ಶ್ರೀನಿವಾಸಪುರ, ಏ ೧೪: ಅಂಬೇಡ್ಕರ್ರವರು ಈ ದೇಶದ ಆಸ್ಥಿ, ಬಹು ದೊಡ್ಡ ಮಾನವತಾವಾದಿ ಇವರ ಆದರ್ಶಗಳನ್ನು ಯುವ ಜನಾಂಗ ಪಾಲಿಸಬೇಕು ಮತ್ತು ಇವರು ಯಾವುದೇ ಒಂದು ಜನಾಂಗಕ್ಕೆ ಸೀಮಿತವಲ್ಲವೆಂದು ಆರೋಗ್ಯ ಸಚಿವ ಕೆ.ಆರ್.ರಮೇಶ್ಕುಮಾರ್ ಹೇಳಿದರು.
ಪಟ್ಟಣದ ತಾಲ್ಲೂಕು ಕಛೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಏರ್ಪಡಿಸಲಾಗಿದ್ದ ಡಾ||ಬಿ.ಆರ್.ಅಂಬೇಡ್ಕರ್ರವರ 126ನೇ ಜನ್ಮದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಸಮಾಜದ ಎಲ್ಲಾ ವರ್ಗದ ಏಳಿಗೆಗಾಗಿ ಅಂಬೇಡ್ಕರ್ರವರು ಶ್ರಮಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರು ಮುಖ್ಯವಾಹಿನಿಗೆ ಬರಬೇಕು, ಅಂಬೇಡ್ಕರ್ರವರು ಸಂವಿಧಾನದ ರಚನೆಯಲ್ಲಿ ಭಾವನಾತ್ಮಕ ವಿಚಾರಗಳನ್ನು ಮಂಡಿಸಿದ್ದಾರಲ್ಲದೆ ಆಚರಣೆಯ ವಿಧಿವಿಧಾನಗಳನ್ನು ಕುಲಂಕೂಷವಾಗಿ ವಿವರಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಅಂಬೇಡ್ಕರ್ ಭಾವಚಿತ್ರವನ್ನು ಪಟ್ಟಣದ ಎಂ.ಜಿ.ರಸ್ತೆಯಲ್ಲಿ ಡೊಳ್ಳು ಕುಣ ತ, ವೀರಗಾಸೆ ಹಾಗೂ ಮಹಿಳೆಯರ ತಮಟೆ ವಾದ್ಯಗಳೊಂದಿಗೆ ಮೆರವಣಿಗೆಯನ್ನು ನೆರವೇರಿಸಲಾಯಿತು. ಮೆರವಣ ಗೆಗೆ ತಹಶಿಲ್ದಾರ್ ವೈ.ರವಿರವರು ಚಾಲನೆಯನ್ನು ನೀಡಿದರು. ಮತ್ತು ಆವರಣದಲ್ಲಿರುವ ಡಾ||ಅಂಬೇಡ್ಕರ್ವರ ಪುತ್ಥಳಿಗೆ ಮಾಲಾರ್ಪಣೆಯನ್ನು ನೆರವೇರಿಸಿದರು.
ಪ್ರತಿಭಾವಂತ ಎಸ್ಎಸ್ಎಲ್ಸಿ ವಿಧ್ಯಾರ್ಥಿಗಳಿಗೆ ಸನ್ಮಾನ ಹಾಗೂ ತಹಶೀಲ್ದಾರ್ ವೈ.ರವಿ, ಪುರಸಭೆ ಮುಖ್ಯಾಧಿಕಾರಿ ವಿ.ಶ್ರೀಧರ್, ಪುರಸಭೆ ಅಧ್ಯಕ್ಷೆ ಅರುಣಾ ಜಗದೀಶ್ರವರುಗಳಿಗೆ ಸನ್ಮಾನವನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮಾವು ಮಂಡಳಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಅಶೋಕ್, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಸದಸ್ಯ ಗೋವಿಂದಸ್ವಾಮಿ, ತಾ||ಪಂ||ಅಧ್ಯಕ್ಷೆ ಸುಗುಣಮ್ಮ, ಉಪಾಧ್ಯಕ್ಷೆ ಮಂಜುಳಾ, ಪುರಸಭೆ ಅಧ್ಯಕ್ಷೆ ಅರುಣಾ ಜಗದೀಶ್, ಮುಖ್ಯಾಧಿಕಾರಿ ವಿ.ಶ್ರೀಧರ್, ಮುಖಂಡರಾದ ರಾಮಾಂಜಮ್ಮ, ಮಂಜಲನಗರ ನಾರಾಯಣಸ್ವಾಮಿ, ವೆಂಕಟೇಶ್, ಈರಪ್ಪ, ತಿಮ್ಮಯ್ಯ, ಸೀತಪ್ಪ, ಪಾಪಣ್ಣ, ವಿವಿಧ ಇಲಾಖೆಗಳ ಅಧಿಕಾರಿಗಳು ಮುಂತಾದವರು ಭಾಗವಹಿಸಿದ್ದರು.