ರೋಟರಿ ಸಂಸ್ಥೆ ಸಮಾಜ ಸೇವೆಗೆ ಎಲ್ಲರನ್ನು ಒಗ್ಗೂಡಿಸುವ ಕೆಲಸಗಳಿಗೆ ಪ್ರೇರಣೆ ನಿಡುತ್ತಿದೆ- ಮಂಜುನಾಥರೆಡ್ಡಿ

Source: sonews | By Staff Correspondent | Published on 18th July 2018, 10:09 PM | State News | Don't Miss |

ಶ್ರೀನಿವಾಸಪುರ: ರೋಟರಿ ಸಂಸ್ಥೆ ಜಗತ್ತಿನ ಮೂಲೆ ಮೂಲೆಗಳಲ್ಲಿ ಸಾಮಾಜಿಕ ಕೆಲಸಗಳನ್ನು ನಡೆಸುತ್ತಿದ್ದು ಸಮಾಜ ಸೇವೆಗೆ ಎಲ್ಲರನ್ನು ಒಗ್ಗೂಡಿಸುವ ಕೆಲಸಗಳಿಗೆ ಪ್ರೇರಣೆ ನಿಡುತ್ತಿದೆ ಎಂದು ಶ್ರೀನಿವಾಸಪುರ ರೋಟರಿ ಸೆಂಟ್ರಲ್‍ನ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಮಂಜುನಾಥರೆಡ್ಡಿ ತಿಳಿಸಿದರು.
   
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ಸಂಜೆ ಏರ್ಪಡಿಸಲಾಗಿದ್ದ ಶ್ರೀನಿವಾಸಪುರ ರೊಟರಿ ಸೆಂಟ್ರಲ್ ವತಿಯಿಂದ ನೂತನ ಅಧ್ಯಕ್ಷರ ಪದಗ್ರಹಣ ಮತ್ತು ಪ್ರತಿಭಾವಂತ ವಿಧ್ಯಾರ್ಥಿಗಳ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿ ರೋಟರಿ ಸಂಸ್ಥೆ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿಕೊಂಡಿದೆ. ಉಚಿತ ಆರೋಗ್ಯ ತಪಾಸಣಾ ಶಿಭಿರ, ಸರ್ಕಾರಿ ಆಸ್ಪತ್ರೆಯ ಕೇಂದ್ರಗಳಿಗೆ ಉಚಿತವಾಗಿ ಡಯಾಲಿಸಿಸ್ ಯಂತ್ರಗಳನ್ನು ನೀಡಿ ಬಡ ರೋಗಿಗಳ ಆರೋಗ್ಯ ಸುಧಾರಣೆಯನ್ನು ಮಾಡುತ್ತಿದೆ. ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿರುವ ರೋಗಿಗಳಿಗೆ ಸಹಾಯ ಹಸ್ತ ನೀಡುವಲ್ಲಿ ರೋಟರಿ ಸಂಸ್ಥೆ ಸದಾ ಸಿದ್ದವಿದೆ ಎಂದರು.
   
ಗ್ರಾಮೀಣ ಭಾಗದ ಬಡ ವಿಧ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು ಶೈಕ್ಷಣಿಕ ಮುಂದುವರಿಕೆಗೆ ಬೇಕಾದ ಪಠ್ಯ ಮತ್ತು ಪಠ್ಯೇತರ ಸಾಮಗ್ರ್ರಿಗಳನ್ನು ಉಚಿತವಾಗಿ ವಿvರಣೆ ಮಾಡುತ್ತಿದೆ. ಉಚಿತವಾಗಿ ವಿಧ್ಯಾರ್ಥಿಗಳಿಗೆ ನಿಘಂಟು, ಸೋಲಾರ್ ವಿಧ್ಯುತ್ ದೀಪಗಳನ್ನು ನೀಡಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಲು ಸಹಕಾರಿಯಾಗಿದೆ. ಎಲ್.ಗೋಪಾಲಕೃಷ್ಣ ರವರು ನಮಗೆ ಮಾರ್ಗದರ್ಶಕರಾಗಿ ನಮ್ಮನ್ನು ಮುನ್ನಡೆಸುತ್ತಿದ್ದು ಈ ತಾಲೂಕಿನಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ನಡೆಸಲು ಉತ್ಸುಕರಾಗಿದ್ದೇವೆ ಎಂದರು.
  
2017-18ನೇ ಸಾಲಿನಲ್ಲಿ ಪಿ.ಯು.ಸಿಯಲ್ಲಿ ಹೆಚ್ಚು ಅಂಕ ಗಳಿಸಿ ವೈಧ್ಯಕೀಯ ಪದವಿಗೆ ಪ್ರವೇಶವನ್ನು ಪಡೆದ ತಾಲೂಕಿನ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಹಾಗೂ ಗಣಕಯಂತ್ರ ಮತ್ತು ಕನ್ನಡ ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ನೀಡಿ ಸತ್ಕರಿಸಿ ಪ್ರತಿಭಾ ಪುರಸ್ಕಾರವನ್ನು ನೀಡಿದರು. ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ನಾಮ ನಿರ್ಧೇಶಿತ ಜಿಲ್ಲಾ ರಾಜ್ಯಪಾಲ ರೋ.ನಾಗೇಂದ್ರಪ್ರಸಾದ್, ಸಹಯಾಕ ರಾಜ್ಯಪಾಲ ರೋ.ಸೆಂದಿಲ್‍ಕುಮಾರ್, ಜಿಲ್ಲ ನಿರ್ಧೇಶಕರ ಸಂಯೋಜಕ ರೋ.ಶ್ರೀನಾಥ್, ಎಸ್.ವಿ.ಸುಧಾಕರ್, ಚಾರ್ಟರ್ ಅಧ್ಯಕ್ಷ ಎಲ್.ಗೋಪಾಲಕೃಷ್ಣ, ಕಾರ್ಯದರ್ಶಿ ಎಸ್.ಶಿವಮೂರ್ತಿ, ನಿಕಟ ಪೂರ್ವ ಅಧ್ಯಕ್ಷ ರಾಜೇಂದ್ರಪ್ರಸಾದ್ ಇತರರು ಹಾಜರಿದ್ದರು.


 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...