ಇಂಧನ ಬೆಲೆ ಏರಿಕೆ ವಿರೋಧಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Source: sonews | By Staff Correspondent | Published on 10th September 2018, 5:11 PM | Coastal News | Don't Miss |

ಫರಂಗಿಪೇಟೆ: ಇಂಧನಗಳ ಬೆಲೆಯೇರಿಕೆಯನ್ನು ವಿರೋಧಿಸಿ ನಡೆಯುತ್ತಿರುವ ಭಾರತ ಬಂದ್ ಹಿನ್ನೆಲೆಯಲ್ಲಿ ಎಸ್‌ಡಿಪಿಐ ಪುದು ಗ್ರಾಮ ಸಮಿತಿಯ ವತಿಯಿಂದ ಫರಂಗಿಪೇಟೆಯಲ್ಲಿಂದು ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಪಕ್ಷದ ಮುಖಂಡ ರಿಯಾಝ್ ಫರಂಗಿಪೇಟೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಇಳಿಕೆಯಾದರೂ ಮೋದಿ ನೇತೃತ್ವದ ಕೇಂದ್ರ ಸರಕಾರ ಮಾತ್ರ ತೈಲ ಬೆಲೆಯನ್ನು ಏರಿಸುತ್ತ ಜನರ ಜೀವನದ ಮೇಲೆ ಬರೆ ಎಳೆಯುತ್ತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ. ಇತ್ಯಾದಿಗಳಿಂದ ಜನಸಾಮಾನ್ಯರ ಜೀವನ ದುಸ್ತರವಾಗಿದೆ. ಇದಲ್ಲದೆ ಗುಂಪು ಹಿಂಸೆಯಿಂದ ದೇಶದಲ್ಲಿ ಭಯಾನಕ ವಾತಾವರಣ ಸೃಷ್ಟಿಯಾಗಿ ಅಘೋಶಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ಎಸ್‌ಡಿಪಿಐ ಪುದು ಗ್ರಾಮ ಸಮಿತಿಯ ಅಧ್ಯಕ್ಷ ಇಕ್ಬಾಲ್ ಅಮೆಮಾರ್ ಪ್ರತಿಭಟನೆಯ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಮಂಗಳೂರು ಕ್ಷೇತ್ರ ಸಮಿತಿಯ ಉಪಾಧ್ಯಕ್ಷ ಸುಲೈಮಾನ್ ಉಸ್ತಾದ್, ಪುದು ಗ್ರಾಪಂ ಸದಸ್ಯ ನಝೀರ್, ತುಂಬೆ ಗ್ರಾಪಂ ಸದಸ್ಯ ಝಹೂರು, ತುಂಬೆ ಗ್ರಾಮ ಸಮಿತಿಯ ಅಧ್ಯಕ್ಷ ಅಝೀಝ್ ತುಂಬೆ, ಪುದು ಗ್ರಾಮ ಸಮಿತಿಯ ಉಪಾಧ್ಯಕ್ಷ ಅಬ್ಬಾಸ್ ಪೇರಿಮಾರ್‌ಮೊದಲಾದವರು ಭಾಗವಹಿಸಿದ್ದರು. ಖಾದರ್ ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...