ಭಟ್ಕಳ: ಸರ್ಕಾರಿ ಆಸ್ಪತ್ರೆಯಲ್ಲೂ ಡಯಾಲಿಸಿಸ್ ಕೇಂದ್ರ ಸ್ಥಾಪನೆ:ಮಂಕಳ ವ್ಯೆದ್ಯ

Source: S O News | By MV Bhatkal | Published on 29th April 2017, 9:37 PM | Coastal News | Don't Miss |

ಭಟ್ಕಳ: ತಾಲೂಕ ಆಸ್ಪತ್ರೆಯ ರಕ್ಷಾ ಸಮಿತಿಯ ಸಭೆಯು ಸಮಿತಿಯ ಅಧ್ಯಕ್ಷ ಹಾಗು ಶಾಸಕ ಮಂಕಾಳ ಎಸ್ ವೈದ್ಯ  ಅಧ್ಯಕ್ಷತೆಯಲ್ಲಿ ನಡೆದಿದ್ದು, ಆಸ್ಪತ್ರೆಯ ಕುಂದು ಕೊರತೆಗಳ ಕುರಿತು ಚರ್ಚಿಸಿ ಸಿಬ್ಬಂದಿಯ ಕೊರತೆಯ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆಯನ್ನು ನೀಡಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕ ಮಂಕಾಳ ಎಸ್. ವೈದ್ಯ“ ಸರಕಾರ ತಾಲೂಕಾ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೆಂಟರ್ ತೆರೆಯಲಿದ್ದು, ಭಟ್ಕಳದಲ್ಲಿಯು ಕೂಡಾ ಆರಂಭವಾಗಲಿದೆ. ಸರಕಾರ ಹಾಗು ಶಾಸಕರ ನಿಧಿಯನ್ನು ಬಳಸಿಕೊಂಡು ಡಯಾಲಿಸಸ್ ಸೆಂಟರ್ ಆರಂಭವಾಗಲಿದೆ.  ಹಾಗು ಐ.ಸಿ.ಯು. ವ್ಯವಸ್ಥೆಯನ್ನು ತಾಲೂಕ ಆಸ್ಪತ್ರೆಯಲ್ಲಿ ಪ್ರಾರಂಭಿಸಲಿದ್ದು, ಇದರ ಬಗ್ಗೆ ಆದಷ್ಟು ಬೇಗ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದೇ ಸಂಧರ್ಭದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆಯ ಬಗ್ಗೆ ಶಾಸಕ ಮಂಕಾಳ ವೈದ್ಯರಲ್ಲಿ ಪ್ರಶ್ನಿಸಿದಾಗ ಅದಕ್ಕೆ ಪ್ರತಿಕ್ರಿಯಿಸಿದ ಅವರು” ತಾಲೂಕ ಆಸ್ಪತ್ರೆಯಲ್ಲಿ  ಎಲ್ಲವೂ ಸರಿಯಾಗಿದ್ದು,  ಇರುವ ಸಿಬ್ಬಂದಿಗಳೇ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಇಲ್ಲಿ ಒಟ್ಟು 11 ಸ್ಟಾಪ್ ನರ್ಸ್‍ಗಳ ಕೊರತೆಯಿದ್ದು, ಈ ಹಿಂದೆ 3 ಮಂದಿ ವೈದ್ಯರ ಪೈಕಿ 12 ವೈದ್ಯರು ಎಲ್ಲಾ ವಿಭಾಗದಲ್ಲಿಯೂ ಭರ್ತಿಯಾಗಿದೆ. ಮುಂದಿನ ದಿನಗಳಲ್ಲಿ ತಾಲೂಕಾ ಆಸ್ಪತ್ರೆಯನ್ನು ನಂಬಿ ಬರುವ ಬಡ ಹಾಗೂ ಮಧ್ಯಮವರ್ಗದ ಜನರಿಗೆ ಎಲ್ಲಾ ಸೌಕರ್ಯಗಳು ಸಿಗುವ ರೀತಿಯಲ್ಲಿ ವ್ಯವಸ್ಥೆಯನ್ನು ಸರಿಪಡಿಸಲಾಗುವುದು.” ಎಂದರು.
ಇದೇ ಸಂಧರ್ಭದಲ್ಲಿ ತಾಲೂಕಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ ಶೆಟ್ಟಿ ಆಸ್ಪತ್ರೆಯ ಎದುರಿಗಿನ ಆವರಣದಲ್ಲಿ ಇಂಟರ್ಲಾಕ್ ಅಳವಡಿಸುವ ಕುರಿತಾದ ಕ್ರಮದ ಭರವಸೆಯನ್ನು ನೀಡಿದರು.
ಈ  ಸಂಧರ್ಬದಲ್ಲಿ ರಕ್ಷಾ ಸಮಿತಿಯ ಸದಸ್ಯ ಹಾಗು ತಹಶೀಲ್ದಾರ ವಿ.ಎನ್ ಬಾಡ್ಕರ್, ಆಸ್ಪತ್ರೆಯ ವೈದ್ಯರಾದ ಡಾ.ಸತೀಶ, ಡಾ. ಸಂತೋಷ್, ಡಾ.ಲಕ್ಷ್ಮೀಶ, ಡಾ.ಕಮಲಾ ಮುಂತಾದವರು ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...