ಕಂಪ್ಯೂಟರ್ ಆಫೀಸ್ ಆಟೋಮೇಶನ್  ಪರೀಕ್ಷೆಯಲ್ಲಿ ದ್ವಾರಕನಾಥ್ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Source: sonews | By Staff Correspondent | Published on 16th March 2018, 6:43 PM | State News | Don't Miss |

ಶ್ರೀನಿವಾಸಪುರ: ಕಳೆದ ಜನವರಿ  ಮಾಹೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ 6 ತಿಂಗಳ  ಕಂಪ್ಯೂಟರ್ ಆಫೀಸ್ ಆಟೋಮೇಶನ್  ಪರೀಕ್ಷೆಯಲ್ಲಿ  ಪಟ್ಟಣದ  ಕರ್ನಾಟಕ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ  ಸಂಸ್ಥೆಯ  ವಿದ್ಯಾರ್ಥಿಯಾದ ದ್ವಾರಕನಾಥ್ ಎಸ್. ಇವರು  ಕಂಪ್ಯೂಟರ್ ಆಫೀಸ್ ಆಟೋಮೇಶನ್‍ನಲ್ಲಿ ಅತ್ಯುನ್ನತ ಶ್ರೇಣಿಯನ್ನು   ಪಡೆಯುವುದರೊಂದಿಗೆ  ಶಾಲೆಗೆ ಒಟ್ಟಾರೆ  ಶೇಕಡ  95 ರಷ್ಟು ಫಲಿತಾಂಶ ದೊರೆತಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ. 

ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಕರ್ನಾಟಕ ವಾಣಿಜ್ಯ ಮತ್ತು  ಕಂಪ್ಯೂಟರ್ ಶಿಕ್ಷಣ  ಸಂಸ್ಥೆಗೆ  ಕಳೆದ ಜನವರಿ ಮಾಹೆಯಲ್ಲಿ ರಾಜ್ಯಮಟ್ಟದಲ್ಲಿ ಕರ್ನಾಟಕ ಪ್ರೌಡಶಿಕ್ಷಣ ಪರೀಕ್ಷ ಮಂಡಳಿಯು ನಡೆಸಿದ ಕಂಪ್ಯೂಟರ್ ಆಫೀಸ್ ಆಟೋಮೇಶನ್‍ನಲ್ಲಿ  ದ್ವಾರಕನಾಥ್ ಎಸ್. ಅತ್ಯುನ್ನತ ಶ್ರೇಣಿಯನ್ನು   ಪಡೆಯುವುದರೊಂದಿಗೆ   ಪ್ರಥಮ ದರ್ಜೆಯಲ್ಲಿ 23, ದ್ವಿತೀಯ ದರ್ಜೆಯಲ್ಲಿ 31, ತೃತೀಯ ದರ್ಜೆಯಲ್ಲಿ 05, ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದು,  ಶಾಲೆಯ ಒಟ್ಟಾರೆ ಫಲಿತಾಂಷ ಶೇಕಡ 95 ರಷ್ಟಾಗಿದ್ದು,   ಈ  ಪರೀಕ್ಷೆಯಲ್ಲಿ ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಶಾಲೆಗೆ ದೊರೆತಿರುವ  ಉತ್ತಮ  ಫಲಿತಾಂಶಕ್ಕೆ ಕಾರಣರಾದ ಬೋಧಕರನ್ನು ಪ್ರಾಂಶುಪಾಲರಾದ ಎನ್. ಕೃಷ್ಣಮೂರ್ತಿ ಮತ್ತು ಕೇಂದ್ರ ವ್ಯವಸ್ಥಾಪಕರಾದ ಆರ್. ರಾದ ಇವರು ಅಭಿನಂದಿಸಿದ್ದಾರೆ. 
 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...