ಅಬ್ದುಲ್ ಖವಿ ದೆಸ್ನವಿ ಅವರಿಗೆ ಗೂಗಲ್ ಡೂಡಲ್ ಗೌರವ

Source: sonews | By Staff Correspondent | Published on 1st November 2017, 6:08 PM | National News | Special Report | Don't Miss |

ಹೊಸದಿಲ್ಲಿ: ಖ್ಯಾತ ಸಾಹಿತ್ಯ ವಿಮರ್ಶಕ ಹಾಗೂ ಉರ್ದು ಲೇಖಕ ಅಬ್ದುಲ್ ಖವಿ ದೆಸ್ನವಿ ಅವರ 87ನೇ ಜನ್ಮದಿನಾಚರಣೆಯಂದು ಗೂಗಲ್ ಅವರಿಗೆ ಡೂಡಲ್ ಮೂಲಕ ಗೌರವ ಸಮರ್ಪಿಸಿದೆ. ಡೂಡಲ್ ನಲ್ಲಿ ಅಬ್ದುಲ್ ಅವರು ಸಾಹಿತ್ಯ ರಚನೆಯಲ್ಲಿ ತೊಡಗಿರುವುದನ್ನು ತೋರಿಸಲಾಗಿದೆ, ಹಿನ್ನೆಲೆಯಲ್ಲಿ ಉರ್ದು ಭಾಷೆಯ ಬರಹಗಳೂ ಇವೆ. ಬಿಹಾರದ ದೆಸ್ನಾ ಗ್ರಾಮದಲ್ಲಿ 1930ರಲ್ಲಿ ಹುಟ್ಟಿದ್ದ ಅಬ್ದುಲ್ ಖವಿ ಅವರು ಭಾರತದಲ್ಲಿ ಉರ್ದು ಸಾಹಿತ್ಯದ ಅಭಿವೃದ್ಧಿಗೆ ಸಾಕಷ್ಟು ಶ್ರಮ ಪಟ್ಟವರಾಗಿದ್ದರು. ಅವರು ಜುಲೈ 7, 2011ರಂದು ನಿಧನರಾಗಿದ್ದರು.

 

ಸುಮಾರು ಐದು ದಶಕಗಳಿಗೂ ಹೆಚ್ಚು ಕಾಲ ಉರ್ದು ಸಾಹಿತ್ಯ ಕ್ಷೇತ್ರದಲ್ಲಿ ಕೈಯಾಡಿಸಿದ್ದ ಅವರು ಹಲವಾರು ಉರ್ದು ಕಾದಂಬರಿಗಳು, ಜೀವನಚರಿತ್ರೆ, ಕವನ ಸಂಕಲನಗಳನ್ನು ರಚಿಸಿದ್ದರು. ಸ್ವಾತಂತ್ರ್ರ ಹೋರಾಟಗಾರ ಮೌಲಾನ ಅಬುಲ್ ಕಲಾಂ ಆಝಾದ್ ಅವರ ಜೀವನಾಧರಿತ ‘ಹಯಾತ್-ಎ-ಅಬುಲ್ ಕಲಾಂ ಆಜಾದ್’ ಅವರ ಮಹೋನ್ನತ ಕೃತಿಯಾಗಿತ್ತು. ಅಬ್ದುಲ್ ಖವಿ ಅವರ ಇತರ ಪ್ರಮುಖ ಸಾಹಿತ್ಯ ಕೃತಿಗಳೆಂದರೆ ‘ಸತ್ ತಹ್ರಿರೆನ್,’ ‘ಮೊತಾಲ-ಇ-ಖೂತೂತ್ ಘಾಲಿಬ್,’ ಹಾಗೂ ‘ತಲಾಶ್-ಎ-ಆಝಾದ್.’

ಖ್ಯಾತ ಮುಸ್ಲಿಂ ವಿದ್ವಾಂಸ ಸಯ್ಯದ್ ಸುಲೈಮಾನ್ ನದ್ವಿ ಕುಟುಂಬದಲ್ಲಿ ಜನಿಸಿದ್ದ ಅಬ್ದುಲ್ ಖವಿ ಅವರು ಭೋಪಾಲದ ಸೈಫಿಯ ಸ್ನಾತ್ತಕೋತ್ತರ ಕಾಲೇಜಿನ ಉರ್ದು ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಉರ್ದು ಸಾಹಿತ್ಯ ಕ್ಷೇತ್ರದ ಹಲವು ಖ್ಯಾತನಾಮರಾದ ಜಾವೇದ್ ಅಖ್ತರ್ ಹಾಗೂ ಇಖ್ಬಾಲ್ ಮಸೂದ್ ಅವರ ಶಿಷ್ಯರಾಗಿದ್ದರು.

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...