ಮುಂದಿನ ಪೀಳಿಗೆಗಾಗಿ ಜೀವ ಜಲ ಸಂರಕ್ಷಿಸಿ : ಜಿಲ್ಲಾಧಿಕಾರಿ ಅಕ್ರಂ ಪಾಷ

Source: so news | By MV Bhatkal | Published on 23rd March 2019, 12:11 AM | State News | Don't Miss |


ಹಾಸನ:ನೈಸರ್ಗಿಕವಾಗಿ ದೊರೆಯುವ ನೆಲ,ಜಲ,ವಾಯು ಸಂಪನ್ಮೂಲಗಳಿಗೆ ಗಂಡಾಂತರ ಬಂದೊದಗಿದ್ದು, ನಮ್ಮ ಮುಂದಿನ ಪೀಳಿಗೆಗಾಗಿ ಜೀವಜಲವನ್ನು ಸಂರಕ್ಷಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಹೊಯ್ಸಳ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವ ನೀರಿನ ದಿನಾಚರಣೆಯನ್ನು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ನೀರಿನ ಮಹತ್ವ ಹೆಚ್ಚಿದ್ದು ಕಾವೇರಿ ವಿಚಾರದಲ್ಲಿ ಆದ ಗಂಭೀರ ಘಟನೆಗಳಿಂದ ಎಚ್ಚೆತ್ತುಕೊಂಡು ಜಲವನ್ನು ಉಳಿಸಬೇಕಿದೆ ಎಂದು ತಿಳಿಸಿದರು.
ಭಾರತದಲ್ಲಿ ಎಷ್ಟೋ ಹಳ್ಳಿಗಳಲ್ಲಿ ನೀರಿನ ಹಾಹಾಕಾರವಿದೆ. ನೀರನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆರೆ-ಕಟ್ಟೆಗಳ ನಿರ್ಮಾಣ, ಹೂಳು ತೆಗೆಯುವಿಕೆ ಸೇರಿದಂತೆ ಹಲವಾರು ಮಾರ್ಗಗಳನ್ನು ನೆರವೇರಿಸುತ್ತಿದ್ದು ಜಲಸಂರಕ್ಷಣೆ ಕೂಡ ನಡೆಯುತ್ತಿದೆ. ನೀರಿನ ಸಂರಕ್ಷಣೆಯನ್ನು ಕುರಿತು ಸಾರ್ವಜನಿಕರು ಜಾಗೃತರಾಗಿ ಜೀವ ಜಲವನ್ನು ಸಂರಕ್ಷಿಸಿ ಹಿತಮಿತವಾಗಿ ಬಳಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಎ.ಎನ್.ಪ್ರಕಾಶ್ ಗೌಡ ಮಾತನಾಡಿ ಎಲ್ಲರೂ ನೀರನ್ನು ಅನಾವಶ್ಯಕವಾಗಿ ಪೋಲು ಮಾಡುತ್ತಿದ್ದು, ಈ ಬಗ್ಗೆ ಜಾಗೃತರಾಗಬೇಕು ನಾವೆಲ್ಲರೂ ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ದೈನಂದಿನ ಜೀವನದಲ್ಲಿ ನೀರನ್ನು ಉಳಿಸುವ ಕಾರ್ಯವನ್ನು ಮಾಡಬೇಕು ಎಂದು ಪ್ರಕಾಶ್‍ಗೌಡ ತಿಳಿಸಿದರು.
ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿವಾಹಕ ಅಧಿಕಾರಿ ಡಾ.ಕೆ.ಎನ್ ವಿಜಯ್ ಪ್ರಕಾಶ್ ಮಾತನಾಡಿ ನಾವು ಜಲಸಂರಕ್ಷಣೆಗೆ ಇಂದೆ ಜಾಗೃತರಾಗಿ ಕಾರ್ಯ ಪ್ರವೃತ್ತರಾಗದೇ ಇದ್ದಲ್ಲಿ ಮುಂದೊಂದು ದಿನ ನೀರಿಗಾಗಿ ಅಪಾಯ ಎದುರಾಗಲಿದೆ ಎಂದು ಅವರು ಹೇಳಿದರು.
ಇಂದು ನೀರಿನ ಕೊರತೆ ಜಾಗತಿಕ ಸಮಸ್ಯೆಯಾಗಿದ್ದು. ಪ್ರತಿ ಹನಿ ನೀರಿನ ಉಳಿವಿಗಾಗಿ ಜವಾಬ್ದಾರಿವಹಿಸಬೇಕಿದೆ. ಜಿಲ್ಲೆಯಲ್ಲಿ 267 ಗ್ರಾಮ ಪಂಚಾಯಿತಿ ಹಂತದಲ್ಲಿ ಹಾಗೂ ಎಲ್ಲಾ ಇಲಾಖೆಗಳು ಒಟ್ಟಾಗಿ ಈ ರೀತಿಯ ಜಲ ಸಂರಕ್ಷಣೆಯ ಕಾರ್ಯವನ್ನು ಮಾಡಬೇಕು ಎಂದರು.
ಸ್ವಾಭಾವಿಕ ಸಂಪನ್ಮೂಲಗಳನ್ನು ಕಾಪಾಡುವಲ್ಲಿ ನಾವು ವಿಫಲವಾಗಿರುವುದರಿಂದ ಅನೇಕ ಜ್ವಲಂತ ಸಮಸ್ಯೆಗಳು ಕಾಣುತ್ತಿವೆ. ಜಲಾಮೃತ ಎಲ್ಲರಿಗೂ ಶಕ್ತಿ ತುಂಬುವಂತದ್ದು, ಪ್ರತಿಯೊಬ್ಬರು ಆತ್ಮವಲೋಕನ ಮಾಡಿಕೊಂಡು ವೈಯಕಿಕವಾಗಿ ನೀರಿನ ಸಂರಕ್ಷಣೆಗೆ ಮುಂದಾಗುವಂತೆ ತಿಳಿಸಿದರು.
ಇದೇ ವೇಳೆ ಕುಡಿಯುವ ನೀರು ಸಂರಕ್ಷಣೆಯ ಕುರಿತು ಪ್ರತಿಜ್ಞೆಯನ್ನು ಜಿಲ್ಲಾಧಿಕಾರಿ ಅಕ್ರಂಪಾಷ ಬೋಧಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುಟ್ಟಸ್ವಾಮಿ ಉಪಸ್ಥಿತರಿದ್ದರು. ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್.ಟಿ.ವಿ ಸ್ವಾಗತಿಸಿ ಮುಖ್ಯ ಯೋಜನಾಧಿಕಾರಿಗಳಾದ ಪರಪ್ಪಸ್ವಾಮಿ ವಂದಿಸಿದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...