ತಬ್ಲಿಗಿ ಜಮಾಅತ್ ನ ಮುಂಚೂಣಿ ನಾಯಕ ಮೌಲಾನ ಗಝಾಲಿ ನಿಧನ

Source: sonews | By Staff Correspondent | Published on 8th June 2018, 8:24 PM | Coastal News | State News | Don't Miss |

ಭಟ್ಕಳ: ಇಲ್ಲಿನ ತಬ್ಲಿಗಿ ಜಮಾಅತ್ ನ ಮುಂಚೂಣಿಯ ನಾಯಕರಲ್ಲೋರ್ವರಾಗಿದ್ದ ಮೌಲಾನ ಗಝಾಲಿ ಖತೀಬ್ ನದ್ವಿ (74) ಶುಕ್ರವಾರ ತಮ್ಮ ಸ್ವಗೃಹ ಮುಗ್ಲಿಹೊಂಡಿ(ಪುರವರ್ಗದಲ್ಲಿ) ನಿಧನರಾದರು. 

ಅವರು ರಮಝಾನ ತಿಂಗಳ ಉಪವಾಸಾಚರಣೆಯ  ಬೆಳಗಿನ ಪಾರಣೆ ಮುಗಿಸಿ ಫಝ್ರ್ ನಮಾಝ್ ನಿರ್ವಹಿಸಲು ಅಣಿಯಗುತ್ತಿದ್ದಂತೆ ಅವರು ನಿಧನರಾದರೆಂದು ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ ಯಾವುದೇ ದೈಹಿಕ ತೊಂದರೆಯಾಗಲಿ ಆರೋಗ್ಯ ಸಮಸ್ಯೆಯಾಗಲಿ ಇರಲಿಲ್ಲ. 

ಮೌಲಾನ ಗಝಾಲಿ ತಬ್ಲಿಗಿ ಜಮಾಅತ್ ಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದು  ಅಂಜುಮನ್ ಶಾಲೆಯಲ್ಲಿ 10ನೇ ತರಗತಿಯನ್ನು ಪೂರ್ಣಗೊಳಿಸಿ ನಂತರ ಜಾಮಿಯಾ ಇಸ್ಲಾಮಿಯಾ ಶಿಕ್ಷಣ ಸಂಸ್ಥೆಯಲ್ಲಿ ಧಾರ್ಮಿಕ ವಿದ್ವಾಂಸ ಪದವಿಯನ್ನು ಪಡೆದುಕೊಂಡಿದ್ದರು. ಅವರು 1967 ರಿಂದಲೇ ಜಮಾಅತ್ ನಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು ದೆಹಲಿಯ ತಬಲಿಗಿ ಜಮಾಅತ್ ನ ಕೇಂದ್ರವಾಗಿ ನಿಝಾಮುದ್ದೀನ್ ನಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಅರಬಿಕ್ ಇಂಗ್ಲಿಷ್ ಹಾಗೂ ಉರ್ದು ಭಾಷೆಗಳನ್ನು ಚೆನ್ನಾಗಿ ಬಲ್ಲ ಇವರು ಧರ್ಮ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದರು. ಇವರು ಪತ್ನಿ 9ಪುತ್ರರು ಹಾಗೂ ಅಪಾರ ಬಂದುಗಳನ್ನು ಅಗಲಿದ್ದಾರೆ. ಇವರ ಜನಾಝ ನಮಾಝನ್ನು ಜಾಮಿಯಾ ಮಸೀದಿಯಲ್ಲಿ ನಿರ್ವಹಿಸಿ ಖಾಝೀಯಾ ಸ್ಟ್ರೀಟ್ ನಲ್ಲಿರುವ ಖಬರಸ್ಥಾನದಲ್ಲಿ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಯಿತು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...