ಮೀನುಗಾರರ ಪತ್ತೆ ಹಚ್ಚುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿಫಲ: ಸಾವಿರಾರು ಮೀನುಗಾರರಿಂದ ಬೃಹತ್ ಪ್ರತಿಭಟನೆ

Source: sonews | By Staff Correspondent | Published on 3rd January 2019, 5:24 PM | Coastal News | Don't Miss |

ಭಟ್ಕಳ: ಕಳೆದ 15ದಿನಗಳಿಂದ ಮೀನುಗಾರಿಕೆಗೆ ತೆರಳಿದ್ದ ನಾಪತ್ತೆಯಾಗಿದ್ದ ಮೀನುಗಾರರನ್ನು ಪತ್ತೆ ಹಚ್ಚುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲಗೊಂಡಿವೆ ಎಂದು ಆರೋಪಿಸಿ ಇಲ್ಲಿನ ಸಾವಿರಕ್ಕೂ ಹೆಚ್ಚು ಮೀನುಗಾರರು ಪ್ರತಿಭಟನೆ ನಡೆಸುವುದರ ಮೂಲಕ ಸಹಾಯಕ ಆಯುಕ್ತರಿಗೆ ಮನವಿಯನ್ನು ಸಲ್ಲಿಸಿದ್ದು ನಾಪತ್ತೆಯಾಗಿರುವ ಮೀನುಗಾರರನ್ನು ಕೂಡಲೆ ಪತ್ತೆ ಹಚ್ಚಬೇಕೆಂದು ಆಗ್ರಹಿಸಿದರು.

ಈ ಕುರಿತಂತೆ ಗುರುವಾರದಂದು ಇಲ್ಲಿನ ಸಂತೆ ಮಾರುಕಟ್ಟೆಯಲ್ಲಿರುವ ನೂತನ ಮೀನುಮಾರುಕಟ್ಟೆಯ ಬಳಿ ಸೇರಿ ಪ್ರತಿಭಟನೆ ನಡೆಸಿದ ಸಾವಿರಾರು ಮೀನುಗಾರರು ಮೆರವಣೆಗೆಯ ಮೂಲಕ ಸಹಾಯಕ ಆಯುಕ್ತರ ಕಚೇರಿಗೆ ತಲುಪಿ ಮೀನುಗಾರರನ್ನು ಹುಡುಕಿಕೊಡುವಂತೆ ಮನವಿ ಸಲ್ಲಿಸಿದರು. 

ತಂತ್ರಜ್ಞಾನ ಅಭಿವೃದ್ಧಿಯು ಈ ಯುಗದಲ್ಲಿ  ನಾಪತ್ತೆಯಾಗಿರುವ ಮೀನುಗಾರರ ಬೋಟಿನಲ್ಲಿ ಜಿಪಿಎಸ್ ತಂತ್ರಾಂಶ ಹೊಂದಿದ್ದರೂ ಒಂದು ಬೋಟನ್ನು ಪತ್ತೆ ಹಚ್ಚಲು ಸರ್ಕಾರ ಹಾಗೂ ತನಿಖಾ ಸಂಸ್ಥೆಗಳಿಂದ ಸಾಧ್ಯವಾಗಿಲ್ಲ ಎಂದಾದರೆ, ಕೇವಲ ಮೀನುಗಾರರ ಸುರಕ್ಷೆಯಷ್ಟೆಯಲ್ಲದೆ ಇದು ದೇಶದ ಸುರಕ್ಷತೆಯ ಪ್ರಶ್ನೆಯಾಗಿದೆ ಎಂದು ಮನವಿಪತ್ರದಲ್ಲಿ ಆರೋಪಿಸಲಾಗಿದೆ. 

ಮೀನುಗಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಮೆರವಣೆಗೆಯಲ್ಲಿ ಘೋಷಣೆಗಳನ್ನು ಕೂಗುತ್ತ ಸಹಾಯಕ ಆಯುಕ್ತ ಕಚೇರಿ ತಲುಪಿತು. ಸಹಾಯಕ ಆಯುಕ್ತರ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯನ್ನು ರವಾನಿಸಿರುವ ಮೀನುಗಾರರು ಜ.6 ರೊಳಗೆ ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಕ್ರಮವಹಿಸದಿದ್ದಲ್ಲಿ ಉಡುಪಿ ಜಿಲ್ಲೆಯ ಮಲ್ಪೆಯಿಂದ ಕರಾವಳಿ ಜಿಲ್ಲೆಗಳ 2ಲಕ್ಷಕ್ಕೂ ಅಧಿಕ ಮೀನುಗಾರರು ಪ್ರತಿಭಟನೆಯನ್ನು ನಡೆಸುವುದಾಗಿ  ಮನವಿ ಪತ್ರದಲ್ಲಿ ಎಚ್ಚರಿಕೆಯನ್ನು ನೀಡಿದ್ದಾರೆ. 

ಡಿ.13ರಂದು 7ಮೀನುಗಾರರಿದ್ದ ಬೋಟೊಂದು ಉಡುಪಿ ಜಿಲ್ಲೆಯ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದು ಎರಡು ದಿನಗಳ ನಂತರ ಡಿ.15ರಿಂದ ಮೀನುಗಾರರೊಂದಿಗೆ ಸಂಪರ್ಕ ಕಡಿತಗೊಂಡಿದೆ. ಅದರ ನಂತರ ಇಂದಿನ ವರೆಗೆ ಅವರ ಪತ್ತೆಯೆ ಆಗಿಲ್ಲ. ನಾಪತ್ತೆಯಾಗಿರುವ 7 ಮೀನುಗಾರರ ಪೈಕಿ ಭಟ್ಕಳದ ಇಬ್ಬರು, ಕುಮಟಾದ ಇಬ್ಬರು ಹೊನ್ನಾವರದ ಒಬ್ಬರು ಮತ್ತು ಮಲ್ಲೆಯ ಇಬ್ಬರು ಮೀನುಗಾರರು ಸೇರಿದ್ದಾರೆ ಎನ್ನುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. 
 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...