ಸಾಮಾಜಿಕ ತಾಣಗಳಲ್ಲಿ ಬಡ ಹಿಂದೂ ಹುಡುಗಿಯರ ಮಾನ ಹರಾಜು ಮಾಡುತ್ತಿರುವ ವಿಕೃತ ಕಾಮಿಗಳು

Source: sonews | By Staff Correspondent | Published on 11th March 2018, 6:19 PM | Coastal News | State News | Special Report | Don't Miss |

ಓರ್ವನ ಬಂಧನ, ಪೊಲೀಸರಿಂದ ಕಠಿಣ ಕ್ರಮಕ್ಕೆ ನೊಟೀಸ್ ಜಾರಿ

ಲೌ ಜಿಹಾದ್ ಎಂದು ಸಾಮಾಜಿಕ ತಾಣದಲ್ಲಿ ವೈರಲ್ ಮಾಡುತ್ತಿರುವ ದೇಶದ್ರೋಹಿಗಳು

ಭಟ್ಕಳ: ತಾಲೂಕಿನ ಪ್ರತಿಷ್ಠಿತ ಕಾಲೇಜೊಂದರ ಹಿಂದೂ-ಮುಸ್ಲಿಮ್ ಸಹಪಾಠಿಗಳ ಸೆಲ್ಫಿ ಫೋಟೊಗಳನ್ನು ಬಳಸಿ ಅಶ್ಲೀಲ ಫೋಟೊಗಳನ್ನು ಸೃಷ್ಟಿಸಿ ಲೌ ಜಿಹಾದ್ ಎಂದು ಬಿಂಬಿಸಿ ಕೋಮು ವೈಷಮ್ಯ ಹರಡಿ ದ್ರೇಶದ್ರೋಹಿ, ಸಮಾಜದ್ರೋಹಿ ಕೃತ್ಯ ಎಸಗುತ್ತಿರುವ ಓರ್ವನನ್ನು ಬಂಧಿಸಿದ ಜಿಲ್ಲಾ ಪೊಲೀಸ್ ವಿಶೇಷ ತಂಡ ಈ ಪ್ರಕರಣದಲ್ಲಿ  ಹಲವು ಯುವಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಹಿಂದುಳಿದ ಬಡ ಕುಟುಂಬಕ್ಕೆ ಸೇರಿದ ಇಬ್ಬರು ಯುವತಿಯರ ಸೆಲ್ಫಿ ಫೋಟೊವನ್ನು ಬಳಸಿಕೊಂಡಿರುವ ಮನೋ ವಿಕೃತರು ಅದನ್ನು ಅಶ್ಲೀಲ ಫೋಟೊಗಳೊಂದಿಗೆ ಜೋಡಿಸಿದ್ದಲ್ಲದೆ ಸಾಮಾಜಿಕ ಜಾಲಾತಾಣಗಳಲ್ಲಿ ಹರಿಯಬಿಟ್ಟಿದ್ದು ಪ್ರತಿಷ್ಠಿತ ಕಾಲೇಜೊಂದರ ಹೆಸರನ್ನು ಬಳಸಿಕೊಂಡು ಅಲ್ಲಿ ಓದುತ್ತಿರುವ ಹಿಂದು ವಿದ್ಯಾರ್ಥಿನಿಯರೊಂದಿಗೆ ಮುಸ್ಲಿಮ್ ವಿದ್ಯಾರ್ಥಿಗಳು ಲೌ ಜಿಹಾದ್ ನಡೆಸುತ್ತಿದ್ದಾರೆ ಇದರಿಂದಾಗಿ  ಹಿಂದೂ ಧರ್ಮ ಅಪಾಯದಲ್ಲಿದೆ ಎನ್ನುವಂತಹ ಬರಹಗಳನ್ನು