ಶಿಡ್ಲಘಟ್ಟ,ಆಗಸ್ಟ್21: ಕ್ಷೇತ್ರದಲ್ಲಿ ಬಡವರು-ಕೂಲಿ ಕಾರ್ಮಿಕರ ಅನುಕೂಲಕ್ಕಾಗಿ ಟ್ರಸ್ಟ್ನ ಮೂಲಕ ಈಗಾಗಲೇ 18 ಆರೋಗ್ಯ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರಗಳನ್ನು ಆಯೋಜಿಸಲಾಗಿದೆ ಸರ್ವರಿಗೂ ಶಿಕ್ಷಣ ಮತ್ತು ಸರ್ವರಿಗೂ ಉತ್ತಮ ಆರೋಗ್ಯ ಕಲ್ಪಿಸಬೇಕೆಂಬುದೇ ತಮ್ಮ ಮೂಲ ಉದ್ದೇಶವಾಗಿದೆ ಎಂದು ಆನೂರು ಎಸ್.ಎನ್.ಕ್ರಿಯಾ ಟ್ರಸ್ಟ್ನ ಅಧ್ಯಕ್ಷ ಆಂಜಿನಪ್ಪ(ಪುಟ್ಟು) ಹೇಳಿದರು.
ತಾಲೂಕಿನ ಕುಂದಲಗುರ್ಕಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆನೂರು ಎಸ್.ಎನ್.ಕ್ರಿಯಾ ಟ್ರಸ್ಟ್ನ ಹಾಗೂ ಹೊಸಕೋಟೆ ಎಂವಿಜೆ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದಲ್ಲಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಂದ ನರಳುತ್ತಿದ್ದಾರೆ ಸಕಾಲದಲ್ಲಿ ಆರೋಗ್ಯವನ್ನು ಸುಧಾರಿಸಿಕೊಳ್ಳದೆ ಸಂಕಷ್ಟದಲ್ಲಿ ಸಿಲುಕಿದ್ದಾರೆ ಮನುಷ್ಯನಿಗೆ ಆರೋಗ್ಯ ದೊಡ್ಡ ಸಂಪತ್ತು ಆಗಿದ್ದು ಅದನ್ನು ಸಂರಕ್ಷಣೆ ಮಾಡುವ ವಿಚಾರದಲ್ಲಿ ಜನರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕಾಗಿದೆ ಎಂದ ಅವರು ವಯೋವೃಧ್ಧರು-ಅಂಗವಿಕಲರು,ಅವಿವಾಹಿತರಿಗೆ ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸಲು ಟ್ರಸ್ಟ್ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ ಎಂದರು.
ಕುಂದಲಗುರ್ಕಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ವೆಂಕಟೇಶ್ ಮಾತನಾಡಿ ಹಿಂದುಳಿದ ಪ್ರದೇಶವಾಗಿರುವ ಕುಂದಲಗುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಾಗಿ ಕೂಲಿ ಕಾರ್ಮಿಕರು ಮತ್ತು ಬಡವರು ಹೆಚ್ಚಾಗಿದ್ದಾರೆ ಏನಾದೂರು ಆರೋಗ್ಯ ಸಮಸ್ಯೆ ಎದುರಾದರೆ ತಾಲೂಕು ಕೇಂದ್ರದ ಆಸ್ಪತ್ರೆಗಳಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಟ್ರಸ್ಟ್ನ ಮೂಲಕ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿರುವುದರಿಂದ ಬಹಳ ಅನುಕೂಲವಾಗಿದೆ ಎಂದರು.
ಈ ಸಂದರ್ಭದಲ್ಲಿ ಆನೂರು ಎಸ್.ಎನ್.ಕ್ರಿಯಾ ಟ್ರಸ್ಟ್ನ ಕಾರ್ಯದರ್ಶಿ ವಿಶ್ವನಾಥ್, ತಾಪಂ ಸದಸ್ಯ ಶ್ರೀನಿವಾಸ್,ತಲಕಾಯಲಬೆಟ್ಟ ಗ್ರಾಪಂ ಸದಸ್ಯ ಅಶ್ವತ್ಥನಾರಾಯಣ, ಮಳಮಾಚನಹಳ್ಳಿ ಬೈರೇಗೌಡ,ಆನೂರು ನಟರಾಜ್,ಟಿಪ್ಪುಸೆಕ್ಯೂಲರ್ ಸೇನೆಯ ಅಫ್ಸರ್ಪಾಷ,ಬೆಂಗಳೂರು ಉತ್ತರ ತಾಪಂ ಮಾಜಿ ಅಧ್ಯಕ್ಷ ನಾಗರಾಜ್,ಗ್ರಾಮ ಪಂಚಾಯಿತಿ ಸದಸ್ಯ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.
ಸುಧ್ಧಿಚಿತ್ರ,ಆಗಸ್ಟ್21 ಎಸ್.ಡಿ.ಎಲ್.ಪಿ01 ಶಿಡ್ಲಘಟ್ಟ ತಾಲೂಕಿನ ಕುಂದಲಗುರ್ಕಿ ಗ್ರಾಮದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿರುವ ಗ್ರಾಮಸ್ಥರು.