ಶಿಡ್ಲಘಟ್ಟ:ಪ್ರಧಾನಿಗಳಿಗೆ ಬೆಂಬಲ ಸೂಚಿಸಿ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಡಿ.ಆರ್.ಶಿವಕುಮಾರ್ ಗೌಡ ಕರೆ

Source: tamim | By Arshad Koppa | Published on 19th September 2017, 8:17 AM | State News |

ಶಿಡ್ಲಘಟ್ಟ,ಸೆಪ್ಟೆಂಬರ್18: ಸಮಾಜದಲ್ಲಿರುವ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಿ ನರೇಂದ್ರಮೋದಿ ಅವರ ಕೈಬಲಪಡಿಸಿ ಸದೃಡ ರಾಷ್ಟ್ರವನ್ನು ನಿರ್ಮಿಸಬೇಕೆಂದು ಕರ್ಣಶ್ರೀ ಚಾರಿಟಬಲ್ ಟ್ರಸ್ಟ್‍ನ ಅಧ್ಯಕ್ಷ ಹಾಗೂ ಭಾಜಪ ಮುಖಂಡ ಡಿ.ಆರ್.ಶಿವಕುಮಾರ್ ಗೌಡ ಕರೆ ನೀಡಿದರು.


    ಪ್ರಧಾನಮಂತ್ರಿ ನರೇಂದ್ರಮೋದಿನವರ 67 ನೇ ಜನ್ಮದಿನಾಚರಣೆಯ ಅಂಗವಾಗಿ ತಾಲೂಕು ಬಿಜೆಪಿ ಘಟಕದ ವತಿಯಿಂದ ನಗರದ ಸಾರ್ವಜನಿಕರ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿ ಮಾತನಾಡಿದ ಅವರು ಸರ್ವರ ಸಹಕಾರ ಮತ್ತು ಸರ್ವರ ವಿಕಾಸದ ನೀತಿಯನ್ನು ಆಡಳಿತದಲ್ಲಿ ಅನುಷ್ಠಾನಗೊಳಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರಮೋದಿನವರು ದೇಶದ ಚಿತ್ರಣವನ್ನು ಬದಲಾಯಿಸುವ ಶಕ್ತಿಯನ್ನು ಹೊಂದಿದ್ದಾರೆ ಎಂದರು.
    ಕೇಂದ್ರ ಸರಕಾರದ ಸಾಧನೆಗಳು ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಧಿಕಾರಾವಧಿಯಲ್ಲಿ ಕೈಗೊಂಡಿರುವ ಅಭಿವೃಧ್ಧಿ ಕಾಮಗಾರಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಪಕ್ಷ ಸಂಘಟನೆಯನ್ನು ಸಕ್ರೀಯವಾಗಿ ಮಾಡುವ ಮೂಲಕ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಅರಳಿಸುವಂತೆ  ಕಾರ್ಯಕರ್ತರು ಧೃಡಸಂಕಲ್ಪ ಮಾಡಬೇಕೆಂದರು.
ರಾಜ್ಯ ಬಿಜೆಪಿ ಪರಿಷತ್ತಿನ ಸದಸ್ಯ ದಾಮೋದರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಂದ್ರಗೌಡ, ತಾಲೂಕು ಅಧ್ಯಕ್ಷ ಬಿಸಿ ನಂದೀಶ್, ಮುಖಂಡರಾದ ಶ್ರೀರಾಮರೆಡ್ಡಿ, ಮಂಜುನಾಥ್, ಶ್ರೀರಾಮ್, ಸುಜಾತಮ್ಮ, ರತ್ನಮ್ಮ ಮತ್ತಿತರರು ಉಪಸ್ಥಿತರಿದ್ದರು.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...