ಉದ್ರಿಕ್ತ ಶೀರ್ಷಿಕೆಯೊಂದಿಗೆ ಜಾಲಾ ತಾಣಗಳಲ್ಲಿ ಹರಿದು ಬಿಡುತ್ತಿದ್ದು ಭಟ್ಕಳ ಪರಿಸರದಲ್ಲಿ ಕೋಮು ಗಲಭೆಯನ್ನು ಸೃಷ್ಟಿಸುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಬಡ ವಿದ್ಯಾರ್ಥಿನೀಯರು ಉನ್ನತ ವಿದ್ಯಾಭ್ಯಾಸಕ್ಕಾಗಿ ಹರಸಹಾಸ ನಡೆಸುತ್ತಿರುವ ಈ ಕಾಲಘಟ್ಟದಲ್ಲಿ ಸಮಾಜ ಘಾತುಕ ವಿಕೃತ ಮನೋಕಾಮಿಗಳು ಬಡ ಹಿಂದೂ ವಿದ್ಯಾರ್ಥಿನೀಯರನ್ನು ಗುರಿಯಾಗಿಸಿಕೊಂಡು ಅವರ ಮಾನ ಹರಣಕ್ಕೆ ಮುಂದಾಗಿದ್ದು ಇದರಿಂದಾಗಿ ವಿದ್ಯಾರ್ಥಿನೀಯರ ಭವಿಷ್ಯ ತೂಗುಗತ್ತಿಯಲ್ಲಿ ಅಲಗಿನ ಮುಂದೆ ಹೆಣಗಾಡುವಂತಾಗಿದೆ. ಹೆಣ್ಣನ್ನು ಕೇವಲ ಭೋಗದ ವಸ್ತುವನ್ನಾಗಿ ಬಳಸಿಕೊಳ್ಳುತ್ತಿರುವ ವಿಕೃತ ಕಾಮಿಗಳನ್ನು ಅವರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. ಹೆತ್ತವರು ತಮ್ಮ ಮಾನ ಕಳೆದುಕೊಂಡು ನೇಣಿಗೆ ಶರಣಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ರಾಜಕೀಯ ನಾಯಕರ ಕುರಿತಂತೆ ವಾಟ್ಸಪ್ ನಲ್ಲಿ ಮಾನಹಾನಿಕರ ರೀತಿಯಲ್ಲಿ ಸಂದೇಶ ಹರಿಯಬಿಡುತ್ತಿದ್ದ ಸಮಾಜಘಾತುಕರು ಈದೀಗ ತಮ್ಮ ಊರಿನ ಹೆಣ್ಣುಮಕ್ಕಳ ಮಾನ ಹರಾಜಿಗೂ ಮುಂದಾಗಿದ್ದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು: ುರಿತಂತೆ ಅಮಾಯಕ ಬಡ ಹಿಂದೂ ವಿದ್ಯಾರ್ಥಿನೀಯರ ಪಾಲಕರು  ಹಾಗೂ ಮುರುಡೇಶ್ವರ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯರು  ಪೊಲೀಸರಿಗೆ ದೂರನ್ನು ನೀಡಿದ್ದು ಈ ಹಿನ್ನೆಯಲ್ಲಿ

