ನಮ್ಮನ್ನು ಬಿಡಿಸಿಕೊಳ್ಳಿ ಸುಷ್ಮಾರವರೇ,,,,, ಗೃಹಬಂಧನದಲ್ಲಿರುವ ಮೀನುಗಾರರಿಂದ ಮನವಿ

Source: sonews | By Staff Correspondent | Published on 12th November 2018, 3:40 PM | Coastal News | State News | National News | Gulf News | Special Report | Don't Miss |


•    ಅಕ್ರಮ ಗಡಿ ಪ್ರವೇಶ ಆರೋಪದಡಿ ಬಂಧಿತರಿಂದ ಉ.ಕ.ಜಿಲ್ಲೆಯ ಮೀನುಗಾರರಿಂದ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ರಿಗೆ ವಿಡಿಯೋ ಮೂಲಕ ಮನವಿ

ಭಟ್ಕಳ: ಅನ್ನ ಅರಸಿ ದೂರದ ದುಬೈಗೆ ಪ್ರಯಾಣ ಬೆಳಿಸಿದ್ದ ಉತ್ತರಕನ್ನಡ ಜಿಲ್ಲೆಯ ಭಟ್ಕಳ, ಕುಮಟಾ ಹೊನ್ನಾವರ ತಾಲೂಕಿನ ಸುಮಾರು 18 ಮಂದಿ ಮೀನುಗಾರರು ಅಕ್ರಮ ಗಡಿ ಪ್ರವೇಶದ ಆರೋಪದಡಿ ಕಳೆದ ನಾಲ್ಕು ತಿಂಗಳಿಂದ ಇರಾನ್ ಗಡಿಯ ಸಮುದ್ರದ ಬೋಟೊಂದರಲ್ಲಿ ಗೃಹಬಂಧನಕ್ಕೊಳಕಾಗಿ ಮಾನಸಿಕ ಚಿತ್ರಹಿಂಸೆ ಅನುಭವಿಸುತ್ತಿದ್ದು ತಮ್ಮ ಬಿಡುಗಡೆಗಾಗಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ರ  ಮೊರೆ ಹೋಗಿದ್ದು ವಿಡೀಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ. 

ಭಟ್ಕಳ ತಾಲೂಕಿನ ಹೆಬಳೆ ಗ್ರಾ.ಪಂ. ವ್ಯಾಪ್ತಿಯ ತೆಂಗಿನಗುಂಡಿ ಗ್ರಾಮದ ನಿವಾಸಿ ಉಸ್ಮಾನ್ ಇಸ್ಹಾಖ್ ಬೊಂಬಾಯಿಕರ್ ಎನ್ನುವವರು ತಮ್ಮ ಸಹವರ್ತಿಗಳೊಂದಿಗೆ ಸೇರಿ ಬೋಟ್ ನಲ್ಲಿಯೇ ವಿಡಿಯೋ ಚಿತ್ರಿಕರಣ ಮಾಡಿದ್ದು ಅಕ್ಟೋಬರ್ 11 ರಂದು ನಮ್ಮನ್ನು ಬಿಡುಗಡೆಗೊಳಿಸಿವಂತೆ ಕೋರಿ ಭಟ್ಕಳದ ಮಜ್ಲಿಸೆ ಇಸ್ಲಾಹ್-ವ-ತಂಝೀ ಸಂಸ್ಥೆಯು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ರಿಗೆ ಮನವಿ ಮಾಡಿಕೊಂಡಿದ್ದು ಅದರ ಪ್ರಯೋಜನವಾಗದೆ ಕಳೆದ ನಾಲ್ಕು ತಿಂಗಳಿಂದಲೂ ನಾವು ಗೃಹಬಂಧನದಲ್ಲಿದ್ದೇವೆ. ಮಾನ್ಯ ಸಚಿವರು ಹಲವು ಬಾರಿ ತೊಂದರೆಗೆ ಸಿಲುಕಿದವರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂಧಿಸಿದ್ದಾರೆ. ಈಗ ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ನಮ್ಮನ್ನು ಕಷ್ಟದಿಂದ ಪಾರು ಮಡುತ್ತಾರೆಂಬ ವಿಶ್ವಾಸ ನಮಗಿದೆ ಎಂದು ವಿಡೀಯೋ ಮೂಲಕ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.   

