ಹಿರಿಯ ರಾಜಕಾರಣಿ ಚೆರ್ಕಳಂ ಅಬ್ದುಲ್ಲಾ ನಿಧನ

Source: sonews | By Staff Correspondent | Published on 27th July 2018, 6:17 PM | State News | National News | Don't Miss |

ಕಾಸರಗೋಡು: ಹಿರಿಯ ರಾಜಕಾರಣಿ, ಕೇರಳದ ಮಾಜಿ ಸಚಿವ ಚೆರ್ಕಳಂ ಅಬ್ದುಲ್ಲಾ ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. 

ಕಳೆದ ಕೆಲ ದಿನಗಳಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೆರ್ಕಳಂ ಅಬ್ದುಲ್ಲರನ್ನು ವೈದ್ಯರ ಸಲಹೆಯಂತೆ ನಿನ್ನೆ ತಡರಾತ್ರಿ ಮನೆಗೆ ಕರೆತರಲಾಗಿತ್ತು. ಇಂದು ಬೆಳಗ್ಗೆ 8:20ಕ್ಕೆ ಸ್ವಗೃಹದಲ್ಲಿ ಅವರು ಕೊನೆಯುಸಿರೆಳೆದರು 

ಮಂಜೇಶ್ವರದ ಮಾಜಿ ಶಾಸಕರಾಗಿದ್ದ ಚೆರ್ಕಳಂ ಅಬ್ದುಲ್ಲ ಅವರು ಮುಸ್ಲಿಂ ಲೀಗ್ ರಾಜ್ಯ ಕೋಶಾಧಿಕಾರಿಯೂ ಆಗಿದ್ದರು.

ಕಾಂಗ್ರೆಸ್ ನೇತೃತ್ವದ ಐಕ್ಯರಂಗದ ಘಟಕ ಪಕ್ಷವಾದ ಮುಸ್ಲಿಂ ಲೀಗ್‌ನ ಪ್ರಮುಖ ನಾಯಕರಾಗಿದ್ದ ಚೆರ್ಕಳಂ 1987ರಿಂದ 2001ರ ತನಕ ನಾಲ್ಕು ಬಾರಿ ಮಂಜೇಶ್ವರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, 2001ರಲ್ಲಿ ಎ .ಕೆ.ಆ್ಯಂಟನಿಯವರ ಸಚಿವ ಸಂಪುಟದಲ್ಲಿ ಸ್ಥಳೀಯಾಡಳಿತ ಸಚಿವರಾಗಿದ್ದರು.

ಕಾಸರಗೋಡಿಯ ಚೆರ್ಕಳ ನಿವಾಸಿಯಾಗಿದ್ದ ಚೆರ್ಕಳಂ ಅಬ್ದುಲ್ಲ 1987ರಲ್ಲಿ ಬಿಜೆಪಿಯ ಎಚ್.ಶಂಕರ ಆಳ್ವರನ್ನು ಸೋಲಿಸಿ ವಿಧಾನಸಭೆ ಪ್ರವೇಶಿಸಿದ್ದರು. ಇವರ ಈ ಗೆಲುವಿನೊಂದಿಗೆ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ಪಾಲಾಗಿತ್ತು. 1992ರಲ್ಲಿ ಬಿಜೆಪಿಯ ಜನಪ್ರಿಯ ನಾಯಕರಾಗಿದ್ದ ಕೆ .ಜಿ.ಮಾರಾರ್‌ವಿರುದ್ಧ 1,072 ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಯುಡಿಎಫ್‌ನ್ನು ಮತ್ತೆ ಗೆಲ್ಲುವಂತೆ ಮಾಡಿದ ಹೆಗ್ಗಳಿಕೆ ಚೆರ್ಕಳಂ ಅವರದ್ದು.

1996ರಲ್ಲಿ ಬಿಜೆಪಿಯ ಸಿ.ಕೆ.ಪದ್ಮನಾಭನ್‌ರನ್ನು ಸೋಲಿಸಿ ಮೂರನೇ ಬಾರಿ ಆಯ್ಕೆಯಾಗಿದ್ದ ಚೆರ್ಕಳಂ ಅವರು, 2001ರಲ್ಲಿ ಬಿಜೆಪಿಯ ಸಿ.ಕೆ.ಪದ್ಮನಾಭನ್ ಅವರನ್ನು ಮತ್ತೆ ಸೋಲಿಸಿ ನಾಲ್ಕನೇ ಬಾರಿ ವಿಧಾನಸಭೆ ಪ್ರವೇಶಿಸಿದ್ದರು. ಹಲವು ವರ್ಷಗಳ ಕಾಲ ಮುಸ್ಲಿಂ ಲೀಗ್ ಹಾಗೂ ಯುಡಿಎಫ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಚೆರ್ಕಳಂ ಅವರು ವಿಧಾನಸಭಾ ಅಧಿವೇಶನದಲ್ಲಿ ಕನ್ನಡದ ಕಹಳೆ ಮೊಳಗಿಸುವ ಮೂಲಕ ಕನ್ನಡಿಗರ ಮನ ಗೆದ್ದಿದ್ದರು.

ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಮಾಡಿದ ಮೊದಲ ಸಚಿವ ಎಂಬ ಹೆಗ್ಗಳಿಕೆಗೂ ಚೆರ್ಕಳಂ ಅಬ್ದುಲ್ಲಾ ಪಾತ್ರರಾಗಿದ್ದಾರೆ.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಪತಂಜಲಿಯಿಂದ ನ್ಯಾಯಾಲಯದ ಆದೇಶ ಉಲ್ಲಂಘನೆ; ಕಾನೂನು ಕ್ರಮ ಎದುರಿಸಲು ಸಿದ್ದರಾಗಿ ಪತಂಜಲಿಗೆ ಸುಪ್ರೀಂ ಕೋರ್ಟ್ ಚಾಟಿ

ವೈಜ್ಞಾನಿಕ ತಳಹದಿಯ ಔಷಧಿಗಳನ್ನು ಟೀಕಿಸುವ ಹಾಗೂ ಜನರನ್ನು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವುದನ್ನು ...