ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ ಚಿತ್ರಕಲಾ ಶಿಕ್ಷಕ ಹೊಸಮನಿ ರಾಜ್ಯಮಟ್ಟಕ್ಕೆ

Source: sonews | By Staff Correspondent | Published on 6th December 2018, 11:50 PM | Coastal News | Don't Miss |

ಭಟ್ಕಳ: ಇಲ್ಲಿನ ಸರಕಾರಿ ಪ್ರೌಢಶಾಲೆ ಮುಂಡಳ್ಳಿಯ ಚಿತ್ರಕಲಾ ಶಿಕ್ಷಕರಾದ ಚೆನ್ನವೀರಪ್ಪ ರಾಯಪ್ಪ ಹೊಸಮನಿ ಇವರು  ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆಗೆ ಸತತವಾಗಿ 2 ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಉತ್ತರ ಕನ್ನಡ ಕಾರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂz ಜರುಗಿದ ಜಿಲ್ಲಾ ಮಟ್ಟದ ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಥಳದಲ್ಲೆ ಚಿತ್ರ ಬಿಡಿಸುವ ಸ್ಫರ್ಧೆಯಲ್ಲಿ ಭಾಗವಹಿಸಿ ಅವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. 
       
ಹಾಗೂ ಇದೇ ಶೈಕ್ಷಣಿಕ ವರ್ಷದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಕರ ಸದನ ಬೆಂಗಳೂರಿನಲ್ಲಿ ಆಯೋಜಿಸಿದ  ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿಯೂ ರಾಜ್ಯಮಟ್ಟವನ್ನು ಪ್ರತಿನಿಧಿಸಿರುತ್ತಾರೆ. ಇವರ ಈ ಸಾಧನೆಗೆ ಶಾಲಾ ಎಸ್.ಡಿ,ಎಂ, ಸಿ, ಮುಖ್ಯಾಧ್ಯಾಪಕರು ಶಿಕ್ಷಕ ವೃಂದ ಮತ್ತು ತಾಲೂಕಾ ಚಿತ್ರಕಲಾ ಶಿಕ್ಷಕರ ಸಂಘ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...