ಶ್ರೀನಿವಾಸಪುರದ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ರಾಜ್ಯ ಎಪಿಎಂಸಿ ನಿರ್ದೇಶಕ ಎನ್.ರಾಜೇಂದ್ರ ಪ್ರಸಾದ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಕೃಷ್ಣಪ್ಪ, ಜಗನ್ನಾಥ್, ಸದಸ್ಯರಾದ ರೂಪಾ, ಅಥಾವುಲ್ಲಾ ಖಾನ್ ಇದ್ದರು.
ಶ್ರೀನಿವಾಸಪುರ ತಾಲ್ಲೂಕಿನ ಮಣಿಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿ ಶ್ರೀನಾಥ್ ಡಾ.ಬಿ.ಆರ್.ಅಂಬೇಡ್ಕರ್ ಅವರ ವೇಷ ಧರಿಸಿ ಗಮನ ಸೆಳೆದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿನಿ ಎಂ.ಗಾಯತ್ರಿ ಶಾಲೆಗೆ ಕ್ರೀಡಾ ಸಾಮಗ್ರಿ ನೀಡಿದರು.
ಮುಖ್ಯ ಶಿಕ್ಷಕಿ ಎಸ್.ವೆಂಕಟಲಕ್ಷ್ಮಮ್ಮ , ಸಿಆರ್ಪಿ ಜಿ.ವಿ.ಚಂದ್ರಪ್ಪ ಇದ್ದರು.