ರಾಜಧಾನಿಯಲ್ಲಿ ಹಾಡುಹಗಲೇ ಶಾಲಾ ಬಾಲಕನ ಅಪಹರಣ

Source: sonews | By Staff Correspondent | Published on 25th January 2018, 5:12 PM | National News | Don't Miss |

ಹೊಸದಿಲ್ಲಿ: ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪ್ರತಿಷ್ಠಿತ ಶಾಲಾ ಬಸ್ ನ್ನು ತಡೆದು ಒಂದನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿರುವ ಆಘಾತಕಾರಿ ಘಟನೆ ಹಾಡಹಗಲೇ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

ಗಣರಾಜ್ಯೋತ್ಸವ ಹಾಗೂ ‘ಪದ್ಮಾವತ್’ ಚಿತ್ರ ಬಿಡುಗಡೆ ವಿವಾದದ ಹಿನ್ನೆಲೆಯಲ್ಲಿ ದಿಲ್ಲಿಯಾದ್ಯಂತ ಕಟ್ಟೆಚ್ಚರವಹಿಸಲಾಗಿದ್ದು ಈ ಮಧ್ಯೆ ಅಹಿತಕರ ಘಟನೆ ನಡೆದಿದೆ.

"ಗುರುವಾರ ಬೆಳಗ್ಗೆ 8 ಗಂಟೆಗೆ ಕಪ್ಪು ಹೆಲ್ಮೆಟ್ ಧರಿಸಿದ ಇಬ್ಬರು ದುಷ್ಕರ್ಮಿಗಳು ಶಾಲೆಯತ್ತ ತೆರಳುತ್ತಿದ್ದ ಬಸ್ ನ್ನು ಅಡ್ಡಗಟ್ಟಲು ಯತ್ನಿಸಿದರು. ಚಾಲಕ ಇದಕ್ಕೆ ಪ್ರತಿರೋಧ ಒಡ್ಡಿದಾಗ ಆತನ ಮೇಲೆ ಗುಂಡು ಹಾರಾಟ ನಡೆಸಿದ ದುಷ್ಕರ್ಮಿಗಳು ಶಾಲಾ ಬಸ್ ನೊಳಗೆ ಪ್ರವೇಶಿಸಿ ಅಕ್ಕನೊಂದಿಗೆ ಕುಳಿತ್ತಿದ್ದ ಬಾಲಕನನ್ನು ಅಪಹರಿಸಿದ್ದಾರೆ.ಬಸ್ ನ ಒಳಗೆ 20 ವಿದ್ಯಾರ್ಥಿಗಳಿದ್ದರು. ಅಪಹರಣಕಾರರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು ದಿಲ್ಲಿಯ ವಿಶೇಷ ಪೊಲೀಸ್ ತಂಡಗಳು ಘಟನೆಯ ತನಿಖೆ ನಡೆಸುತ್ತಿವೆ. ಬೆಳಗ್ಗೆ 10 ಗಂಟೆಯ ತನಕ ಅಪಹರಣಕಾರರಿಂದ ಯಾವುದೇ ಬೇಡಿಕೆ ಬಂದಿಲ್ಲ’’ ಎಂದು ಜಂಟಿ ಪೊಲೀಸ್ ಆಯುಕ್ತ ರವೀಂದ್ರ ಸಿಂಗ್ ಯಾದವ್ ತಿಳಿಸಿದ್ದಾರೆ.

"ಮುಸ್ಲಿಮರನ್ನು ಹತ್ಯೆಗೈದ , ದಲಿತರನ್ನು ಸುಟ್ಟ ಕೆಲ ಶಕ್ತಿಗಳು ಈಗ ನಮ್ಮ ಮಕ್ಕಳ ಹಿಂದೆ ಬಿದ್ದಿವೆ,''-ಕೇಜ್ರಿವಾಲ್

ಹೊಸದಿಲ್ಲಿ : ಗುರ್ಗಾಂವ್ ನಗರದಲ್ಲಿ 'ಪದ್ಮಾವತ್' ವಿರುದ್ಧ ಪ್ರತಿಭಟಿಸುತ್ತಿದ್ದ ಗುಂಪೊಂದು ಶಾಲಾ ಮಕ್ಕಳ ಬಸ್ಸೊಂದರ ಮೇಲೆ ದಾಳಿ ನಡೆಸಿದ ಘಟನೆಯ ಬಗ್ಗೆ ತಿಳಿದು ತಮಗೆ ರಾತ್ರಿಯಿಡೀ ನಿದ್ದೆ ಬಂದಿಲ್ಲ ಎಂದು ಹೇಳಿಕೊಂಡಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, "ಮುಸ್ಲಿಮರನ್ನು ಹತ್ಯೆಗೈದ ಹಾಗೂ ದಲಿತರನ್ನು ಸುಟ್ಟ ಕೆಲ ಶಕ್ತಿಗಳು ಈಗ ನಮ್ಮ ಮಕ್ಕಳ ಹಿಂದೆ ಬಿದ್ದಿವೆ,'' ಎಂದಿದ್ದಾರೆ.

