ಶ್ರೀನಿವಾಸಪುರ: ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೇವೆ ನೀಡಲು ಬಸ್ಗಳ ನಿರ್ವಹಣೆ ತೃಪ್ತಿಕರವಾಗಿರಬೇಕು. ಬಸ್ಗಳು ಪ್ರಯಾಣಿಕರನ್ನು ಆಕರ್ಷಿಸುವಂತೆ ಸ್ವಚ್ಛಗೊಳಿಸಬೇಕು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.
ಪಟ್ಟಣದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಡಿಫೋಗೆ ಸೋಮಾವರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಡಿಫೋ ಸಿಬ್ಬಂದಿಯೊಂದಿಗೆ ಮಾತನಾಡಿ, ತಾಂತ್ರಿಕ ವಿಭಾಗ ಉತ್ತಮವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಪ್ರಯಾಣ ಸುಗಮವಾಗಲು ಸಾಧ್ಯವಾಗುತ್ತದೆ. ಎಂದರು.