ಹೊಸದಿಲ್ಲಿ: ನ್ಯಾಯಾಂಗ ಪ್ರಕ್ರಿಯೆ ಮುಗಿದ ಬಳಿಕವೇ ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಯಾವುದೇ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎಎನ್ ಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ವಕೀಲರು ಅಡ್ಡಿಪಡಿಸುತ್ತಿರುವುದರಿಂದ ನ್ಯಾಯಾಂಗ ಪ್ರಕ್ರಿಯೆ ತಡವಾಗಿದೆ ಎಂದಿದ್ದಾರೆ.
“ಸಂವಿಧಾನದ ವ್ಯಾಪ್ತಿಯೊಳಗೆ ಬರುವಂತೆ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ನಾವು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ ಎಂದವರು ರಾಮ ಮಂದಿರ ನಿರ್ಮಾಣ ಕುರಿತಾದ ಪ್ರಶ್ನೆಗೆ ಉತ್ತರಿಸಿದರು.