4 ವರ್ಷಗಳ ಮೋದಿ ಸರಕಾರದ ವೈಫಲ್ಯಗಳ ಸಂಪೂರ್ಣ ವಿವರ ನೀಡುವ Modireportcard.com

Source: sonews | By Staff Correspondent | Published on 30th May 2018, 11:53 PM | National News | Special Report | Public Voice | Don't Miss |

 

ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ 4 ವರ್ಷಗಳನ್ನು ಪೂರೈಸಿರುವ ನಡುವೆಯೇ modireportcard.com ಎನ್ನುವ ವೆಬ್ ಸೈಟ್ ಒಂದು ಕೇಂದ್ರ ಸರಕಾರ ಯಾವ್ಯಾವ ಕ್ಷೇತ್ರಗಳಲ್ಲಿ ಅಕ್ಷರಶಃ ವಿಫಲವಾಗಿದೆ ಎನ್ನುವ ಪಟ್ಟಿ ಮಾಡಿದೆ.

“ತಾನು ಪ್ರಧಾನಮಂತ್ರಿಯಾದರೆ ದೇಶವನ್ನು ಸುವರ್ಣಯುಗಕ್ಕೆ ಕೊಂಡೊಯ್ಯಲಿದ್ದೇನೆ ಎಂದು 2014ರಲ್ಲಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಲಕ್ಷಾಂತರ ಭಾರತೀಯರು ಅವರ ಅಭಿವೃದ್ಧಿ, ಉದ್ಯೋಗ, ಹಾಗು ಅಚ್ಚೇ ದಿನ್ ನ ಭರವಸೆಯನ್ನು ನಂಬಿ ಅಧಿಕಾರಕ್ಕೆ ತಂದರು. 4 ವರ್ಷಗಳ ನಂತರ ಭಾರತ ಹೇಗಿದೆ? ನರೇಂದ್ರ ಮೋದಿ ರಿಪೋರ್ಟ್ ಕಾರ್ಡ್ ನಿಮಗೆ ಉತ್ತರ ನೀಡುತ್ತದೆ” ಎನ್ನುವ ಒಕ್ಕಣೆ modireportcard.com ವೆಬ್ ಸೈಟ್ ನ ಆರಂಭದಲ್ಲಿದೆ.

ಮೋದಿ ಸರಕಾರದ ವೈಫಲ್ಯಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವುದು ‘ನಿರುದ್ಯೋಗ’

ಮೋದಿ ಸರಕಾರ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳ ನಂತರ ವಿಶ್ವದಲ್ಲೇ ಭಾರತದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿಗಳಿದ್ದಾರೆ ಎಂದು modireportcard.com ವೆಬ್ ಸೈಟ್ ಹೇಳುತ್ತದೆ.

ಪ್ರತಿ ವರ್ಷ ಒಂದು ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿ ಮೋದಿ ಅಧಿಕಾರಕ್ಕೆ ಬಂದಿದ್ದರು. ಆದರೆ ಕೇಂದ್ರ ಸರಕಾರವು ವಾರ್ಷಿಕ 2.05 ಲಕ್ಷ ಮಂದಿಗಷ್ಟೇ ಉದ್ಯೋಗ ನೀಡಿದೆ. 2014ರಲ್ಲಿ 3.41ಶೇ.ದಷ್ಟಿದ್ದ ನಿರುದ್ಯೋಗದ ಪ್ರಮಾಣ 2018ರಲ್ಲಿ 6.23ರಷ್ಟಾಗಿದೆ.

ಭರವಸೆ ನೀಡಿದಂತೆ 4 ವರ್ಷಗಳಲ್ಲಿ 4 ಕೋಟಿ ಉದ್ಯೋಗ ಸೃಷ್ಟಿಯ ಬದಲಾಗಿ, 8.23 ಲಕ್ಷ ಉದ್ಯೋಗಗಳಷ್ಟೇ ಸೃಷ್ಟಿಯಾಗಿವೆ ಎಂದು ತಿಳಿಸಲಾಗಿದೆ. ಇದಕ್ಕೆ ಬೇಕಾದ ಸುದ್ದಿಯ ಲಿಂಕ್ ಗಳನ್ನೂ ನಮೂದಿಸಲಾಗಿದೆ.

