ಪ್ರಧಾನಿ ಮೋದಿಗೆ 'ಅಪರಿಚಿತ ಬೆದರಿಕೆ': ಸಚಿವರು, ಅಧಿಕಾರಿಗಳೂ ಹತ್ತಿರ ಬರುವಂತಿಲ್ಲ!

Source: sonews | By Staff Correspondent | Published on 26th June 2018, 10:49 PM | National News | Don't Miss |

ಹೊಸದಿಲ್ಲಿ: ಪ್ರಧಾನಿ ಮೋದಿ ಅವರಿಗೆ ಸಾರ್ವಕಾಲಿಕ ತೀವ್ರ ಬೆದರಿಕೆಯಿರುವ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ನೂತನ ಭದ್ರತಾ ಮಾರ್ಗಸೂಚಿಯನ್ನು ಹೊರಡಿಸಿರುವ ಕೇಂದ್ರ ಗೃಹ ಸಚಿವಾಲಯವು,ವಿಶೇಷ ರಕ್ಷಣಾ ದಳ(ಎಸ್‌ಪಿಜಿ)ವು ಅನುಮತಿ ನೀಡದ ಹೊರತು ಸಚಿವರು ಮತ್ತು ಅಧಿಕಾರಿಗಳು ಸಹ ಪ್ರಧಾನಿಯವರ ಸಮೀಪ ಬರುವಂತಿಲ್ಲ ಎಂದು ಮೋದಿಯವರಿಗೆ ‘ಅಪರಿಚಿತ ಬೆದರಿಕೆ’ಯನ್ನು ಉಲ್ಲೇಖಿಸಿ ತಾಕೀತು ಮಾಡಿದೆ.

ಪ್ರಧಾನಿಯವರಿಗೆ ಈ ಹಿಂದೆಂದೂ ಇರದಷ್ಟು ತೀವ್ರ ಬೆದರಿಕೆಯಿದ್ದು,2019ರ ಲೋಕಸಭಾ ಚುನಾವಣೆಗಳಿಗೆ ಮುನ್ನ ಅವರು ಶತ್ರುಗಳಿಗೆ ‘ಅತ್ಯಂತ ಬೆಲೆಬಾಳುವ ಗುರಿ’ಯಾಗಿದ್ದಾರೆ ಎಂದು ಅದು ಹೇಳಿದೆ.

ಹೆಚ್ಚು ಅಪಾಯಕಾರಿಯಾಗಿರುವ ರೋಡ್ ಶೋಗಳನ್ನು ಕಡಿಮೆ ಮಾಡುವಂತೆ ಮತ್ತು ಅವುಗಳ ಬದಲಾಗಿ ಬಹಿರಂಗ ಸಭೆಗಳಲ್ಲಿ ಮಾತನಾಡುವಂತೆ ಎಸ್‌ಪಿಜಿ ಪ್ರಧಾನಿಯವರಿಗೆ ಸಲಹೆ ನೀಡಿದೆ ಎನ್ನಲಾಗಿದೆ. ಬಹಿರಂಗ ಸಭೆಗಳಲ್ಲಿ ಭದ್ರತೆಯನ್ನು ಕಾಯ್ದುಕೊಳ್ಳುವುದು ಸುಲಭ ಎಂದು ಅದರ ಅಭಿಪ್ರಾಯವಾಗಿದೆ.

ಪ್ರಧಾನಿಯವರ ಭದ್ರತೆಯ ನಿಕಟ ರಕ್ಷಣಾ ತಂಡ(ಸಿಪಿಟಿ)ಕ್ಕೆ ನೂತನ ಮಾರ್ಗಸೂಚಿಗಳು ಮತ್ತು ಬೆದರಿಕೆಗಳ ಬಗ್ಗೆ ತಿಳಿಸಲಾಗಿದ್ದು,ಅಗತ್ಯವಾದರೆ ಸಚಿವರು ಮತ್ತು ಅಧಿಕಾರಿಗಳನ್ನೂ ಮೈದಡವಿ ತಪಾಸಣೆಗೊಳಪಡಿಸುವಂತೆ ಸೂಚಿಸಲಾಗಿದೆ.

ನಿಷೇಧಿತ ಸಿಪಿಐ(ಮಾವೋವಾದಿ) ಜೊತೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ತಾವು ಬಂಧಿಸಿರುವ ಐವರ ಪೈಕಿ ಓರ್ವನ ದಿಲ್ಲಿ ನಿವಾಸದಿಂದ ತಾವು ಪತ್ರವೊಂದನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ರಾಜೀವ್ ಗಾಂಧಿಯವರ ಹತ್ಯೆ ಮಾದರಿಯಲ್ಲಿ ಮೋದಿಯವರ ಕೊಲೆಗೆ ಸಂಚನ್ನು ಉಲ್ಲೇಖಿಸಲಾಗಿತ್ತು ಎಂದು ಪುಣೆ ಪೊಲೀಸರು ಜೂ.7ರಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿಯವರ ರಕ್ಷಣಾ ವ್ಯವಸ್ಥೆಯನ್ನು ಎಳೆಎಳೆಯಾಗಿ ಪುನರ್‌ಪರಿಶೀಲಿಸಲಾಗಿದೆ.

ಅಲ್ಲದೆ ಮೋದಿಯವರು ಇತ್ತೀಚಿಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ವ್ಯಕ್ತಿಯೋರ್ವ ಆರು ಸುತ್ತುಗಳ ಭದ್ರತೆಯನ್ನು ಭೇದಿಸಿ ಒಳನುಗ್ಗಿ ಅವರ ಪಾದಗಳನ್ನು ಸ್ಪರ್ಶಿಸಿದ್ದ. ಈ ಘಟನೆ ಭದ್ರತಾ ಏಜೆನ್ಸಿಗಳ ಅಧಿಕಾರಿಗಳನ್ನು ಕಕ್ಕಾಬಿಕ್ಕಿಗೊಳಿಸಿತ್ತು.

ಇವೆರಡು ಬೆಳವಣಿಗೆಗಳ ಹಿನ್ನೆಲೆಯಲ್ಲಿ ಗೃಹಸಚಿವ ರಾಜನಾಥ ಸಿಂಗ್ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ ದೋವಲ್,ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ ಗಾಬಾ ಮತ್ತು ಗುಪ್ತಚರ ಸಂಸ್ಥೆಯ ನಿರ್ದೇಶಕ ರಾಜೀವ ಅವರೊಂದಿಗೆ ಸಭೆ ನಡೆಸಿ ಪ್ರಧಾನಿಯವರ ಭದ್ರತಾ ವ್ಯವಸ್ಥೆಯನ್ನು ಪುನರ್‌ಪರಿಶೀಲಿಸಿದ್ದರು.

ಪ್ರಧಾನಿಯವರು ತಮ್ಮ ರಾಜ್ಯಗಳಿಗ ಭೇಟಿ ನೀಡಿದಾಗ ಹೆಚ್ಚುವರಿ ಕಾಳಜಿಎಚ್ಚರಿಕೆಯನ್ನು ವಹಿಸುವಂತೆ ಛತ್ತೀಸಗಡ, ಜಾರ್ಖಂಡ್, ಮಧ್ಯಪ್ರದೇಶ, ಒಡಿಶಾ,ಪ.ಬಂಗಾಳದಂತಹ ನಕ್ಸಲ ಪೀಡಿತ ರಾಜ್ಯಗಳ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...