ದುಬೈಯಲ್ಲಿ ಮೀನುಗಾರಿಕೆಯೇ ಅವರ ಪ್ರಮುಖ ಕಸುಬಾಗಿದ್ದು ಅಲ್ಲಿಯ ನಿವಾಸಿಗಳ ಪ್ರಯೋಜಕತ್ವದಲ್ಲಿ ತಿಂಗಳುಗಟ್ಟಲೆ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದಾರೆ. ಆದರೆ 4 ತಿಂಗಳ ಹಿಂದೆ ಮೀನುಗಾರಿಕೆಗೆ ತೆರಳಿದ್ದ ತಂಡವನ್ನು ಅರಬ್ಬಿ ಸಮುದ್ರದ ದುಬೈ ಗಡಿಯಲ್ಲಿ ಇರಾನಿ ನೌಕಪಡೆ ಅಧಿಕಾರಿಗಳು ಅಕ್ರಮ ಗಡಿಪ್ರವೇಶ ಮಾಡಿದ್ದಾರೆಂದು ಆರೋಪಿಸಿ ಗೃಹಬಂಧನದಲ್ಲಿರಿಸಿದೆ.

ರಾಜ್ಯ ಸರ್ಕಾರ ಅವರನ್ನು ಬಿಡುಗಡೆಗೊಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕೆಂದು ತಂಝೀಮ್ ಸಂಸ್ಥೆ ಒತ್ತಾಯಿಸಿದ್ದು, ಮೀನುಗಾರರನ್ನು ಸುರಕ್ಷಿತವಾಗಿ ಭಾರತಕ್ಕೆ ಮರಳಿಸುವಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರಬೇಕೆಂದು ವಿದೇಶಾಂಗ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬಂಧನಕ್ಕೊಳಗಾದವರು ಭಾರತ ಸರಕಾರದ ಸಹಾಯ ಯಾಚಿಸುತ್ತಿದ್ದು, ತಮ್ಮ ಬಗ್ಗೆ ಕೇಂದ್ರ ಸರಕಾರ ಗಮನ ಹರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. 

ಬಂಧಿತರಲ್ಲಿ ಭಟ್ಕಳದ ಖಲೀಲ್ ಇಸ್ಮಾಯಿಲ್ ಪಾನಿಬುಡೋ, ಉಸ್ಮಾನ್ ಇಸ್ಹಾಖ್ ಪಾನಿಬುಡೊ, ಮುಹಮ್ಮದ್ ಷರೀಫ್ ಬಾಪು ಸಾಬ್, ಅಬ್ದುಲ್ಲಾ  ಸುಲೈಮಾನ್ ಡಾಂಗಿ, ಅತೀಖ್ ಸುಲೈಮಾನ್ ಘಾರು ಜಾಫರ್ ಇಬ್ರಾಹಿಮ್ ತಡ್ಲಿಕರ್, ಹೊನ್ನಾವರ ತಾಲುಕಿ ಮಂಕಿಯ ನಿವಾಸಿ ಮತ್ಲೂಬ್ ಮಕ್ದೂಮ್ ಸಾರಂಗ್, ಕುವiಟಾ ತಾಲೂಕಿನ ವನ್ನಳ್ಳಿ ಗ್ರಾಮದ ಇಬ್ರಾಹೀಮ್ ಮುಲ್ಲಾ ಫಕಿರಾ, ಮುಹಮ್ಮದ್ ಅನ್ಸಾರ್ ಬಾಪು, ನಯೀಮ್ ಹಸನ್ ಭಾಂಡಿ, ಯಾಖೂಬ್ ಇಸ್ಮಾಯಿಲ್ ಶಮಾಲಿ, ಅಜ್ಮಲ್ ಮೂಸಾ ಶಮಾಲಿ,  ಹುಬ್ಬನಗೇರಿಯ ನಿವಾಸಿ ಇಲ್ಯಾಸ್ ಅಂಬಾಡಿ, ಆಗಕರ್‍ಕೋಣ ನಿವಾಸಿ ಖಾಸಿಮ್ ಶೇಖ್, ಬೆಟ್ಕುಳಿ ನಿವಾಸಿ ಇಲ್ಯಾಸ್ ಘಾರು, ಕುಮಟಾ ನಿವಾಸಿ ಇಬ್ರಾಹಿಂ ಆಹ್ಮದ್ ಹೂಡೆಕರ್, ಉಡುಪಿ ಜಿಲ್ಲೆಯ ಶಿರೂರು ನಿವಾಸಿ ಅಬ್ದುಲ್ ಮುಹಮ್ಮದ್ ಹುಸೈನ್ ಸೇರಿದ್ದಾರೆ. 

