜೆಪಿ ನಾಗಾಲ್ಯಾಂಡ್‍ನಲ್ಲಿ 29 ಸ್ಥಾನಗಳನ್ನು ಗೆದ್ದಿದ್ದು, ಇಪ್ಪತ್ತೆಂಟು ಸ್ಥಾನಗಳಲ್ಲಿ ಎನ್‍ಪಿಎಫ್‍ಜಯಗಳಿಸಿದೆ. ಎನ್‍ಪಿಎಫ್‍ನೊಂದಿಗೆ  ಸೇರಿ ಸರಕಾರ ರಚಿಸಲಿದ್ದೇವೆ ಎಂದು ರಿಜಿಜು ಪ್ರಕಟಿಸಿದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...