ಆರೋಪಿತ ವಿರುದ್ಧ ಗುನ್ನಾ ನಂ ೬೭/೨೦೧೮ ಕಲಂ:೧೫೩(ಎ), ೫೦೫(೨), ೨೯೨ ಐಪಿಸಿ-೧೮೬೦, ಕಲಂ ೪ ಮತ್ತು ೬ ಮಹಿಳೆಯರನ್ನು ಅಶ್ಲೀಲವಾಗಿ ಭಿತ್ತರಿಸುವುದನ್ನು ನಿರ್ಭಂಧಿಸುವ ಅಧಿನಿಯಮ-೧೯೮೬, ಕಲಂ ೬೭ ಮತ್ತು ೬೭(ಎ) ಮಾಹಿತಿ ತಂತ್ರಜ್ಞಾನ ಕಾಯ್ದೆ-೨೦೦೦ ಕಲಂ ೨೦, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಪೋಸ್ಕೊ ೨೦೧೨ ಅಡಿಯಲ್ಲಿ ಆರೋಪಿತರಾದ ಯೋಗೇಶ, ತಿರು, ಹೇಮಂತ ಹಾಗೂ ಇತರರ ಮೇಲೆ ಪ್ರಕರಣ ದಾಖಲಿಸಲಾಗಿದ್ದು ಯೋಗೇಶ ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಎಲ್ಲರನ್ನೂ ಬಂಧಿಸಲಾಗುವುದು-ಎಸ್.ಪಿ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ , ಇಂಹತ ಕುಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಎಲ್ಲರನ್ನೂ ಬಂಧಿಸಿ ಜೈಲಿಗಟ್ಟಲಾಗುವುದು. ಯಾರು ಕೂಡ ಇಂತಹ ಸಂದೇಶಗಳನ್ನು ಲೈಕ್ ಮಾಡುವುದಾಗಲಿ, ಫಾರ್ವರ್ಡ್ ಮಾಡುವುದಾಗಲಿ ಮಾಡಕೂಡದು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಈ ಕುರಿತಂತೆ ಉತ್ತರಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯೊಂದನ್ನು ನೀಡಿದ್ದು ಅದರ ಯಥಾ ಪ್ರತಿ ಈ ರೀತಿಯಾಗಿದೆ.

 

ಪೊಲೀಸ್_ಪ್ರಕಟಣೆ_ಉತ್ತರ_ಕನ್ನಡ

ಕಳೆದ 2 ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಂಬಂದ ಪಡದ ಬೇರೆ ಯಾವುದೋ ಅಪರಿಚಿತ ಯುವಕ ಯುವತಿಯರ ಅಶ್ಲೀಲ ಚಿತ್ರಗಳನ್ನು ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಂಬಂಧ ಪಟ್ಟಿದ್ದೆಂದು ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಭಿತ್ತರಿಸುತ್ತಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳ ನೈಜ ಚಿತ್ರಗಳೊಂದಿಗೆ ಅವರಿಗೆ ಸಂಬಂಧಪಡದ ಅಶ್ಲೀಲ ಚಿತ್ರಗಳನ್ನು ಸೇರಿಸಿ, ಅಶ್ಲೀಲ ಚಿತ್ರಗಳು ವಿದ್ಯಾರ್ಥಿಗಳಿಗೆ ಸಂಬಂಧ ಪಟ್ಟಿದ್ದೆಂದು ಸುಳ್ಳು ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿ ಜಿಲ್ಲೆಯಾದ್ಯಂತ ಕೋಮು ಪ್ರಚೋದಕ ಭಾವನೆಯನ್ನು ಕೆಲವು ಕಿಡಿಗೇಡಿಗಳು ಸೃಷ್ಟಿಸುತ್ತಿರುವದಾಗಿ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿರುತ್ತದೆ.

