ಅವಧಿಗೆ ಮುನ್ನ ಲೋಕಸಭಾ ಚುನಾವಣೆ; ಇಲ್ಲಿವೆ ಕೆಲವು ಕಾರಣಗಳು

Source: sonews | By Staff Correspondent | Published on 24th January 2018, 6:21 PM | National News | Special Report | Don't Miss |

ಹೊಸದಿಲ್ಲಿ: ಮುಂದಿನ ಲೋಕಸಭಾ ಚುನಾವಣೆ 2019ರ ಎಪ್ರಿಲ್-ಮೇ ತಿಂಗಳಲ್ಲಿ ನಡೆಯಬಹುದೆಂದು ನಿರೀಕ್ಷಿಸಲಾಗಿದ್ದರೂ ಅವಧಿ ಪೂರ್ವ ಚುನಾವಣೆಯ ಸಾಧ್ಯತೆಗಳ ಬಗ್ಗೆಯೂ ಹಲವಾರು ಊಹಾಪೋಹಗಳಿವೆ. ಆದರೆ ಮುಂದಿನ ಕೆಲವೇ ತಿಂಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ಜೊತೆಗೆಯೇ ಲೋಕಸಭಾ ಚುನಾವಣೆಯೂ ನಡೆಯಬಹುದೆನ್ನಲಾಗುತ್ತಿದೆ.

ಅದಕ್ಕೆ ಕೆಲವು ಕಾರಣಗಳೂ ಇವೆ

1. ಭವಿಷ್ಯದಲ್ಲಿ ಬಿಜೆಪಿ ವಿವಿಧ ರಾಜ್ಯಗಳ ಚುನಾವಣೆಗಳಲ್ಲಿ ಹೇಗೆ ನಿರ್ವಹಿಸಬಹುದೆಂದು ಅಂದಾಜಿಸಿದರೆ 2014ರ ಚುನಾವಣೆಯಲ್ಲಿ ಅದು ದಾಖಲಿಸಿದ 282 ಕ್ಷೇತ್ರಗಳ ವಿಜಯವನ್ನು ಪುನರಾವರ್ತಿಸುವುದು ಈ ಬಾರಿ ಕಷ್ಟವಾಗಬಹುದು.

ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ಬಿಜೆಪಿ 40ರಿಂದ 50 ಕ್ಷೇತ್ರಗಳನ್ನು ಕಳೆದುಕೊಳ್ಳಬಹುದೆಂದು ಹಾಗೂ ಉತ್ತರ ಪ್ರದೇಶಗಳಲ್ಲಿ ಹಿಂದಿನ ಬಾರಿಯಂತೆ 71 ಕ್ಷೇತ್ರಗಳಲ್ಲಿ ಜಯ ಸಾಧಿಸುವುದು ಈ ಬಾರಿ ಕಷ್ಟಕರವಾಗಲಿದೆಯೆಂದೇ ಹೇಳಲಾಗುತ್ತಿದೆ.

ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲೂ ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿರುವುದರಿಂದ ಬಿಜೆಪಿ 215ರಿಂದ 225 ಕ್ಷೇತ್ರಗಳಲ್ಲಿ ಮಾತ್ರ ಜಯ ಸಾಧಿಸಬಹುದೆಂದು ನಿರೀಕ್ಷಿಸಲಾಗಿದೆ. ಮೇಲಾಗಿ ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವೈಫಲ್ಯ ಕಂಡಲ್ಲಿ ಅದು ಬರುವ ವರ್ಷ ನಡೆಯಲಿರುವ ಲೋಕಸಭಾ ಚುನಾವಣಾ ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದೆಂಬ ಭಯವಿದೆ.

2. ರೈತರು ಎದುರಿಸುತ್ತಿರುವ ಸಮಸ್ಯೆ ಹಾಗೂ ಯುವಜನರಲ್ಲಿ ನಿರುದ್ಯೋಗ ಸಮಸ್ಯೆ ಬಿಜೆಪಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ.

3. ಜಿಎಸ್ಟಿಯಿಂದಾಗಿ, ಬ್ಯಾಂಕ್ ಮರು ಬಂಡವಾಳೀಕರಣ ಹಾಗೂ ತೈಲ ದರಗಳಿಂದಾಗಿ ದೇಶದ ಆರ್ಥಿಕತೆ ಸದ್ಯ ಸುಧಾರಣೆ ಕಾಣುವ ಸಾಧ್ಯತೆ ಕಡಿಮೆಯೆನ್ನಲಾಗಿದೆ.

4. ಅವಧಿಪೂರ್ವ ಚುನಾವಣೆ ಘೋಷಿಸಿ ಆಡಳಿತ ಪಕ್ಷ ವಿಪಕ್ಷಗಳಿಗೆ ಅಚ್ಚರಿ ಮತ್ತು ಆಘಾತ ಕೂಡ ನೀಡಿ ಅವುಗಳಿಗೆ ಸಾಕಷ್ಟು ಪೂರ್ವ ತಯಾರಿಗೆ ಸಮಯಾವಕಾಶ ನೀಡದೇ ಇರಬಹುದು.

5. ಪ್ರಧಾನಿ ಇತ್ತೀಚೆಗೆ ಎರಡು ಸಂದರ್ಶನಗಳನ್ನು ನೀಡಿದ್ದಾರೆ. ಇದು ಅಪರೂಪ. ಏಕೆ ಸಂದರ್ಶನ ನೀಡಿದ್ದಾರೆಂಬ ಪ್ರಶ್ನೆಯೂ ಇದೆ.

6. ರಿಪಬ್ಲಿಕ್ ಟಿವಿ ಸಿ ವೋಟರ್ ಸಮೀಕ್ಷೆ ವಿವರಗಳನ್ನು ಪ್ರಕಟಿಸಿ ಎನ್ ಡಿಎ 335 ಕ್ಷೇತ್ರಗಳಲ್ಲಿ ಜಯ ಸಾಧಿಸುವುದೆಂದು ಹೇಳಿದೆ.

7. ಪ್ರಧಾನಿಯ ದಾವೋಸ್ ಭೇಟಿಗಂತೂ ಭರ್ಜರಿ ಪ್ರಚಾರ ದೊರೆಯುತ್ತಿದೆ.

8. ಈ ಬಾರಿಯ ಗಣತಂತ್ರ ದಿವಸ ಕಾರ್ಯಕ್ರಮದಲ್ಲಿ ಏಷಿಯಾನ್ ದೇಶಗಳ ಹತ್ತು ನಾಯಕರು ಭಾಗವಹಿಸಲಿದ್ದಾರೆ. ಇದು ಕೂಡ ಮೋದಿ ವರ್ಚಸ್ಸು ಹೆಚ್ಚಿಸಲು ಅನುಕೂಲ.

9. ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಿದರೆ ಹಣವೂ ಉಳಿತಾಯವಾದಂತೆ. ಅಂತೆಯೇ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಢ, ದಿಲ್ಲಿ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳೊಂದಿಗೆ ಲೋಕಸಭಾ ಚುನಾವಣೆಗಳೂ ನಡೆದರೆ ಅಚ್ಚರಿಯೇನಿಲ್ಲ.

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...