ಕಂಪ್ಯೂಟರ್ ಆಫೀಸ್ ಆಟೋಮೇಶನ್ ಪರೀಕ್ಷೆಯಲ್ಲಿ ದ್ವಾರಕನಾಥ್ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಶ್ರೀನಿವಾಸಪುರ: ಕಳೆದ ಜನವರಿ ಮಾಹೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ 6 ತಿಂಗಳ ಕಂಪ್ಯೂಟರ್ ಆಫೀಸ್ ಆಟೋಮೇಶನ್ ಪರೀಕ್ಷೆಯಲ್ಲಿ ಪಟ್ಟಣದ ಕರ್ನಾಟಕ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಯಾದ ದ್ವಾರಕನಾಥ್ ಎಸ್. ಇವರು ಕಂಪ್ಯೂಟರ್ ಆಫೀಸ್ ಆಟೋಮೇಶನ್ನಲ್ಲಿ ಅತ್ಯುನ್ನತ ಶ್ರೇಣಿಯನ್ನು ಪಡೆಯುವುದರೊಂದಿಗೆ ಶಾಲೆಗೆ ಒಟ್ಟಾರೆ ಶೇಕಡ 95 ರಷ್ಟು ಫಲಿತಾಂಶ ದೊರೆತಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ.
ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಕರ್ನಾಟಕ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ ಕಳೆದ ಜನವರಿ ಮಾಹೆಯಲ್ಲಿ ರಾಜ್ಯಮಟ್ಟದಲ್ಲಿ ಕರ್ನಾಟಕ ಪ್ರೌಡಶಿಕ್ಷಣ ಪರೀಕ್ಷ ಮಂಡಳಿಯು ನಡೆಸಿದ ಕಂಪ್ಯೂಟರ್ ಆಫೀಸ್ ಆಟೋಮೇಶನ್ನಲ್ಲಿ ದ್ವಾರಕನಾಥ್ ಎಸ್. ಅತ್ಯುನ್ನತ ಶ್ರೇಣಿಯನ್ನು ಪಡೆಯುವುದರೊಂದಿಗೆ ಪ್ರಥಮ ದರ್ಜೆಯಲ್ಲಿ 23, ದ್ವಿತೀಯ ದರ್ಜೆಯಲ್ಲಿ 31, ತೃತೀಯ ದರ್ಜೆಯಲ್ಲಿ 05, ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದು, ಶಾಲೆಯ ಒಟ್ಟಾರೆ ಫಲಿತಾಂಷ ಶೇಕಡ 95 ರಷ್ಟಾಗಿದ್ದು, ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಶಾಲೆಗೆ ದೊರೆತಿರುವ ಉತ್ತಮ ಫಲಿತಾಂಶಕ್ಕೆ ಕಾರಣರಾದ ಬೋಧಕರನ್ನು ಪ್ರಾಂಶುಪಾಲರಾದ ಎನ್. ಕೃಷ್ಣಮೂರ್ತಿ ಮತ್ತು ಕೇಂದ್ರ ವ್ಯವಸ್ಥಾಪಕರಾದ ಆರ್. ರಾದ ಇವರು ಅಭಿನಂದಿಸಿದ್ದಾರೆ.