ಶಿರಸಿ : ನಗರದ ಶಿವಾಜಿ ಚೌಕದಲ್ಲಿ ಹಣ್ಣಿನ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಎರಡು ಲಕ್ಷ ರೂಪಾಯಿ ಮೌಲ್ಯದ ಹಣ್ಣು ಹಾಗೂ ಇತರ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಶುಕ್ರವಾರ ನಸುಕಿನಲ್ಲಿ ನಡೆದಿದೆ.
ಹಣ್ಣಿನ ಅಂಗಡಿ ಅಬ್ದುಲ್ಲ ಜಬ್ಬಾರ ಸೇರಿತ್ತು ಎನ್ನಲಾಗಿದೆ. ಅಶೋಕ್ ಜಾಧವ್ ಎಂಬುವರಿಗೆ ಸೇರಿದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಪಾರ ಪ್ರಮಾಣದ ಸೊತ್ತು ಸಹಾ ನಾಶವಾಗಿದೆ ಎರಡು ಅಗ್ನಿಶಾಮಕ ವಾಹನಗಳು ಸತತ ಎರಡರಿಂದ ಮೂರು ಗಂಟೆಗಳ ಕಾಲ ಬೆಂಕಿ ನಂದಿಸಲು ಪ್ರಯತ್ನಿಸಿದ ನಂತರ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದೆ.