ಕಾಲೇಜು ಮೈದಾನ ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಣೆ

Source: sonews | By Staff Correspondent | Published on 2nd October 2018, 5:30 PM | Coastal News | Don't Miss |

ಭಟ್ಕಳ: ಇಲ್ಲಿನ ಸಾಗರ ರಸ್ತೆಯ ದಿ ನ್ಯೂ ಇಂಗ್ಲಿಷ್ ಪಿಯು ಕಾಲೇಜ್ ನ ವಿದ್ಯಾರ್ಥಿ ಹಾಗೂ ಉಪನ್ಯಾಸಕ ವರ್ಗ ಕಾಲೇಜು ಮೈದಾನ ಸ್ವಚ್ಛಗೊಳಿಸುವುದರ ಮೂಲಕ ಗಾಂಧಿ ಜಯಂತಿಯನ್ನು ಆಚರಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಉಪನ್ಯಾಸಕ ರಾಮಚಂದ್ರ ಭಟ್ ಸತ್ಯ, ಅಹಿಂಸೆ ಮತ್ತು ತ್ಯಾಗ ಗಾಂಧೀಜಿ ಅವರ ಅಸ್ತ್ರವಾಗಿತ್ತು, ಅವರು ಪ್ರತಿಪಾದಿಸಿದ  ಮಾನವತಾವಾದ ಮತ್ತು ಸಹಿಷ್ಣುತೆ ಮನುಕುಲಕ್ಕೆ ಮಾದರಿಯಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ವಿರೇಂದ್ರ ಶ್ಯಾನಭಾಗ ಮಾತನಾಡಿ ಗಾಂಧೀಜಿಯ ತತ್ವಗಳು ಇಂದಿಗೂ ಪ್ರಸ್ತುತ ಎನ್ನುವುದಕ್ಕೆ ಸ್ವಚ್ಛ ಭಾರತ ಕಾರ್ಯಕ್ರಮ ಒಂದು ಒಳ್ಳೆಯ ನಿದರ್ಶನವಾಗಿದೆ ಎಂದರು. 

ಕಾರ್ಯಕ್ರಮದ ಮಹಾವಿದ್ಯಾಲಯದ ಕ್ರೀಡಾ ಮತ್ತು ಸಾಂಸ್ಕøತಿಕ ಸಂಯೋಜಕ ಲೋಲಿಟಾ ರೊಡ್ರಿಗಸ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ರಂಜಿತಾ, ವಾಸಂತಿ, ಸುನೈನಾ ಮತ್ತು ನಾಗರತ್ನ ಗಾಂಧೀಜಿಯ ಕುರಿತು ಮಾತನಾಡಿದರು. ವಾಣಿಶ್ರೀ ಸಂಗಡಿಗರು ಪ್ರಾರ್ಥಿಸಿದರು, ವೈಭವಿ ಕಾಮತ್ ಸ್ವಾಗತಿಸಿದರು, ಐಶ್ವರ್ಯ ಕಾಮತ್ ವಂದಿಸಿದರು, ಯೋಗೇಶ ಪೈ ನಿರೂಪಿಸಿದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...