ಇಷ್ಟೇ ಅಲ್ಲದೆ ಇತ್ತೀಚಿನ ದಿನಗಳಲ್ಲಿ ದೇಶದ ಜನರ ಕೋಪಕ್ಕೆ ತುತ್ತಾಗಿರುವ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ಬಗ್ಗೆಯೂ ವಿವರಿಸಲಾಗಿದೆ. ಈ ಹಿಂದೆಂದಿಗಿಂತಲೂ ತೈಲ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಜಗತ್ತಿನಾದ್ಯಂತ ಕಚ್ಛಾ ತೈಲ ಬೆಲೆಯು ಕನಿಷ್ಠವಿರುವ ಈ ಸಮಯದಲ್ಲಿ ದೇಶದಲ್ಲಿ ಈ ಪರಿಸ್ಥಿತಿಯಿದೆ. ಬಿಜೆಪಿ ಸರಕಾರವು ಪೆಟ್ರೋಲ್ ಹಾಗು ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತಲೇ ಇದೆ. ತೈಲದ ಮೇಲಿನ ಸುಂಕದಿಂದ 2014ರಿಂದ ಸರಕಾರವು 4.5 ಲಕ್ಷ ಕೋಟಿ ರೂ,ಗಳನ್ನು ಗಳಿಸಿದೆ. ಅದರೆ ಜನಸಾಮಾನ್ಯರಿಗಾಗಿ ಯಾವ ಪ್ರಯೋಜನವನ್ನೂ ನೀಡಿಲ್ಲ. “ಈ ಎಲ್ಲಾ ಹಣ ಎಲ್ಲಿ ಹೋಯಿತು?” ಎನ್ನುವುದೇ ಅತೀ ದೊಡ್ಡ ಪ್ರಶ್ನೆಯಾಗಿದೆ” ಎಂದು modireportcard.com ವೆಬ್ ಸೈಟ್ ಉಲ್ಲೇಖಿಸಿದೆ.

ಕೇಂದ್ರ ಸರಕಾರದ ವೈಫಲ್ಯಗಳನ್ನು ಪಟ್ಟಿ ಮಾಡಲೆಂದೇ ಈ ವೆಬ್ ಸೈಟನ್ನು ರಚಿಸಲಾಗಿದೆ. ಸರಕಾರದ ಪ್ರತಿಯೊಂದು ವೈಫಲ್ಯತೆಗಳನ್ನು ಪಟ್ಟಿ ಮಾಡುವಾಗ ಸುದ್ದಿ ಲಿಂಕ್ ಗಳನ್ನು ನೀಡಲಾಗಿದೆ. ವ್ಯಂಗ್ಯಚಿತ್ರಗಳನ್ನು ಬಳಸಲಾಗಿದ್ದು, ಇಲಸ್ಟ್ರೇಟರ್ ಗಳ ಮೂಲಕ ವಿಷಯಗಳನ್ನು ಪ್ರಸ್ತುತಪಡಿಸಲಾಗಿದ್ದು, ಓದುಗರಿಗೆ ಸುಲಭವಾಗಿ ಮನದಟ್ಟಾಗುವ ಹಾಗೆ ಸರಳ ಭಾಷೆಯನ್ನು ಬಳಸಲಾಗಿದೆ. ಇಷ್ಟೇ ಅಲ್ಲದೆ ಕೆಲವೊಂದು ವೈಫಲ್ಯತೆಗಳನ್ನು ಪಟ್ಟಿ ಮಾಡುವ ಸಂದರ್ಭ ನಕಾಶೆಗಳ ಮೂಲಕವೂ ವಿವರಿಸಲಾಗಿದೆ. ಈ ವೆಬ್ ಸೈಟ್ ದಿನೇ ದಿನೇ ಹೆಚ್ಚು ಜನಪ್ರಿಯತೆ ಗಳಿಸುತ್ತಿದ್ದು, ಭಾರೀ ಮೆಚ್ಚುಗೆಗೂ ಪಾತ್ರವಾಗಿದೆ.

ಕೃಪೆ:vbnewsonline.com 

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

“ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ, ಸಮಾಜಿಕ ಬದಲಾವಣೆ”-ಐಟಾ ದಿಂದ ರಾಷ್ಟ್ರೀಯ ಶೈಕ್ಷಣಿಕ ಅಭಿಯಾನ

ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ ಮತ್ತು ಸಮಾಜಿಕ ಬದಲಾವಣೆ ಈ ಮೂರು ಅಂಶಗಳು ಪರಸ್ಪರ ಸಂಬಂಧ ಹೊಂದಿವೆ. ಬೋಧನಾ ಪ್ರಬುದ್ಧತೆಯು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...