ವಿವಾಹಿತ ಮಹೆಳೆ ಬಾವಿಗೆ ಹಾರಿ ಆತ್ಮಹತ್ಯೆ

Source: sonews | By Staff Correspondent | Published on 22nd July 2017, 11:05 PM | Coastal News | Incidents | Don't Miss |

ಭಟ್ಕಳ: ತಾಲ್ಲೂಕಿನ ಬೆಳಕೆಯಲ್ಲಿ ವಿವಾಹಿತ ಮಹಿಳೆಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ.

ಮೃತ ಮಹಿಳೆಯನ್ನು ಶಿರಾಲಿ ಚಿತ್ರಾಪುರದ ನಿವಾಸಿ ವೀಣಾ ಶಿವರಾಮ ನಾಯ್ಕ (೨೯) ಎಂದು ಗುರುತಿಸಲಾಗಿದೆ. ಕಳೆದ ಫೆಬ್ರವರಿಯಲ್ಲಷ್ಟೇ ಈಕೆಯ ವಿವಾಹ ಚಿತ್ರಾಪುರದ ಶಿವರಾಮ ನಾಯ್ಕ ಎನ್ನುವವರೊಂದಿಗೆ ನಡೆದಿತ್ತು. ಬೆಳಕೆಯ ತನ್ನ ತವರು ಮನೆಗೆ ಬಂದಿದ್ದ ಈಕೆಯು ಶುಕ್ರವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯವರು ಈಕೆಯನ್ನು ರಾತ್ರಿ ಹುಡುಕಾಡುತ್ತಿರುವಾಗ ಬಾವಿಯಲ್ಲಿ ಬಿದ್ದಿರುವುದು ಪತ್ತೆಯಾಗಿತ್ತು. ನಂತರ ಅಗ್ನಶಾಮಕ ದಳದವರಿಗೆ ವಿಷಯ ತಿಳಿಸಿದ್ದು ಸಿಬ್ಬಂದಿಗಳು ಶವವನ್ನು ಮೇಲಕ್ಕೆ ತಂದಿದ್ದಾರೆ.  
ಈಕೆಯ ಪತಿ ಶಿವರಾಮ ನಾಯ್ಕ ಅವರ ಮೇಲೆ ಗ್ರಾಮೀಣ ಠಾಣೆಯಲ್ಲಿ ಆಕೆಯ ತಂದೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ತಹಸೀಲ್ದಾರ್ ವಿ.ಎನ್. ಬಾಡಕರ್, ಗ್ರಾಮೀಣ ಸಬ್ ಇನ್ಸಪೆಕ್ಟರ್ ಮಂಜಪ್ಪ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. 
 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...