ಈ ಕುರಿತಂತೆ ಸಾಹಿಲ್ ಆನ್ಲೈನ್ ನೊಂದಿಗೆ ಮಾತನಾಡಿದ ಗೃಹಬಂಧನದಲ್ಲಿರುವ ಉಸ್ಮಾನ್ ಬೊಂಬಾಯಿಕರ್ ರ ತಾಯಿ ಬೀಬಿ ಆಯಿಶಾ, ದುಡಿದು ಕುಟುಂಬದ ಹೊರೆಯನ್ನು ಹೊತ್ತ ಮಗನು ಕಳೆದ ನಾಲ್ಕು ತಿಂಗಳಿಂದ ತಾನು ಮಾಡದ ತಪ್ಪಿಗಾಗಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ. ನನ್ನ ಪತಿ ತೀರಿಕೊಂಡ ಬಳಿಕ ಕುಟುಂಬವನ್ನು ಸಾಕುವ ಹೊಣೆಗಾರಿಕೆ ಹೊತ್ತು ದುಬೈಗೆ ಹೋಗಿರುವ ಉಸ್ಮಾನ್‍ಗೆ ಈ ಸ್ಥಿತಿ ಬಂದೊದಗಿರುವುದು ನಮ್ಮ ಕುಟುಂಬವನ್ನು ಬೀದಿಗೆ ತಂದು ನಿಲ್ಲಿಸಿದೆ. ಪತ್ನಿ, ಇಬ್ಬರು ಮಕ್ಕಳು ಹಾಗೂ ಇಬ್ಬರು ಸಹೋದರರು ಸೇರಿ 6 ಮಂದಿ ಇರುವ ಕುಟುಂಬವನ್ನು ಕಳೆದ ನಾಲ್ಕು ತಿಂಗಳಿಂದ ಒಂದು ನಯಪೈಸೆ ಇಲ್ಲದೆ ಬದುಕು ಸಾಕುವಂತಾಗಿದೆ. ಮೊದಲೆ ಬಡತನದಲ್ಲಿ ದಿನದೂಡುತ್ತಿರುವ ನಮಗೆ ಈಗ ನಾಲ್ಕು ತಿಂಗಳಿಂದ ಆತ ನಮಗೆ ಒಂದು ಪೈಸೆಯು ಕಳುಹಿಸಿಲ್ಲ. ಹೀಗಾದರೆ ನಮ್ಮ ಗತಿಯೇನು ಎಂದು ಕಣ್ಣೀರು ಸುರಿಸಿದ್ದಾರೆ. 

Read These Next

ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...

ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ

ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ “ಸಹಾಯವಾಣಿ”

ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ...

ಸನ್ನಿ ಅಣೆಕಟ್ಟು ನಿರ್ಮಾಣ ಗುತ್ತಿಗೆಯ ಬೆನ್ನಲ್ಲೇ; 45 ಕೋಟಿ ರೂ.ಗಳ ಚು.ಬಾಂಡ್ ಖರೀದಿಸಿದ್ದ ಬಿಜೆಪಿ ಸಂಸದನ ಕಂಪೆನಿ

ಆಂಧ್ರಪ್ರದೇಶದ ಬಿಜೆಪಿ ರಾಜ್ಯಸಭಾ ಸದಸ್ಯ ಸಿ.ಎಂ.ರಮೇಶ್ ಸ್ಥಾಪಿಸಿದ್ದ ರಿತ್ವಿಕ್ ಪ್ರೊಜೆಕ್ಟ್ ಪ್ರೈ.ಲಿ.(ಆರ್;ಪಿಪಿಎಲ್) ಹಿಮಾಚಲ ...

ಹಾಸ್ಟೆಲ್‌ಗೆ ನುಗ್ಗಿ ನಮಾಝ್ ನಿರತರ ಮೇಲೆ ಗೂಂಡಾಗಳಿಂದ ಹಲೆ; ವಿದೇಶಿ ವಿದ್ಯಾರ್ಥಿಗಳಿಗೆ ಗಾಯ

ಇಲ್ಲಿನ ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ರಮಝಾನ್ ಪ್ರಯುಕ್ತ ರಾತ್ರಿ ಹೊತ್ತು ನಮಾಝ್ ಮಾಡುತ್ತಿದ್ದ ವಿದೇಶಿ ...

ಲೋಕಸಭಾ ಚುನಾವಣೆ ಘೋಷಣೆ; ಎಪ್ರಿಲ್ 19ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ಮತದಾನ; ಜೂ.4ರಂದು ಫಲಿತಾಂಶ ಪ್ರಕಟ

ದೇಶದ ಜನತೆ ಕಾತರದಿಂದ ಕಾಯುತ್ತಿದ್ದ 18ನೇ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆಗೆ ಮುಂದುವರಿದ ಆಕ್ರೋಶ; 17 ದೇಶಗಳ ಖಂಡನೆ; ಗಲ್ಫ್ ಸಹಕಾರ ಮಂಡಳಿಯಿಂದಲೂ ಆಕ್ಷೇಪ

ತಾನು ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಒತ್ತಿ ಹೇಳುವ ಮೂಲಕ ವಿವಿಧ ದೇಶಗಳಲ್ಲಿ ಭುಗಿಲೆದ್ದಿರುವ ಕ್ರೋಧದ ಅಲೆಯನ್ನು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...