ಕರವೇ ಸ್ವಾಭಿಮಾನಿ ಬಣದ ಅಧ್ಯಕ್ಷನ ಮೇಲೆ ಆರ್.ಟಿ.ಓ. ಅಧಿಕಾರಿಯಿಂದ ಹಲೆ; ದೂರು ದಾಖಲು

Source: sonews | By Staff Correspondent | Published on 26th October 2018, 5:59 PM | Coastal News | State News | Incidents | Don't Miss |

ಭಟ್ಕಳ: ನವೆಂಬರ 1 ರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ತಾಲೂಕಾ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಕಾರ್ಯಕ್ರಮ ಆಯೋಜನೆಯ ಬ್ಯಾನರ್ ಅಳವಡಿಸುತ್ತಿದ್ದಾಗ ಏಕಾಎಕಿ ಬಂದ ಆರ್.ಟಿ.ಒ ಅಧಿಕಾರಿ ಬೈಕ್ ಅಡ್ಡಗಟ್ಟಿ ಸಂಘದ ಅಧ್ಯಕ್ಷನ ಮೇಲೆ ಹಲ್ಲೆಗೈದ ಘಟನೆ ಗುರುವಾರ ಸಂಜೆ ಇಲ್ಲಿನ ಹಳೆ ಬಸ್ ನಿಲ್ದಾಣದ ಬಳಿ ನಡೆದಿದ್ದು ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈಶ್ವರ ನಾಯ್ಕ ಬೈಲುರು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ತಾಲೂಕಾ ಘಟಕದ ಅಧ್ಯಕ್ಷ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಗುರುವಾರದಂದು ಸಂಜೆ 6.30ರ ಸುಮಾರಿಗೆ ಸಂಘದ ತಾಲೂಕಾಧ್ಯಕ್ಷ ಹಾಗೂ ಸಂಘದ ಸದಸ್ಯರು ನವೆಂಬರ 1 ರ ಕಾರ್ಯಕ್ರಮದ ಬ್ಯಾನರ ಹಾಕಲು ಬೈಕಿನಲ್ಲಿ ಹಳೆ ಬಸ ನಿಲ್ದಾಣದ ಕಡೆಗೆ ಹೋಗುತ್ತಿದ್ದ ವೇಳೆ ರಿಕ್ಷಾ ಚಾಲಕ ಮಾಲಕರ ಸಂಘದ ಗಣೇಶೋತ್ಸವ ಸಮಿತಿ ಸಮೀಪ ಬೈಕನ್ನು ರಸ್ತೆ ಬಳಿ ಬಂದು ತಡೆದು ಆರ್.ಟಿ.ಓ.ಅಧಿಕಾರಿ ಸಿಬ್ಬಂದಿಯನ್ನು ಪ್ರಶ್ನಿಸಿದ್ದಕ್ಕೆ ಆರ್.ಟಿ.ಓ.ಅಧಿಕಾರಿಗಳು ಕರೆಯುತ್ತಿದ್ದಾರೆ ಎಂದು ತಿಳಿಸಿದ್ದಾನೆ. ನಂತರ ಅಧಿಕಾರಿ ಎಲ್.ಪಿ.ನಾಯ್ಕ ಬಳಿ ತಾಲೂಕಾಧ್ಯಕ್ಷ ಈಶ್ವರ ನಾಯ್ಕ ತೆರಳಿ ಏನೆಂದು ವಿಚಾರಿಸಿದ್ದಾರೆ. ಆದರೆ ಅಧಿಕಾರಿ ಅವಾಚ್ಯ ಶಬ್ದದಿಂದ ಬೈಯ್ದು ಏಕಾಏಕಿ ನನ್ನ ಶರ್ಟ ಹಿಡಿದು ಎದೆಯ ಮೇಲೆ ಬಲವಾಗಿ ಹೊಡೆದು ಹಲ್ಲೆ ನಡೆಸಿದ್ದಾರೆಂದು ಈಶ್ವರ ನಾಯ್ಕ ದೂರಿನಲ್ಲಿ ತಿಳಿಸಿದ್ದಾರೆ.

