ಶಿಡ್ಲಘಟ್ಟ:ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಗುರುಹಿರಿಯರನ್ನು ಗೌರವಿಸುವ ಸಂಸ್ಕೃತಿ ಬೆಳೆಸಲು ಮಂಗಳಾನಂದನಾಥ ಸ್ವಾಮೀಜಿ ಕರೆ
ಶಿಡ್ಲಘಟ್ಟ,ಜನವರಿ20: ಸಮಾಜದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಗುರುಹಿರಿಯರನ್ನು ಗೌರವಿಸುವ ಸಂಸ್ಕಾರ,ಸಂಸ್ಕøತಿಯನ್ನು ಸಹ ಬೆಳೆಸಬೇಕೆಂದು ಚಿಕ್ಕಬಳ್ಳಾಪುರ ಶಾಖಾಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ಹೇಳಿದರು.
ತಾಲೂಕಿನ ಹನುಮಂತಪುರ ಗೇಟ್ನಲ್ಲಿರುವ ಬಿಜಿಎಸ್ ಶಾಲೆಯಲ್ಲಿ ಏರ್ಪಡಿಸಿದ್ದ ಮಾತೃಭೋಜನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಗುವಿನ ಮೊದಲ ಪಾಠಶಾಲೆ ಮನೆಯಾಗಿರುವುದರಿಂದ ಪೋಷಕರು ಸಮಾಜದ ಅಭಿವೃಧ್ಧಿಗೆ ಪೂರಕವಾಗಿರುವ ವಿಚಾರಗಳನ್ನು ಮನದಟ್ಟ ಮಾಡಿಕೊಡಬೇಕು,ಗುರುಹಿರಿಯರನ್ನು ಗೌರವ ಸಮರ್ಪಣೆ,ಸಂಸ್ಕಾರ,ಶಿಸ್ತು ಮತ್ತು ಸಂಸ್ಕøತಿಯನ್ನು ಸಂರಕ್ಷಣೆ ಮಾಡುವ ವಾತಾವರಣವನ್ನು ನಿರ್ಮಿಸಬೇಕೆಂದರು.
ಮಕ್ಕಳು ಸಹ ತಂದೆ-ತಾಯಿಗಳನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು,ಗುರುಗಳ ಮಾರ್ಗದರ್ಶನದಲ್ಲಿ ಪಾಠಪ್ರವಚನಗಳನ್ನು ಪಡೆದುಕೊಂಡು ಜ್ಞಾನವಂತರಾಗಿ ಸಮಾಜದಲ್ಲಿ ಉನ್ನತಸ್ಥಾನಗಳನ್ನು ಅಲಂಕರಿಸಿ ಆದರ್ಶಜೀವನ ನಡೆಸಬೇಕೆಂದರು.
ಬಿಜಿಎಸ್ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎನ್.ಶಿವರಾಮರೆಡ್ಡಿ ಮಾತನಾಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಹಾಗು ಪೋಷಕರ ಪಾತ್ರ ಬಹಳಷ್ಟು ಮಹತ್ತರವಾದದ್ದು ಹಾಗಾಗಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿರುವ ಸಹಕಾರವನ್ನು ಪೋಷಕರು ಶಿಕ್ಷಕರಿಗೆ ನೀಡಬೇಕು ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಖ್ಯಾತ ಸುಗಮ ಸಂಗೀತ ಗಾಯಕಿ ರತ್ನಮಾಲಾ ಪ್ರಕಾಶ್ ರನ್ನು ಶಾಲಾ ಆಡಳಿತ ಮಂಡಳಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಶಾಲಾ ಮಕ್ಕಳ ಪೋಷಕರು ಮಾತೃಭೋಜನ ಸಮಾರಂಭಕ್ಕಾಗಿ ತಯಾರಿಸಿ ತಂದಿದ್ದ ವಿವಿಧ ರೀತಿಯ ತಿಂಡಿಗಳನ್ನು ಮಕ್ಕಳು ಹಾಗು ಪೋಷಕರು ಸವಿದರು.
ಕಾರ್ಯಕ್ರಮದಲ್ಲಿ ಎಸ್ಜೆಸಿಐಟಿ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್, ಬಿಜಿಎಸ್ ಶಾಲೆಯ ಪ್ರಾಂಶುಪಾಲ ಆರ್.ಮಹದೇವ್ ಮುಖಂಡರಾದ ಕೆಂಪರೆಡ್ಡಿ, ದೇವರಾಜ್, ತಾಲೂಕು ಒಕ್ಕಲಿಗರ ಯುವಸೇನೆಯ ಅಧ್ಯಕ್ಷ ಜೆ.ವಿ.ವೆಂಕಟಸ್ವಾಮಿ, ಪುರುಷೋತ್ತಮ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.