ಶಿಡ್ಲಘಟ್ಟ,ಜುಲೈ31: ರಾಜ್ಯದಲ್ಲಿ ಜನಸಾಮಾನ್ಯರ ಕಲ್ಯಾಣಕ್ಕಾಗಿ ಯೋಜನೆಗಳನ್ನು ಜಾರಿಗೊಳಿಸಿ ಸುಮಾರು 1 ಸಾವಿರ ಕೆರೆಗಳನ್ನು ನಿರ್ಮಿಸಿದ ನಾಡಪ್ರಭು ಕೆಂಪೇಗೌಡ ಅವರ ಜೀವನಾದರ್ಶಗಳು ಎಲ್ಲರಿಗೆ ದಾರಿದೀಪವಾಗಬೇಕೆಂದು ಶಾಸಕ ಎಂ.ರಾಜಣ್ಣ ಹೇಳಿದರು.
ರಾಷ್ಟ್ರೀಯ/ನಾಡ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೆಂಪೇಗೌಡರು ಕೇವಲ ಒಂದು ಸಮುದಾಯ ಹಾಗೂ ಜಾತಿಗೆ ಸೀಮಿತವಾಗಿಲ್ಲ ಎಲ್ಲಾ ಸಮುದಾಯದ ಅಭಿವೃದ್ಧಿಗೂ ಶ್ರಮಿಸಿದ್ಧಾರೆ. ಈ ದಿಸೆಯಲ್ಲಿ ಎಲ್ಲಾ ಸಮುದಾಯವರು ಅವರ ಕೆಲಸವನ್ನು ಸ್ಮರಿಸುವ ಕೆಲಸ ಆಗಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ,ಯು,ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಎಲ್ಲಾ ಸಮುದಾಯದ ಐವತ್ತು ಮಂದಿ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.
ತಹಶೀಲ್ದಾರ್ ಅಜೀತ್ಕುಮಾರ್ ರೈ,ಬಿಇಓ ರಘುನಾಥ್ರೆಡ್ಡಿ,ತಾಲೂಕು ಪಂಚಾಯ್ತಿ ಸದಸ್ಯೆ ಶೋಭಾ ಶಶಿಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸಿಡಿಪಿಒ ಲಕ್ಷ್ಮೀದೇವಮ್ಮ, ನಗರಸಭಾ ಉಪಾಧ್ಯಕ್ಷೆ ಪ್ರಭಾವತಿಸುರೇಶ್,ಪೌರಾಯುಕ್ತ ಚಲಪತಿ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಒಕ್ಕಲಿಗ ಯುವಸೇನೆ ಸಂಘದ ಅಧ್ಯ್ಯಕ್ಷ ವೆಂಕಟಸ್ವಾಮಿ, ವಚನ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ದೇವರಾಜ್(ಕಂಪನಿ),ನಗರಸಭೆಯ ಮಾಜಿ ಸದಸ್ಯ ಬಿ.ಕೆಂಪರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.