ಹಲ್ಲೆ ನಡೆಸಿದ ಬಗ್ಗೆ ಪ್ರಶ್ನಿಸಿದ್ದಕ್ಕೆ ಬೈಕ್ ದಾಖಲೆ ಪತ್ರವನ್ನು ನೀಡುವಂತೆ ತಿಳಿಸಿದ್ದು ಈಶ್ವರ ನಾಯ್ಕ ತಮ್ಮ ಮೊಬೈಲನಲ್ಲಿನ ದಾಖಲೆಯನ್ನು ತೋರಿಸಿದ್ದು ಹೊಸ ಬೈಕ ಆದ ಹಿನ್ನೆಲೆ ರಿಜಿಸ್ಟರೇಶನ ಸಂಬಂದಪಟ್ಟ ಎಲ್ಲಾ ದಾಖಲೆ ಪತ್ರವನ್ನು ಏಜೆಂಟರಿಗೆ ನೀಡಿದ್ದು ಎರಡು ದಿನದ ಬಳಿಕ ವಾಹನ ರಿಜಿಸ್ಟರೇಶನ ಆಗಲಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ನನ್ನ ಬಳಿ 3000 ರೂ. ಹಣ ನೀಡು ಇಲ್ಲದಿದ್ದರೆ 2000 ರೂ.ಲಂಚ ನೀಡುವಂತೆ ಕೇಳಿದ್ದಾರೆಂದು ಆರೋಪಿಸಿದ್ದಾರೆ. ಹಾಗೂ ನಿಮ್ಮಂತಹ ಸಾಕಷ್ಟು ಸಂಘಟನೆಯನ್ನು ನಾನು ನೋಡಿದ್ದು ಕನ್ನಡ ಪರ ಸಂಘಟನೆ ಅವಶ್ಯಕತೆ ಇಲ್ಲ ಎಂದು ಸಂಘಟನೆಯ ಬಗ್ಗೆ ನಿಂದಿಸಿದ್ದಾರೆಂದು ಆರೋಪಿಸಿದ್ದಾರೆ. 

ರಭಸದಿಂದ ಅಧಿಕಾರಿ ಎದೆಗೆ ಹೊಡೆದ ಹಿನ್ನೆಲೆ ತಲೆಸುತ್ತು ಬಂದಿದ್ದು ಸಂಘಟನೆ ಸದಸ್ಯರು ಇಲ್ಲಿನ ತಾಲೂಕಾಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದು ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಹಲ್ಲೆಗೊಳಗಾದ ಈಶ್ವರ ನಾಯ್ಕ ದೂರು ಸಲ್ಲಿಸಿದ್ದು, ಠಾಣಾ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಲ್ಲೆಗೊಳಗಾದ ಈಶ್ವರ ನಾಯ್ಕ ದ್ವಿಚಕ್ರ ವಾಹನವನ್ನು ಆರ.ಟಿ.ಓ. ಅಧಿಕಾರಿಯೂ ಜಪ್ತಿ ಮಾಡಿ ಪೊಲೀಸ ವಶಕ್ಕೆ ನೀಡಿದ್ದಾರೆ. 

ಈ ಕುರಿತು ಮಾತನಾಡಿದ ಈಶ್ವರ ನಾಯ್ಕ 'ಓರ್ವ ಸರಕಾರಿ ಅಧಿಕಾರಿಯಾಗಿ ಸರಕಾರದಡಿಯಲ್ಲಿ ಕೆಲಸ ಮಾಡುವ ಇಂತಹ ವರ್ತನೆ ಖಂಡನೀಯ. ಅಧಿಕಾರÀ ದರ್ಪದಿಂದ ರೋಸಿಹೋಗಿದ್ದು, ಅಮಾಯಕ ಜನರಿಗೆ ತೊಂದರೆ ನೀಡುತ್ತಿದ್ದಾರೆ. ಅನಾವಶ್ಯಕ ಹಲ್ಲೆ ಮಾಡಿರುವ ಅಧಿಕಾರಿಯ ಮೇಲೆಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ’, ಎಂದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...