ಧರ್ಮಸ್ಥಳ ಗ್ರಾಮಾಬಿವೃದ್ದಿ ಯೋಜನೆಯಿಂದ ಜಾನಪದ ಉತ್ಸವ ಹಾಗು ಕ್ರೀಡಾಕೂಟ

Source: sonews | By Staff Correspondent | Published on 11th January 2018, 5:50 PM | State News | Don't Miss |

ಶ್ರೀನಿವಾಸಪುರ: ಯಾವುದೇ ಜಾತಿ ಮತ ಧರ್ಮ ಭೇದವೆಣಿಸದೇ ಗ್ರಾಮೀಣ ಹಾಗು ಪಟ್ಟಣದ ಕುಟುಂಬಗಳ ಶ್ರೇಯೋಭಿವೃದ್ದಿಗೆ ಕಳೆದ 3 ವರ್ಷಗಳಿಂದ ಅನೇಕ ಕಾರ್ಯಕ್ರಮಗಳನ್ನು ನಡೆಸಿ ಅವರನ್ನು ಸ್ವಾವಲಂಬನೆಯತ್ತ ನಡೆಸಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಿಣಾಭಿವೃದ್ದಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಸುರೇಶ್ ಶೆಟ್ಟಿ ರವರು ತಿಳಿಸಿದರು.
ಶ್ರೀನಿವಾಸಪುರ ಪಟ್ಟಣದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಬಿವೃದ್ದಿ ಯೋಜನೆ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ ಅಡಿಯಲ್ಲಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಜಾನಪದ ಉತ್ಸವ ಹಾಗು ಕ್ರೀಡಾಕೂಟ ಮತ್ತು ಸ್ವ-ಉದ್ಯೋಗ ತರಬೇತಿದಾರರಿಗೆ ಪ್ರಮಾಣ ಪತ್ರಗಳನ್ನು ವಿತರಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ  ಮಾತನಾಡಿ ಕೇವಲ ಅಭಿವೃದ್ದಿ ಅಥವಾ ಸಂಘಟನೆಗೆ ಮಾತ್ರ ಸೀಮಿತವಾಗಿದೆ ಸ್ವಾವಲಂಬನೆ ಬದಕು ನಡೆಸುವ ವೃತ್ತಿ ತರಬೇತಿಗಳನ್ನು ನೀಡಲಾಗುತ್ತಿದೆ ಎಂದರು.  ಜೊತೆಗೆ  ಸಾಂಸ್ಕøತಿಕವಾಗಿ ಮಹಿಳೆಯರನ್ನು ಸಂಘಟಿಸಿ ಜಾನಪದ ಸೊಗಡನ್ನು ಬಿಂಬಿಸುವ ಕಾರ್ಯಕ್ರಮಗಳಲ್ಲಿ ಇಂದಿನ ಕಾರ್ಯಕ್ರಮವಾಗಿದೆ ಎಂದರು ಅದೇ ರೀತಿ ಮಹಿಳೆಯರು ತಮಗೆ ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬೇಕೆಂದು ಹೇಳಿದರು. 
ಸಮಾಜ ಸೇವಾ ಕನ್ನಡ ಸಾಹಿತ್ಯ ವೇದಿಕೆ ಅಧ್ಯಕ್ಷ ಕೆ.ವಿ.ನಾಗರಾಜ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಬದಕಿನ ಚಿತ್ರಣ ಜೊತೆಗೆ ಮಾನವೀಯ ಸಂಬಂದಗಳನ್ನು ತಿಳಿಸಿಕೊಡುವ ಜನರ ಬಾಯಿಂದ ಬಂದ ಜನಪದ ಸಾಹಿತ್ಯ ಸಾಂಸ್ಕøತಿಕವಾಗಿ ಇಂದಿನ ಸಿನಿಮಾ ದೂರದರ್ಶನದಂತಹ ಕಾರ್ಯಕ್ರಮಗಳಿಗೆ ಸಹಕಾರಿಯಾಗಿದೆ ಎಂದರು. ಶ್ರೀ.ಕ್ಷೇ.ಧ.ಗ್ರಾ.ಯೋ. ವಿವಿಧ ಕಾರ್ಯಕ್ರಮಗಳಲ್ಲಿ ಜಾನಪದ ಸಂಸ್ಕøತಿಯನ್ನು ಬಿಂಬಿಸುವ ನಿಟ್ಟಿನಲ್ಲಿ   ಇಂದು ಮಹಿಳೆಯರಿಗೆ ಹಮ್ಮಿಕೊಂಡಿರುವುದು ಸ್ವಾಗತಾರ್ಹವಾಗಿದೆ ಎಂದರು. ಬದಕಿನ ಜಂಜಾಟದ ನಡುವೆ ಮನಸ್ಸಿಗೆ ಖುಷಿ ತರುವ ಜಾನಪದ ಸಂಪತ್ತನ್ನು ಬೆಳೆಸುವ ಅಥವಾ ಪೋಷಿಸುವ ಮನಸ್ಸುಗಳು ಬರಬೇಕಾಗಿದೆ ಎಂದರು. ಅದೇ ರೀತಿ ಸಂಘಗಳು ತಾನು ಹಾಗು ಕುಟುಂಬಗಳ ಅಭಿವೃದ್ದಿಗೆ ಮಾತ್ರ ಸೀಮಿತವಾಗದೇ ಎಳೆಯ ಮಕ್ಕಳ ಮೇಲೆ ನಡೆಸುವ ಕ್ರೌರ್ಯ, ದಬ್ಬಾಳಿಕೆ ಅತ್ಯಾಚಾರದಂತ ಪಿಡುಗಿನ ಬಗ್ಗೆ ಸಿಡಿದೇಳಬೇಕು ಇತ್ತೀಚಿಗಿನ  ವಿಜಯಯಪುರದ ವಿಧ್ಯಾರ್ಥಿನಿ ದಾನಮ್ಮ ಮೇಲೆ ನಡೆದ ಅತ್ಯಾಚಾರ ಕೊಲೆ ಮಾಡಿದ ಕಿಡಿಗೇಡಿಗಳ ವಿರುದ್ದ ಮಹಿಳೆಯರು ಸಂಘಟಿತ ದ್ವನಿಯಾಗಿ ನಿಂತಾಗ ಸಂಘಗಳ ರಚನೆಗೆ ಸಾರ್ಥಕವೆನಿಸಿಕೊಳ್ಳುತ್ತದೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ತಾಲ್ಲೂಕು ಸಮನ್ವಯಾಧಿಕಾರಿ ಶ್ಯಾಲಿನಿ, ಪುರಸಭಾ ವಲಯ ಮೇಲ್ವಿಚಾರಕ ಶೇಖರ್‍ಶೆಟ್ಟಿ, ಮಹಿಳಾ ಸಂಘದ ಒಕ್ಕೂಟಗಳ ಅಧ್ಯಕ್ಷರಾದ ನಾಗವೇಣಿರೆಡ್ಡಿ, ಉಮಾದೇವಿ, ಹೊಗಳಗೆರೆ ಸುನಂದಮ್ಮ, ಕಾರಂಗಿ ಆಂಜಮ್ಮ, ಎನ್‍ಆರ್‍ಎಲ್‍ಎಂ ಜಿಲ್ಲಾ ಸಂಚಾಲಕ ಸಿ.ಕೆ.ಶಿವಕುಮಾರ್, ವಲಯ ಮೇಲ್ವಿಚಾರಕ ವಿಶ್ವನಾಥ್, ಜಗದಾಂಬಿಕಾ ಇತರರು ಉಪಸ್ಥಿತರಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...