ನ್ಯೂ ಶಮ್ಸ್ ಸ್ಕೂಲ್ ವಿದ್ಯಾರ್ಥಿಗಳಿಂದ ‘ಮಾನವೀಯತೆಗಾಗಿ’ ಸೈಕಲ್ ಓಟ ಸ್ಪರ್ಧೆ

Source: sonews | By Staff Correspondent | Published on 8th December 2018, 5:54 PM | Coastal News | State News | Don't Miss |

ಭಟ್ಕಳ: ಇಲ್ಲಿನ ಹೆಬಳೆ ಪಂಚಾಯತ್ ವ್ಯಾಪ್ತಿಯ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ನ್ಯೂ ಶಮ್ಸ್ ಸ್ಕೂಲ್ ಶಾಲೆಯ ವಿದ್ಯಾರ್ಥಿಗಳಿಗಾಗಿ ‘ಮಾನವೀಯತೆಗಾಗಿ ಸೈಕಲ್ ರೇಸ್ ಸ್ಪರ್ಧೆ-2018’ ನ್ನು ಶನಿವಾರ ಬೆಳಿಗ್ಗೆ 9ಗಂಟೆಗೆ ಆಯೋಜಿಸಲಾಗಿತ್ತು. 

ಸೈಕಲ್ ರೇಸ್ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಉಪಾಧ್ಯಕ್ಷ ಇಂಜಿನೀಯರ್ ನಝೀರ್ ಆಹ್ಮದ್ ಖಾಝಿ, ಮಾನವೀತೆಯಗಾಗಿ ಸೈಕಲ್ ಸ್ಪರ್ಧೆಯನ್ನು ಆಯೋಜಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಮಾನವೀಯ ಗುಣಗಳನ್ನು ಬಿತ್ತಲು ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಎಂದರು. 

ಪ್ರಸ್ತಾವಿಕವಾಗಿ ಮಾತನಾಡಿದ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಮುಹಮ್ಮದ್ ರಝಾ ಮಾನ್ವಿ ಮಾತನಾಡಿ, ನಾವು ಮನುಷ್ಯರೆಂಬ ನೆಲೆಯಲ್ಲಿ ಮನುಷ್ಯ ಮನುಷ್ಯರನ್ನು ಪ್ರೀತಿಸುವ, ಗೌರವಿಸುವ, ಮನುಷ್ಯರನ್ನು ಆದರಿಸುವ ಸಮಾಜ ನಿರ್ಮಾಣದ ಗುರಿ ನಮ್ಮದಾಗಿದ್ದು ವಿದ್ಯಾರ್ಥಿ ದೆಸೆಯಿಂದಲೆ ಅವರಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. 
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ, ದೈಹಿಕ ಶಿಕ್ಷಣ ಶಿಕ್ಷಕ ಮಹೇಶ್ ನಾಯ್ಕ, ಅಬ್ದುಸ್ಸುಭಾನ್ ನದ್ವಿ, ಅಬ್ದುಲ್ಲಾ ಖಲಿಫಾ, ಶಾಝಿರ್ ಹುಸೇನ್, ಮಂಜುನಾಥ್ ಹೆಬ್ಬಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

ಸೈಕಲ್ ಸ್ಪರ್ಧೆಯ ವಿಜೇತರು:

ಪ್ರೌಢಶಾಲೆ ವಿಭಾಗ: ಪ್ರಥಮ ಸ್ಥಾನ  ಮುಹಮ್ಮದ್ ತಿಬಿಯಾನ್ ಆರ್.ಎಸ್, ದ್ವಿತೀಯ ಫಾರ್ಖಲಿತ್ ರಿದಾ ಮಾನ್ವಿ, ತೃತೀಯ ಮುಸಾಬ್ ಇಕ್ಕೇರಿ ಪಡೆದುಕೊಂಡರು.

ಪ್ರಾಥಮಿಕ ವಿಭಾಗ: ಪ್ರಥಮ ಸ್ಥಾನ ಸಲ್‍ಸಬೀಲ್ ಕೋಬಟ್ಟೆ,  ದ್ವಿತೀಯಾ ಸ್ಥಾನ ಮುಹಮ್ಮದ್ ಉನೈಸ್ ಸಿದ್ದೀಖಾ ಹಾಗೂ ತೃತೀಯ ಸ್ಥಾನ ಹಸನ್ ತಲ್ಹಾ ಸಿದ್ದಿಬಾಪ ಪಡೆದುಕೊಂಡಿದ್ದಾರೆ. 

ಜಾಲಿ ರಸ್ತೆಯಿಂದ ಬಹರೇನ್ ಬೀಚ್ ವರೆಗೆ ಸುಮಾರು 2ಕಿ.ಮೀ.ರಸ್ತೆಯಲ್ಲಿ ಸೈಕಲ್ ಸ್ಪರ್ಧೆ ನಡೆಯಿತು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...