ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆ ಕುಸಿದು ಬಿದ್ದ ಸಾವು
ಮುಂಡಗೋಡ : ಸಿಆಯ್ಟಿಯು ಸಂಯೋಜಿತ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅಂಗನವಾಡಿ ಸಹಾಯಕಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮುಂಡಗೋಡ ತಾಲೂಕಿನ ಶಿಡ್ಲಗುಂಡಿ ನಿವಾಸಿ ಶಾಂತಾ ಬಸವಣೇಪ್ಪ ಚಕ್ರಸಾಲಿ(57) ಮೃತಪಟ್ಟ ಅಂಗನವಾಡಿ ಸಹಾಯಕಿಯಾಗಿದ್ದಾರೆ,
ಮಂಗಳವಾರ ಅಂಗವನಾಡಿ ಕಾರ್ಯಕರ್ತೆಯರು ಹಾಗೂ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ನಲ್ಲಿ ಭಾಗವಹಿಸಿದ್ದ ಅವರು ಪ್ರತಿಭಟನೆಯ ಮೆರವಣಿಗೆ ವೇಳೆಯಲ್ಲಿ ಪಟ್ಟಣದ ತಾಲೂಕ ಪಂಚಾಯತ್ ಕಚೇರಿ ಹತ್ತಿರ ತಲೆ ಸುತ್ತುಬಂದು ವಾಂತಿ ಮಾಡಿಕೊಂಡು ಕುಸಿದು ಬಿದ್ದಿದ್ದಾರೆ ತಕ್ಷಣ ಹತ್ತಿರದ ಸರಕಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಈ ಕುರಿತು ಮುಂಡಗೋಡ ಪೊಲೀಸ ಠಾಣೆ ಪ್ರಕರಣದಾಖಲಾಗಿದೆ.