ಅಕ್ರಮ ಆಸ್ತಿ ಸಂಪಾದನೆ ಆರೋಪ; ಇಂಜಿನೀಯರ್ ಮನೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

Source: sonews | By Staff Correspondent | Published on 9th March 2018, 11:24 PM | State News | Don't Miss |

ಶ್ರೀನಿವಾಸಪುರ:  ಕೋಲಾರದ ಎ ಸಿ ಬಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಶ್ರೀನಿವಾಸಪುರ ತಾಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಎ ಇ ಇ ಅಪ್ಪಿರೆಡ್ಡಿ ಮನೆ ಮೇಲೆ  ಶುಕ್ರವಾರ ಬೆಳ್ಳಂಬೆಳಿಗ ದಾಳಿಮಾಡಿರುತ್ತಾರೆ.

ಕೋಲಾರದ ಎಸಿಬಿ ಡಿ ವೈ ಎಸ್ ಪಿ ಮೋಹನ್ ಮತ್ತು ಸಿ ಇ ತಿಪ್ಪೆಸ್ವಾಮಿ ನೇತೃತ್ವದ ತಂಡ ಅಪ್ಪಿರೆಡ್ಡಿ ವಾಸವಿರುವ ಶ್ರೀನಿವಾಸಪುರ ಪಟ್ಟಣದ ವೆಂಕಟೇಶ್ವರ ಬಡಾವಣೆಗೆ ಸಿಇಎ ಶಾಲೆ ಹಿಂಬಾಗದಲ್ಲಿರುವ ಮನೆ ಹಾಗು ಅವರ ಸ್ವಂತ ಊರಾದ ಶ್ರೀನಿವಾಸಪುರ ಹೋದಲಿ ಗ್ರಾಮದಲ್ಲಿರುವಂತ ಮನೆಗಳು ಸುಧಾ ಕೋಳಿ ಫಾರಂಗಳ ಮೇಲೆ ಏಕ ಕಾಲದಲ್ಲಿ ದಾಳಿ ನಡೆಸಲಾಗಿದೆ.ಅವರ ಕುಟುಂಬಕ್ಕೆ ಸಂಬಂದಿಸಿದ ಹೊಲ ಗದ್ದೆ ಮಾವಿನ ತೋಟಗಳಿಗೆ ದಾಖಲೆಗಳನ್ನು ಪರಶಿಲಿಸುತ್ತಿರುವುದಾಗಿ ಹೇಳಲಾಗಿದೆ.

ಮುಂಜಾನೆ ಸುಮಾರು 6 ಗಂಟೆ ಹೊತ್ತಿಗೆ ಅಧಿಕಾರಿಗಳು ದಾಳಿ ಮಾಡಿದ್ದು ಕುಟುಂಬದ ಸದಸ್ಯರನ್ನು ಹೋರಗೆ ಕಳುಹಿಸದೆ ಮನೆಯಲ್ಲಿ ಇರಿಸಿಕೊಂಡು ಶೋಧ ನಡೆಸುತ್ತಿರುವುದಾಗಿ ಹೇಳಲಾಗುತ್ತಿದೆ.

ಹೊದಲಿ ಗ್ರಾಮದವರಾದ ಅಪ್ಪಿರೆಡ್ಡಿ ಮೂಲತಃ ಕೃಷಿಕ ಕುಟುಂಬದವರು ಸುಮಾರು ವರ್ಷಗಳ ಕಾಲ ಲೋಕೋಪಯೋಗಿ ಇಲಾಖೆಯಲ್ಲಿ ತಾತ್ಕಾಲಿಕ ಸೇವೆ ಸಲ್ಲಿಸಿ ನಂತರ ಅವರು ಖಾಯಂ ಸೇವೆಗೆ ಮಾರ್ಪಟ್ಟಿದ್ದರು ನಂತರ ಕೋಲಾರ ಮುಳಬಾಗಿಲು ಮುಂತಾದ ಕಡೆ ಕಾರ್ಯನಿರ್ವಹಿಸಿದ್ದರು ಈಗ ಶ್ರೀನಿವಾಸಪುರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ(ವಾಟರ್ ಬೋರ್ಡ್) ಸಹಾಯಕ ಕಾರ್ಯಪಾಲಕ ಅಭಿಯಂತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶ್ರೀನಿವಾಸಪುರ ತಾಲೂಕು ಹೋದಲಿ ಗ್ರಾಮದವರಾದ ಅಪ್ಪಿರೆಡ್ಡಿ ಕೃಷಿಕ ಕುಟುಂಬದಿಂದ ಬಂದವರಾಗಿದ್ದು, ಈಗಲೂ ಅವರು ನಾಲ್ಕು ಜನ ಸಹೋದರರು ಹೊದಲಿ ಗ್ರಾಮದಲ್ಲಿ ವಾಸವಾಗಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...