ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

Source: sonews | By Staff Correspondent | Published on 15th February 2019, 6:01 PM | Coastal News | State News | Don't Miss |

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಇಂದು ಜುಮಾ ನಮಾಝಿನ ಸಂದರ್ಭ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಜುಮಾ ನಮಾಝ್ ಮೊದಲು ಹಾಗೂ ಖುತ್ಬಾದ ನಂತರ ಅವಧಿಯಲ್ಲಿ ಖತೀಬ್ ಮೌಲಾನಾ ಅಬ್ದುಲ್ ವಹಾಬ್ ಸಾಹೇಬ್ ನದ್ವಿ ಅವರು ಪುಲ್ವಾಮ ಭಯೋತ್ಪಾದಕ ದಾಳಿಯನ್ನು ಖಂಡಿಸಿ, ಯೋಧರಿಗಾಗಿ ವಿಶೇಷ ಪ್ರಾರ್ಥನೆ ನೆರವೇರಿಸಿದರು.

ದೇಶದ ರಕ್ಷಣೆಗೆ ಬೆನ್ನೆಲುಬಾಗಿ ನಿಂತಿರುವ ನಮ್ಮ ಹೆಮ್ಮೆಯ ವೀರ ಯೋಧರ ಮೇಲೆ ನಿನ್ನೆ ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ನಡೆದಿದ್ದು, 40ಕ್ಕೂ ಹೆಚ್ಚು ವೀರ ಯೋಧರು ಹುತಾತ್ಮರಾಗಿರುವುದು ಬೇಸರ ಹಾಗೂ ವಿಷಾದನೀಯ. ಈ ದುಷ್ಕೃತ್ಯ ಅತ್ಯಂತ ಖಂಡನೀಯ. ಗಂಗೊಳ್ಳಿಯ ಸಮಸ್ತ ಮುಸ್ಲಿಮರ ಪರವಾಗಿ ಈ ಘಟನೆಯನ್ನು ಖಂಡಿಸುತ್ತೇನೆ ಎಂದು ಮೌಲಾನ ಅಬ್ದುಲ್ ವಹಾಬ್ ಸಾಹಬ್ ನದ್ವಿ ತಿಳಿಸಿದರು.

ಅಗಲಿದ ವೀರ ಯೋಧರಿಗೆ ಚಿರಶಾಂತಿ ಸಿಗಲೆಂದು ಹಾಗೂ ಅವರ ಕುಟುಂಬ ವರ್ಗದವರಿಗೆ ಅವರ ಅಗಲುವಿಕೆಯ ದುಃಖವನ್ನು ನಿಭಾಯಿಸುವ ಶಕ್ತಿಯನ್ನು ಅಲ್ಲಾಹನು ಅನುಗ್ರಹಿಸಲಿ. ಮುಂದೆ ಇಂತಹ ಘಟನೆಗಳು ನಡೆಯಬಾರದು ಹಾಗೂ ನಮ್ಮ ಯೋಧರನ್ನು ಮುಂದೆ ಇಂತಹ ಘೋರ ದುರ್ಘಟನೆಗಳಿಂದ ಅಲ್ಲಾಹನು ರಕ್ಷಿಸಲಿ ಎಂದು ಅವರು ಪ್ರಾರ್ಥಿಸಿದರು.

Read These Next

ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...

ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ

ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ “ಸಹಾಯವಾಣಿ”

ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ...