ಸಮುದ್ರ ಪಾಲಾಗುತ್ತಿದ್ದವರನ್ನು ರಕ್ಷಿಸಿದ ಲೈಫ್ ಗಾಡ್ರ್ಸ್

Source: sonews | By Staff Correspondent | Published on 15th December 2018, 6:17 PM | Coastal News | Don't Miss |

ಭಟ್ಕಳ: ಸಮುದ್ರದಲ್ಲಿ ಈಜಾಡುತ್ತಿದ್ದಾಗ ನೀರುಪಾಲಾಗುತ್ತಿದ್ದ ವಿದ್ಯಾರ್ಥಿಗಳನ್ನು ಜೀವರಕ್ಷಕ ಸಿಬ್ಬಂಧಿಗಳು ರಕ್ಷಿಸಿ ಅವರನ್ನು ಪ್ರಾಣಾಪಾಯದಿಂದ ಪಾರು ಮಾಡಿರುವ ಘಟನೆ  ವಿಶ್ವವಿಖ್ಯಾತ ಮುರುಡೇಶ್ವರ ಸಮುದ್ರ ಕಿನಾರೆಯಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಸಕೋಟೆ ಕೆಂಚಾಂಬ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದು ಶುಕ್ರವಾರ ಸಂಜೆ ಸಮುದ್ರದಲ್ಲಿ ಈಜುತ್ತಿದ್ದ ಪ್ರಜ್ವಲ್ ಸುರೇಶ (17), ಪ್ರಜ್ವಲ್ ಶ್ವೇನಾ(16) ಹಾಗೂ ಉಲ್ಲಾಸ್ ಶ್ರೀನಿವಾಸ(16) ಎಂಬ ವಿದ್ಯಾರ್ಥಿಗಳು ಸಮುದ್ರಪಾಲಾಗುತ್ತಿರುವುದನ್ನು ಕಂಡ ಲೈಫ್ ಗಾರ್ಡ್ ಸಿಬ್ಬಂಧಿಗಳಾದ ಶಂಕರ್ ದೇವಾಡಿಗ ಹಾಗೂ ಶಶಿಧರ್ ನಾಯ್ಕ ಎಂಬುವವರು ತಮ್ಮ ಜೀವದ ಹಂಗು ತೊರೆದು ಸಮುದ್ರಕ್ಕಿಳಿದು ಮೂವರನ್ನು ರಕ್ಷಿಸಿದ್ದಾರೆ. 

ಈ ಸಂದರ್ಭದಲ್ಲಿ ಮಾತನಾಡಿದ ಲೈಫ್ ಗಾರ್ಡ್ ಶಶಿಧರ್ ಮೂವರು ವಿದ್ಯಾರ್ಥಿಗಳು ಸಮುದ್ರದಲೆಗೆ ಸಿಲುಕಿಕೊಂಡಿದ್ದರು. ಅಲ್ಲದೆ ಅವರು ಸಮುದ್ರದ ಆಳಕ್ಕೆ ಹೋಗಿದ್ದರು. ದೇವರ ದಯದಿಂದ ನಾವು ಅವರನ್ನು ರಕ್ಷಿಸಿದ್ದೇವೆ ಎಂದು ತಿಳಿಸಿದ್ದಾರೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...