ಈಗಾಗಲೇ ಕಳೆದ 4 ತಿಂಗಳಿನಿಂದ ಜಿಲ್ಲೆಯಲ್ಲಿ ಅಪರಾಧ ಪ್ರವೃತ್ತಿಯ ಕಿಡಿಗೇಡಿಗಳು ಕೋಮು ದ್ವೇಷವನ್ನು ಉಲ್ಬಣಗೊಳಿಸುವ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಭಿತ್ತಿರಿಸಿದ್ದು ಇದರಿಂದ ಕಾನೂನು ಸುವ್ಯಸ್ಥೆಗೆ ತೊಂದರೆ ಉಂಟಾಗಿದ್ದು ನಿಟ್ಟಿನಲ್ಲಿ ರೀತಿ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗ ಪಡಿಸಿಕೊಂಡು ಸುಳ್ಳು ಸಂದೇಶಗಳನ್ನು ಭಿತ್ತರಿಸಿದ ಅಪರಾಧಿಗಳ ವಿರುದ್ದ ಕಳೆದ 4 ತಿಂಗಳಿನಲ್ಲಿ 80ಕ್ಕಿಂತಲೂ ಹೆಚ್ಚಿನ ಅಪರಾಧ ಪ್ರಕರಣಗಳನ್ನು ದಾಖಲಾಗಿರುತ್ತದೆ. ಹೀಗೆ ದಾಖಲಿಸಿದ ಪ್ರಕರಣಗಳಲ್ಲಿ ಆರೋಪಿತರನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು ಕೆಲವು ಅಪರಾಧಿಗಳು ಈಗಲೂ ಸಹ ನ್ಯಾಯಾಂಗ ಬಂಧನದಲ್ಲಿಯೇ ಇರುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಚಿತ್ರಗಳನ್ನು ಭಿತ್ತರುವುದು, ಶೇರ್ ಮಾಡುವುದು, ಅಥವಾ ಒಪ್ಪಿಗೆ ಸೂಚಿಸುವುದು ಕಾನೂನಿನ ಪ್ರಕಾರ ಅಪರಾಧವಾಗುತ್ತಿದ್ದು ಮುಖ್ಯವಾಗಿ ಮಹಿಳೆಯರ ಅಶ್ಲೀಲ ಚಿತ್ರಗಳನ್ನು ಭಿತ್ತರಿಸುವುದು ಭಾರೀ ಪ್ರಮಾಣದ ಅಪರಾಧವಾಗಿರುತ್ತದೆ. ಹಾಗೂ ವಿವಿಧ ಕೋಮುಗಳ ಮಧ್ಯೆ ದ್ವೇಷಮಯ ವಾತಾವರಣ ಸೃಷ್ಟಿ ಆಗುವಂತಹ ಯಾವುದೇ ವರ್ತಮಾನವನ್ನು ಪ್ರಚಾರ ಮಾಡುವುದು ಸಹ ಅಪರಾಧವಾಗಿರುತ್ತದೆ. ಕುರಿತಾಗಿ ಕೆಳಕಂಡ ಕಾನೂನಿನ ಅಡಿಯಲ್ಲಿ ಅಪರಾಧವಾಗಿರುತ್ತದೆ.

1) ಭಾರತೀಯ ದಂಡ ಸಂಹಿತೆ (Indian Penal Code-1860)

2) ಮಹಿಳೆಯರನ್ನು ಅಶ್ಲೀಲವಾಗಿ ಭಿತ್ತರಿಸುವುದನ್ನು ನಿರ್ಭಂಧಿಸುವ ಅಧಿನಿಯಮ-1986 (Indecent Representation of Women (Prohibition) Act-1986,

3) ಮಾಹಿತಿ ತಂತ್ರಜ್ಞಾನ ಕಾಯ್ದೆ (Information Technology Act-2000)

ಇನ್ನು ಮುಂದೆ ಯಾರೇ ವಿವಿಧ ಮತ, ಧರ್ಮಗಳ ಮಧ್ಯೆ ಕೋಮು ಸಂಘರ್ಷ ಎರ್ಪಡಬಹುದಾದ ವರ್ತಮಾನವನ್ನು ಅಥವಾ ಮಹಿಳೆಯರ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಭಿತ್ತರಿಸುವವರ ವಿರುದ್ದ ಕಟ್ಟುನಿಟ್ಟಿನ ಕಾನೂನಿನ ಕ್ರಮವನ್ನು ಜರುಗಿಸಲಾಗುವುದು ಎಂಬುದಾಗಿ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಹಾಗೂ ಒಂದೊಮ್ಮೆ ಯಾರಾದರೂ ರೀತಿ ಪ್ರಸರಣ ಮಾಡಿದ್ದಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ವಾಟ್ಸಪ್ ನಂ. 9480805200 ನೇದಕ್ಕೆ ಸಾರ್ವಜನಿಕರು ಮಾಹಿತಿಯನ್ನು ನೀಡಬೇಕಾಗಿ ವಿನಂತಿ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...