ರಾಷ್ಟ್ರ ರಾಜಧಾನಿಯಿಂದ ಕೆಲವೇ ಕಿಲೋಮೀಟರ್ ದೂರದ ಪ್ರದೇಶದಲ್ಲಿ ಗಣರಾಜ್ಯೋತ್ಸವಕ್ಕಿಂತ ಕೆಲವೇ ದಿನಗಳ ಹಿಂದೆ  ನಡೆದ ಈ ಘಟನೆ ಇಡೀ ದೇಶಕ್ಕೆ ನಾಚಿಕೆಗೇಡು ಎಂದು ಕೇಜ್ರಿವಾಲ್ ಬಣ್ಣಿಸಿದ್ದಾರೆ.

"ನಾವು ಇನ್ನೂ ಮೌನದಿಂದಿರಲು ಸಾಧ್ಯವಿಲ್ಲ, ಅವರು ಮುಸ್ಲಿಮರನ್ನು ಕೊಂದರು, ದಲಿತರನ್ನು ಜೀವಂತ ಸುಟ್ಟರು ಹಾಗೂ ಹಲ್ಲೆಗೈದರು. ಇಂದು ಅವರು ನಮ್ಮ ಮಕ್ಕಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಹಾಗೂ ನಮ್ಮ ಮನೆಗಳೊಳಗೆ ನುಗ್ಗಲು ಆರಂಭಿಸಿದ್ದಾರೆ. ಇನ್ನು ಮೌನದಿಂದಿರಬೇಡಿ, ದನಿಯೆತ್ತಿ,'' ಎಂದು ಕೇಜ್ರಿವಾಲ್ ಅವರು ಗಣರಾಜ್ಯೋತ್ಸವ ದಿನದ ಮುನ್ನಾದಿನ ನಡೆದ ಸಮಾರಂಭವೊಂದರಲ್ಲಿ ಮಾತನಾಡುತ್ತಾ ಹೇಳಿದರು.
"ಇದು ರಾಮ, ಕೃಷ್ಣ, ಗೌತಮ ಬುದ್ಧ, ಮಹಾವೀರ, ಗುರು ನಾನಕ್, ಕಬೀರ್, ಮೀರಾ ಹಾಗೂ ಪ್ರವಾದಿ ಮುಹಮ್ಮದ್ ಮತ್ತು ಏಸು ಕ್ರಿಸ್ತನ ಅನುಯಾಯಿಗಳ ನಾಡು. ಮಕ್ಕಳ ಮೇಲೆ ಕಲ್ಲೆಸೆದವರು ಹಿಂದುಗಳೇ, ಮುಸಲ್ಮಾನರೇ ಅಥವಾ ಕ್ರೈಸ್ತರೇ ಎಂದು ನಾನು ಕೇಳಬಯಸುತ್ತೇನೆ. ಯಾವ ಧರ್ಮ ಮಕ್ಕಳ ವಿರುದ್ಧ ಹಿಂಸೆ ನಡೆಸಬೇಕೆಂದು ಹೇಳುತ್ತದೆ?'' ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

"ದೇಶದ ಜನರಿಗೆ ಶಾಂತಿ ಹಾಗೂ ಪ್ರೀತಿಯ ಅಗತ್ಯವಿದೆ. ಕೇಂದ್ರದ ಅಧಿಕಾರಸ್ಥರಿಗೆ ನಮ್ಮನ್ನು ಬಿಟ್ಟು ಬಿಡಿ ಎಂದು ಕೇಳಿಕೊಳ್ಳುತ್ತೇನೆ. ಶ್ರೀ ರಾಮನು ರಾವಣನಿಗೆ ನೀಡಿದ ಶಿಕ್ಷೆಗಿಂತಲೂ ಕಠೋರ ಶಿಕ್ಷೆಯನ್ನು ದಾಳಿಕೋರರಿಗೆ ನೀಡಬೇಕು'' ಎಂದವರು ಹೇಳಿದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...