ಶಿಡ್ಲಘಟ್ಟ: ಛತ್ರಪತಿ ಶಿವಾಜಿ ಹಾಗೂ ಸಂತಕವಿ ಸರ್ವಜ್ಞ ರವರ ಸಿದ್ಧಾಂತಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಿ: ಶಾಸಕ ಎಂ.ರಾಜಣ್ಣ
ಶಿಡ್ಲಘಟ್ಟ,ಫೆಬ್ರವರಿ20: ಛತ್ರಪತಿ ಶಿವಾಜಿ ಹಾಗೂ ಸಂತಕವಿ ಸರ್ವಜ್ಞ ರವರ ಸಿದ್ಧಾಂತಗಳನ್ನು ಜೀವನದಲ್ಲಿ ರೂಡಿಸಿಕೊಂಡು ಆದರ್ಶ ಸಮಾಜವನ್ನು ನಿರ್ಮಿಸಬೇಕೆಂದು ಶಾಸಕ ಎಂ.ರಾಜಣ್ಣ ಕರೆ ನೀಡಿದರು.
ನಗರದ ತಾಲೂಕು ಕಛೇರಿಯಲ್ಲಿ ಆಯೋಜಿಸಿದ್ದ ಛತ್ರಪತಿ ಶಿವಾಜಿರವರ ಹಾಗೂ ಸಂತಕವಿ ಸರ್ವಜ್ಞರವರುಗಳ ಜಯತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ ಛತ್ರಪತಿ ಶಿವಾಜಿ ಮತ್ತು ಸಮಾಜದಲ್ಲಿ ಜಾತಿ ಪದ್ದತಿಯನ್ನು ಹೋಗಲಾಡಿಸಲು ಶ್ರಮಿಸಿದ ಸರ್ವಜ್ಞರ ಜೀವನಾದರ್ಶಗಳು ದಾರಿದೀಪವಾಗಬೇಕೆಂದರು.
ತಹಶೀಲ್ದಾರ್ ಅಜಿತ್ ಕುಮಾರ್ ರೈ, ಇ.ಓ.ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ನಗರಸಭೆಯ ಅಧ್ಯಕ್ಷ ಬಿ.ಅಫ್ಸರ್ಪಾಷ,ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಕಸಾಪ ತಾಲ್ಲೂಕು ಅಧ್ಯಕ್ಷ ಅನಂತ ಕೃಷ್ಣ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಮಾಜಿ ಅಧ್ಯಕ್ಷ ಗುರುರಾಜ್ರಾವ್, ಮರಾಠಿ ಜನಾಂಗದ ಪ್ರಸಾದ್, ವೆಂಕಟೇಶ್, ಶೇಖರ್, ಕೃಷ್ಣ, ಪಂಡುರಾಂಗರಾವ್ ಮತ್ತಿತರರು ಉಪಸ್ಥಿತರಿದ್ದರು.